ಕೃಷಿ

ಟಿಪ್ಪು ನಿಜಕನಸುಗಳು ನಾಟಕ : ಕೃತಿ, ನಾಟಕ ಪ್ರದರ್ಶನ ತಡೆಗೆ ಆಗ್ರಹ

ಮೈಸೂರು: ಟಿಪ್ಪು ನಿಜಕನಸುಗಳು ಹೆಸರಿನಲ್ಲಿ ತನ್ನ ಸುಳ್ಳು ಅಜೆಂಡಾ ಹೇರಲು ಹೊರಟಿರುವ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರನ್ನು ಕೂಡಲೇ ಬಂಧಿಸಿ, ಟಿಪ್ಪು ನಿಜಕನಸುಗಳು ನಾಟಕ ಕೃತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುವ ಜತೆಗೆ ನಾಟಕ ಪ್ರದರ್ಶನವನ್ನೂ ತಡೆಹಿಡಿಯಬೇಕು ಎಂದು ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್ ಒತ್ತಾಯಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನರ ಕ್ಷೇಮ ಕಾಪಾಡುವ ಜತೆಗೆ ಸುಭಿಕ್ಷ ನೆಲೆಸಲು ಸರ್ಕಾರ ಮುಂದಾಗಬೇಕು. ಆದರೆ, ಚುನಾವಣೆಯಲ್ಲಿ ಜನರಿಗೆ ಮುಖ ತೋರಿಸಲಾಗದ ಬಿಜೆಪಿ ನೆಗಟಿವ್ ರಾಜಕೀಯ ಮಾಡುತ್ತಿದೆ ಎಂದು ದೂರಿದರು.
ಟಿಪ್ಪು ಪತ್ರಿಮೆ ಸ್ಥಾಪನೆ ಹೇಳಿಕೆ ವಿಚಾರವಾಗಿ ಬಜರಂಗದಳದ ಸಕಲೇಶಪುರ ರಘು, ಮೈಸೂರಿನ ಬಿಜೆಪಿ ಮುಖಂಡ ಗಿರಿಧರ್ ಅವರು ತನ್ವೀರ್ ಸೇಠ್ ಅವರನ್ನು ಸಂಹಾರ ಮಾಡಬೇಕು ಎಂದು ಹೇಳಿಕೆ ನೀಡಿರುವುದು ಖಂಡ ನೀಯ. ಇವರಿಬ್ಬರ ವಿರುದ್ಧ ಅಲ್ಲಿನ ಜಿಲ್ಲಾಡಳಿತಗಳು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ತಮ್ಮ ಪಕ್ಷದ ಶಾಸಕ, ಮಾಜಿ ಸಚಿವರೊಬ್ಬರಿಗೆ ಕೊಲೆ ಬೆದರಿಕೆ ಹಾಕಿದರೂ ರಾಜ್ಯ ಕಾಂಗ್ರೆಸ್‌ನ ಯಾವೊಬ್ಬ ನಾಯಕರೂ ತನ್ವೀರ್ ಸೇಠ್ ರಕ್ಷಣೆಗೆ ಮುಂದಾಗದಿರುವುದು ಖಂಡನೀಯ ಎಂದರು.
ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ಜಿಲ್ಲಾಧ್ಯಕ್ಷ ರಫತ್ ಖಾನ್, ಜಿಲ್ಲಾ ಉಪಾಧ್ಯಕ್ಷ ಸ್ವಾಮಿ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

8 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

9 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

24 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago