ಕೃಷಿ

ನಾಳೆ ಕಬಿನಿ ರೈತರ ಸಮಸ್ಯೆ ಪರಿಹಾರ ಸಭೆ

ಬೆಂಗಳೂರು: ಕಬಿನಿ ಹಿನ್ನೀರಿನಲ್ಲಿ ಮುಳುಗಡೆಯಾಗಿ ಜಮೀನು ಕಳೆದುಕೊಂಡವರ ಸಮಸ್ಯೆ ಪರಿಹಾರಕ್ಕೆ ನಾಳೆ ಶುಕ್ರವಾರ ಸಭೆ ನಡೆಸಲಾಗುವುದು. ಹಾಗೆೆಯೇ ಶೇಂದಿ ನಿಷೇಧ ಮಾಡಿರುವುದರಿಂದ ಈಚಲು ಬೆಳೆ ಬೆಳೆದಿದ್ದ ರೈತರ ಸಮಸ್ಯೆ ಪರಿಹಾರಕ್ಕೂ ಸಭೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇದು ಹಲವಾರು ವರ್ಷಗಳ ಸಮಸ್ಯೆಯಾಗಿದ್ದು, ಇತ್ತೀಚೆಗೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಗ್ರಾಮ ವಾಸ್ತವ್ಯ ಹೂಡಿದ್ದಾಗ ಈ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದಿದ್ದೇನೆ. ಇದನ್ನು ಪರಿಹರಿಸಲು ಸಭೆ ಕರೆಯಲಾಗಿದೆ ಎಂದರು.
ಕರ್ನಾಟಕ ಆರ್ಯಾವೈಶ್ಯ ಸಮುದಾಯದ ಅಭಿವೃದ್ಧಿ ನಿಗಮಕ್ಕೆ ೨೧ ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ೨೦೧೩ ಫಲಾನುಭವಿಗಳಿಗೆ ಸಾಲ ನೀಡಿ ಶೇ.೧೦೦ರಷ್ಟು ಪ್ರಗತಿ ಸಾಸಲಾಗಿದೆ. ಸ್ವಯಂ ಉದ್ಯೋಗ, ನೇರಸಾಲ, ಅರಿವು ಶೈಕ್ಷಣಿಕ ಸಾಲ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಕಂದಾಯ ಸಚಿವಾಲಯದಲ್ಲಿ ಆರ್ಯಾ ವೈಶ್ಯ ಆಹಾರವಾಹಿನಿ ಯೋಜನೆಯನ್ನು ಆರಂಭಿಸಲಾಗಿದೆ. ಇದರಡಿ ಗರಿಷ್ಠ ೨ ಲಕ್ಷ ರೂ.ವರೆಗೂ ಸಹಾಯಧನ ಮಂಜೂರು ಮಾಡಲಿದ್ದು, ಉಚಿತವಾಗಿ ತರಬೇತಿ ನೀಡಲಾಗುತ್ತಿದೆ ಎಂದರು.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್ ೨೦ ಕಡೆಯ ದಿನವಾಗಿದೆ. ನಿಗಮವು ರಾಜ್ಯದಲ್ಲಿಯೇ ಮೊದಲ ಬಾರಿಗೆ ಸಿಇಒ ಲೈವ್ ಡಾಶ್‌ಬೋರ್ಡ್ ಸಿದ್ದಪಡಿಸಿದ್ದು, ಡಾಶ್‌ಬೋರ್ಡ್‌ನಲ್ಲಿ ಆಯಾ ಜಿಲ್ಲೆಗೆ ಸಂಬಂಧಿಸಿದ ಸಿಇಒಗಳು ಅಭ್ಯರ್ಥಿಗಳ ವಿವರವನ್ನು ವೀಕ್ಷಿಸಬಹುದು ಎಂದರು.
ನಿಗಮದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹೆಚ್ಚುವರಿಗೆ ೧೦ ಕೋಟಿ ರೂ.ಗಳ ಅನುದಾನವನ್ನು ಕೋರಲಾಗಿದೆ ಎಂದು ಅವರು ತಿಳಿಸಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್.ಗೀತಾಶ್ರೀ ಉಪಸ್ಥಿತರಿದ್ದರು.

andolanait

Share
Published by
andolanait

Recent Posts

ಹನೂರಿನಲ್ಲಿ ಈ ಬಾರಿ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು: ಶಾಸಕ ಎಂಆರ್‌ ಮಂಜುನಾಥ್‌

ಹನೂರು: ಮೈಸೂರು ಎಂಬ ರಾಜ್ಯದಿಂದ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಕರ್ನಾಟಕ ರಾಜ್ಯ ಎಂದು ಮರುನಾಮಕರಣ ಮಾಡಿ 50…

43 seconds ago

‘ದೇವರು ರುಜು ಮಾಡಿದನು’ ಎಂದ ಸಿಂಪಲ್ ಸುನಿ; ಶೀರ್ಷಿಕೆ ಅನಾವರಣ

ಈ ವರ್ಷ ಬಿಡುಗಡೆಯಾದ ವಿನಯ್‍ ರಾಜಕುಮಾರ್‍ ಅಭಿನಯದ ‘ಒಂದು ಸರಳ ಪ್ರೇಮಕಥೆ’ ಚಿತ್ರದ ನಂತರ ಒಂದಿಷ್ಟು ಹೊಸ ಚಿತ್ರದ ಕೆಲಸಗಳಲ್ಲಿ…

15 mins ago

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅರೆಸ್ಟ್

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಹೋದರ ಗೋಪಾಲ್‌ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಂಎಲ್‌ಸಿ ಟಿಕೆಟ್‌ಗಾಗಿ…

52 mins ago

ರಾಜ್ಯದಲ್ಲಿ ಹಿಂದಿ ಹೇರಿಕೆ: ತಮಿಳುನಾಡು ರಾಜ್ಯಪಾಲ ರವಿ ವಿರುದ್ಧ ಧ್ವನಿ ಎತ್ತಿದ ಎಂ.ಕೆ.ಸ್ಟಾಲಿನ್

ಚೆನ್ನೈ: ಹಿಂದಿ ಮಾಸಾಚರಣೆ ನೆಪದಲ್ಲಿ ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯಪಾಲರು ದೇಶದ ಏಕತೆಯನ್ನು ಮರೆತು, ಕೇಂದ್ರ ಯೋಜನೆಗಳು ಮತ್ತು ಘೋಷಣೆಗಳಂತೆ…

1 hour ago

ಮುಡಾ ಫೈಲ್ ಸುಟ್ಟು ಹಾಕಿರುವ ಭೈರತಿ ಸುರೇಶ್ ರನ್ನು ತಕ್ಷಣ ಬಂಧಿಸಿ: ಶೋಭಾ ಕರಂದಾಜ್ಲೆ ಆಗ್ರಹ

ಬೆಂಗಳೂರು: ಸಚಿವ ಭೈರತಿ ಸುರೇಶ್‌ ಅವರು ಮುಡಾದಿಂದ ಫೈಲ್‌ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್‌ರನ್ನು ತಕ್ಷಣ ಬಂಧಿಸಬೇಕು…

1 hour ago

ಕೆಂಪೇಗೌಡರು ಕಟ್ಟಿದ ಕೆರೆಗಳನ್ನೆಲ್ಲಾ ಹಣದ ದಾಹಕ್ಕೆ ನುಂಗಿದ್ದಾರೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ…

2 hours ago