ಬೆಂಗಳೂರು: ಕಬಿನಿ ಹಿನ್ನೀರಿನಲ್ಲಿ ಮುಳುಗಡೆಯಾಗಿ ಜಮೀನು ಕಳೆದುಕೊಂಡವರ ಸಮಸ್ಯೆ ಪರಿಹಾರಕ್ಕೆ ನಾಳೆ ಶುಕ್ರವಾರ ಸಭೆ ನಡೆಸಲಾಗುವುದು. ಹಾಗೆೆಯೇ ಶೇಂದಿ ನಿಷೇಧ ಮಾಡಿರುವುದರಿಂದ ಈಚಲು ಬೆಳೆ ಬೆಳೆದಿದ್ದ ರೈತರ ಸಮಸ್ಯೆ ಪರಿಹಾರಕ್ಕೂ ಸಭೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇದು ಹಲವಾರು ವರ್ಷಗಳ ಸಮಸ್ಯೆಯಾಗಿದ್ದು, ಇತ್ತೀಚೆಗೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಗ್ರಾಮ ವಾಸ್ತವ್ಯ ಹೂಡಿದ್ದಾಗ ಈ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದಿದ್ದೇನೆ. ಇದನ್ನು ಪರಿಹರಿಸಲು ಸಭೆ ಕರೆಯಲಾಗಿದೆ ಎಂದರು.
ಕರ್ನಾಟಕ ಆರ್ಯಾವೈಶ್ಯ ಸಮುದಾಯದ ಅಭಿವೃದ್ಧಿ ನಿಗಮಕ್ಕೆ ೨೧ ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ೨೦೧೩ ಫಲಾನುಭವಿಗಳಿಗೆ ಸಾಲ ನೀಡಿ ಶೇ.೧೦೦ರಷ್ಟು ಪ್ರಗತಿ ಸಾಸಲಾಗಿದೆ. ಸ್ವಯಂ ಉದ್ಯೋಗ, ನೇರಸಾಲ, ಅರಿವು ಶೈಕ್ಷಣಿಕ ಸಾಲ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಕಂದಾಯ ಸಚಿವಾಲಯದಲ್ಲಿ ಆರ್ಯಾ ವೈಶ್ಯ ಆಹಾರವಾಹಿನಿ ಯೋಜನೆಯನ್ನು ಆರಂಭಿಸಲಾಗಿದೆ. ಇದರಡಿ ಗರಿಷ್ಠ ೨ ಲಕ್ಷ ರೂ.ವರೆಗೂ ಸಹಾಯಧನ ಮಂಜೂರು ಮಾಡಲಿದ್ದು, ಉಚಿತವಾಗಿ ತರಬೇತಿ ನೀಡಲಾಗುತ್ತಿದೆ ಎಂದರು.
ಈ ಯೋಜನೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್ ೨೦ ಕಡೆಯ ದಿನವಾಗಿದೆ. ನಿಗಮವು ರಾಜ್ಯದಲ್ಲಿಯೇ ಮೊದಲ ಬಾರಿಗೆ ಸಿಇಒ ಲೈವ್ ಡಾಶ್ಬೋರ್ಡ್ ಸಿದ್ದಪಡಿಸಿದ್ದು, ಡಾಶ್ಬೋರ್ಡ್ನಲ್ಲಿ ಆಯಾ ಜಿಲ್ಲೆಗೆ ಸಂಬಂಧಿಸಿದ ಸಿಇಒಗಳು ಅಭ್ಯರ್ಥಿಗಳ ವಿವರವನ್ನು ವೀಕ್ಷಿಸಬಹುದು ಎಂದರು.
ನಿಗಮದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹೆಚ್ಚುವರಿಗೆ ೧೦ ಕೋಟಿ ರೂ.ಗಳ ಅನುದಾನವನ್ನು ಕೋರಲಾಗಿದೆ ಎಂದು ಅವರು ತಿಳಿಸಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್.ಗೀತಾಶ್ರೀ ಉಪಸ್ಥಿತರಿದ್ದರು.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…