ಕೃಷಿ

ನಾಳೆ ಕಬಿನಿ ರೈತರ ಸಮಸ್ಯೆ ಪರಿಹಾರ ಸಭೆ

ಬೆಂಗಳೂರು: ಕಬಿನಿ ಹಿನ್ನೀರಿನಲ್ಲಿ ಮುಳುಗಡೆಯಾಗಿ ಜಮೀನು ಕಳೆದುಕೊಂಡವರ ಸಮಸ್ಯೆ ಪರಿಹಾರಕ್ಕೆ ನಾಳೆ ಶುಕ್ರವಾರ ಸಭೆ ನಡೆಸಲಾಗುವುದು. ಹಾಗೆೆಯೇ ಶೇಂದಿ ನಿಷೇಧ ಮಾಡಿರುವುದರಿಂದ ಈಚಲು ಬೆಳೆ ಬೆಳೆದಿದ್ದ ರೈತರ ಸಮಸ್ಯೆ ಪರಿಹಾರಕ್ಕೂ ಸಭೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇದು ಹಲವಾರು ವರ್ಷಗಳ ಸಮಸ್ಯೆಯಾಗಿದ್ದು, ಇತ್ತೀಚೆಗೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಗ್ರಾಮ ವಾಸ್ತವ್ಯ ಹೂಡಿದ್ದಾಗ ಈ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದಿದ್ದೇನೆ. ಇದನ್ನು ಪರಿಹರಿಸಲು ಸಭೆ ಕರೆಯಲಾಗಿದೆ ಎಂದರು.
ಕರ್ನಾಟಕ ಆರ್ಯಾವೈಶ್ಯ ಸಮುದಾಯದ ಅಭಿವೃದ್ಧಿ ನಿಗಮಕ್ಕೆ ೨೧ ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ೨೦೧೩ ಫಲಾನುಭವಿಗಳಿಗೆ ಸಾಲ ನೀಡಿ ಶೇ.೧೦೦ರಷ್ಟು ಪ್ರಗತಿ ಸಾಸಲಾಗಿದೆ. ಸ್ವಯಂ ಉದ್ಯೋಗ, ನೇರಸಾಲ, ಅರಿವು ಶೈಕ್ಷಣಿಕ ಸಾಲ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಕಂದಾಯ ಸಚಿವಾಲಯದಲ್ಲಿ ಆರ್ಯಾ ವೈಶ್ಯ ಆಹಾರವಾಹಿನಿ ಯೋಜನೆಯನ್ನು ಆರಂಭಿಸಲಾಗಿದೆ. ಇದರಡಿ ಗರಿಷ್ಠ ೨ ಲಕ್ಷ ರೂ.ವರೆಗೂ ಸಹಾಯಧನ ಮಂಜೂರು ಮಾಡಲಿದ್ದು, ಉಚಿತವಾಗಿ ತರಬೇತಿ ನೀಡಲಾಗುತ್ತಿದೆ ಎಂದರು.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್ ೨೦ ಕಡೆಯ ದಿನವಾಗಿದೆ. ನಿಗಮವು ರಾಜ್ಯದಲ್ಲಿಯೇ ಮೊದಲ ಬಾರಿಗೆ ಸಿಇಒ ಲೈವ್ ಡಾಶ್‌ಬೋರ್ಡ್ ಸಿದ್ದಪಡಿಸಿದ್ದು, ಡಾಶ್‌ಬೋರ್ಡ್‌ನಲ್ಲಿ ಆಯಾ ಜಿಲ್ಲೆಗೆ ಸಂಬಂಧಿಸಿದ ಸಿಇಒಗಳು ಅಭ್ಯರ್ಥಿಗಳ ವಿವರವನ್ನು ವೀಕ್ಷಿಸಬಹುದು ಎಂದರು.
ನಿಗಮದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹೆಚ್ಚುವರಿಗೆ ೧೦ ಕೋಟಿ ರೂ.ಗಳ ಅನುದಾನವನ್ನು ಕೋರಲಾಗಿದೆ ಎಂದು ಅವರು ತಿಳಿಸಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್.ಗೀತಾಶ್ರೀ ಉಪಸ್ಥಿತರಿದ್ದರು.

andolanait

Share
Published by
andolanait

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

4 hours ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

4 hours ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

4 hours ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

4 hours ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

5 hours ago