ಕೃಷಿ

IPL ಲಕ್ನೋಗೆ ಸೋಲುಣಿಸಿದ ಅಗ್ರಸ್ಥಾನಿ ಗುಜರಾತ್ ಟೈಟಾನ್ಸ್

ಅಹಮದಾಬಾದ್ : ಐಪಿಎಲ್ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಗೆಲುವಿನ ಓಟ ಮುಂದುವರಿದಿದ್ದು, ಭಾನುವಾರ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಅನ್ನು 56 ರನ್‌ಗಳಿಂದ ಸೋಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ.

11 ಪಂದ್ಯಗಳಲ್ಲಿ ಟೈಟಾನ್ಸ್ ಎಂಟನೇ ಜಯವಾಗಿದ್ದು, 16 ಅಂಕಗಳಿಗೆ ಮತ್ತು ಪ್ಲೇ-ಆಫ್‌ಗೆ ಹತ್ತಿರವಾಗಿದೆ.

ಶುಭಮನ್ ಗಿಲ್ (ಔಟಾಗದೆ 94) ಮತ್ತು ವೃದ್ಧಿಮಾನ್ ಸಹಾ (81) ನಡುವಿನ ಫ್ರಾಂಚೈಸಿ ದಾಖಲೆಯ 142 ರನ್‌ಗಳ ಜೊತೆಯಾಟದಿಂದ ಎರಡು ವಿಕೆಟ್‌ಗೆ 227 ರನ್ ಗಳಿಸಿದ ಗುಜರಾತ್ ಟೈಟಾನ್ಸ್, ಎಲ್‌ಎಸ್‌ಜಿಯ ಚೇಸ್‌ ವೇಳೆ ಸಮಗ್ರ ರೀತಿಯಲ್ಲಿ ಬಲವಾಗಿ ಮರಳಿ ಗೆಲುವಿನ ಕೇಕೆ ಹಾಕಿತು.

228 ರನ್‌ಗಳನ್ನು ಬೆನ್ನಟ್ಟಿದ ಎಲ್‌ಎಸ್‌ಜಿ ಮೊದಲ ವಿಕೆಟ್‌ಗೆ 102 ರನ್‌ ಗಳಿಸಿ ಬಲಿಷ್ಠ ಆಟ ತೋರಿತ್ತು.ಮೇಯರ್ಸ್ ಮತ್ತು ಡಿ ಕಾಕ್ ಇಬ್ಬರೂ ವೇಗವನ್ನು ಕಂಡುಕೊಳ್ಳುವುದರೊಂದಿಗೆ ಕೇವಲ ನಾಲ್ಕು ಓವರ್‌ಗಳಲ್ಲಿ ಗುರಿಯಿಂದ 50 ರನ್ ಗಳಿಸಿದರು. ಆದರೆ ಜಿಟಿ ಬಿಗಿ ಬೌಲಿಂಗ್ ಮೂಲಕ ಬ್ಯಾಟರ್‌ಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಮೋಹಿತ್ ಶರ್ಮಾ 4 ವಿಕೆಟ್ ಕಬಳಿಸಿದರು.

ಕ್ವಿಂಟನ್ ಡಿ ಕಾಕ್ ಅವರ ಅದ್ಭುತ 70 ಮತ್ತು ಅಗ್ರಸ್ಥಾನದಲ್ಲಿ ಕೈಲ್ ಮೇಯರ್ಸ್ ಅವರ ಚುರುಕಾದ 48 ರ ಹೊರತಾಗಿಯೂ, ಲಕ್ನೋ ಮಧ್ಯಮ ಕ್ರಮಾಂಕದ ವೈಫಲ್ಯದ ಮೂಲಕ ಬೃಹತ್ ಮೊತ್ತ ಗುರಿ ತಲುಪಲು ಪರದಾಡಿತು. 20 ಓವರ್‌ಗಳಲ್ಲಿ ಏಳು ವಿಕೆಟ್‌ಗಳಿಗೆ 171 ರನ್ ಗಳಿಸಿತು.

ಪಂದ್ಯಶ್ರೇಷ್ಠ:ಶುಭ್‌ಮನ್‌ ಗಿಲ್‌

andolanait

Share
Published by
andolanait

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

37 mins ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

39 mins ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

41 mins ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

44 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

47 mins ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

55 mins ago