ಮೈಸೂರು: ಟಿಪ್ಪು ನಿಜಕನಸುಗಳು ಹೆಸರಿನಲ್ಲಿ ತನ್ನ ಸುಳ್ಳು ಅಜೆಂಡಾ ಹೇರಲು ಹೊರಟಿರುವ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರನ್ನು ಕೂಡಲೇ ಬಂಧಿಸಿ, ಟಿಪ್ಪು ನಿಜಕನಸುಗಳು ನಾಟಕ ಕೃತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವ ಜತೆಗೆ ನಾಟಕ ಪ್ರದರ್ಶನವನ್ನೂ ತಡೆಹಿಡಿಯಬೇಕು ಎಂದು ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್ ಒತ್ತಾಯಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರ ಕ್ಷೇಮ ಕಾಪಾಡುವ ಜತೆಗೆ ಸುಭಿಕ್ಷ ನೆಲೆಸಲು ಸರ್ಕಾರ ಮುಂದಾಗಬೇಕು. ಆದರೆ, ಚುನಾವಣೆಯಲ್ಲಿ ಜನರಿಗೆ ಮುಖ ತೋರಿಸಲಾಗದ ಬಿಜೆಪಿ ನೆಗಟಿವ್ ರಾಜಕೀಯ ಮಾಡುತ್ತಿದೆ ಎಂದು ದೂರಿದರು.
ಟಿಪ್ಪು ಪತ್ರಿಮೆ ಸ್ಥಾಪನೆ ಹೇಳಿಕೆ ವಿಚಾರವಾಗಿ ಬಜರಂಗದಳದ ಸಕಲೇಶಪುರ ರಘು, ಮೈಸೂರಿನ ಬಿಜೆಪಿ ಮುಖಂಡ ಗಿರಿಧರ್ ಅವರು ತನ್ವೀರ್ ಸೇಠ್ ಅವರನ್ನು ಸಂಹಾರ ಮಾಡಬೇಕು ಎಂದು ಹೇಳಿಕೆ ನೀಡಿರುವುದು ಖಂಡ ನೀಯ. ಇವರಿಬ್ಬರ ವಿರುದ್ಧ ಅಲ್ಲಿನ ಜಿಲ್ಲಾಡಳಿತಗಳು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ತಮ್ಮ ಪಕ್ಷದ ಶಾಸಕ, ಮಾಜಿ ಸಚಿವರೊಬ್ಬರಿಗೆ ಕೊಲೆ ಬೆದರಿಕೆ ಹಾಕಿದರೂ ರಾಜ್ಯ ಕಾಂಗ್ರೆಸ್ನ ಯಾವೊಬ್ಬ ನಾಯಕರೂ ತನ್ವೀರ್ ಸೇಠ್ ರಕ್ಷಣೆಗೆ ಮುಂದಾಗದಿರುವುದು ಖಂಡನೀಯ ಎಂದರು.
ಎಸ್ಡಿಪಿಐ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ಜಿಲ್ಲಾಧ್ಯಕ್ಷ ರಫತ್ ಖಾನ್, ಜಿಲ್ಲಾ ಉಪಾಧ್ಯಕ್ಷ ಸ್ವಾಮಿ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…