ಕೃಷಿ

ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಯು.ಜಿ.ಸಿ ಮಾನ್ಯತೆ

ಬೆಂಗಳೂರು : ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಇದೀಗ ಮತ್ತೊಂದು ಹಿರಿಮೆ ದೊರೆತಿದೆ.

ಮಂಡ್ಯ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯವರ ಕಾಳಜಿ ಹಾಗು ಶ್ರಮದ ಹಿನ್ನಲೆ ಮಂಡ್ಯ ಕೃಷಿ ವಿಶ್ವ ವಿದ್ಯಾನಿಲಯ ಪ್ರಾರಂಭವಾದ ಕೆಲವೇ ದಿನಗಳಲ್ಲಿ ಯು.ಜಿ.ಸಿ ಮಾನ್ಯತೆ ದೊರಕಿರುವುದು ಮತ್ತೋಂದು ಹಿರಿಮೆಗೆ ಸಾಕ್ಷಿಯಾಗಿದೆ.

ಯು.ಜಿ.ಸಿ‌ ಅಧಿನಿಯಮದ ಪ್ರಕಾರ, ರಾಷ್ಟ್ರದಲ್ಲಿ ಯು.ಜಿ.ಸಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳ ಪಟ್ಟಿಯಲ್ಲಿ ಕೃಷಿ ವಿಶ್ವವಿದ್ಯಾಲಯ ಮಂಡ್ಯವನ್ನು ಸಹ ಅಧಿಕೃತವಾಗಿ ಸೇರಿಸಿ ನವೆಂಬರ್ 18 ರಂದು ಯು.ಜಿ.ಸಿ ಯು ಅಧಿಸೂಚನೆ ಹೊರಡಿಸಿದೆ.

ಈ ಅಧಿಸೂಚನೆಯಂತೆ ಇನ್ನೂ ಮುಂದೆ ವಿಶ್ವವಿದ್ಯಾಲಯ ನೀಡಲಿರುವ ಕೃಷಿ ಆಧಾರಿತ ಪದವಿಗಳಿಗೆ ಯು.ಜಿ.ಸಿ ಮಾನ್ಯತೆ ನೀಡಿದಂತಾಗುತ್ತದೆ..

ಕೃಷಿ ವಿ.ವಿ ಮಂಡ್ಯವು ತನ್ನ ಎಲ್ಲಾ ಶೈಕ್ಷಣಿಕ, ಅಭಿವೃದ್ಧಿ, ಮಾನವ ಸಂಪನ್ಮೂಲ ಹಾಗೂ ಮೂಲಸೌಕರ್ಯಗಳ ನಿರ್ವಹಣೆಗೆ ಯು.ಜಿ.ಸಿಯ ಹಾಗೂ ICAR ನಿಯಮವಳಿ ಅನ್ವಯ ಹಾಗೂ ರಾಜ್ಯ ಸರ್ಕಾರದ ಅನುಮೋದನೆಯೊಂದಿಗೆ ತನ್ನ ಕಾರ್ಯವನ್ನು ನಿಭಾಯಿಸುವಂತಾಗುವುದು.

ಇದನ್ನೂ ಓದಿ:-ಅಧಿಕಾರ ಯಾರಿಗೂ ಶಾಶ್ವತವಲ್ಲ : ಚರ್ಚೆಗೆ ಗ್ರಾಸವಾದ ಡಿಕೆಶಿ ಮಾರ್ಮಿಕ ಮಾತು

ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಯು.ಜಿ.ಸಿ ಅಧಿಸೂಚನೆಯೂ ವೈಬ್ ಸೈಟ್ ಲಿಂಕ್ ನಲ್ಲಿ https://www.ugc.gov.in ಲಭ್ಯವಿದ್ದು ಸಾರ್ವಜನಿಕರು ಇದನ್ನು ಗಮನಿಸಬಹುದು.

ಈ ಅಧಿಸೂಚನೆಯಂತೆ ಕೃಷಿ ವಿ.ವಿಯು ತನ್ನ ವ್ಯಾಪ್ತಿಯಲ್ಲಿ ಮಾತ್ರ ತನ್ನ ಶೈಕ್ಷಣಿಕ ಕಾರ್ಯಕ್ರಮವನ್ನು ನಡೆಸಬೇಕಾಗುತ್ತದೆ. ಶೈಕ್ಷಣಿಕ ಹಾಗೂ ಯಾವುದೇ ದೂರಸಂಪರ್ಕ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕಾದಾಗ ಯುಜಿಸಿಯ ಪರವಾನಗಿ ಪಡೆದುಕೊಳ್ಳಬೇಕಾಗುತ್ತದೆ. ಇದರಂತೆ ಕೃಷಿ ವಿವಿಯೂ ಮುಂದಿನ ದಿನಗಳಲ್ಲಿ ನ್ಯಾಕ್ ಅಕ್ರಿಡಿಟೇಶನ್ ಗೆ ಅರ್ಹವಾಗಿದ್ದು ಅದನ್ನು ಪಡೆದುಕೊಳ್ಳಬೇಕಾಗುತ್ತದೆ.

ಇನ್ನೂ ಆಡಳಿತಭವನ ನಿರ್ಮಾಣಕ್ಕೆ 70 ಕೋಟಿ ಹಣ ಬಿಡುಗಡೆಯಾಗಿದ್ದು, ಶೀಘ್ರದಲ್ಲೆ ಮಂಡ್ಯದ ವಿ.ಸಿ.ಫಾರಂ ನಲ್ಲಿ ಆಡಳಿತಭವನ ನಿರ್ಮಾಣಕ್ಕೆ ಚಾಲನೆ ಸಿಗಲಿದೆ.

ಮುಂದಿನ ಡಿಸೆಂಬರ್ 5 ರಿಂದ 7 ರವರೆಗೆ ಮೂರು ದಿನಗಳ ಕಾಲ ಮಂಡ್ಯ ಕೃಷಿ ವಿವಿಯ ವಿ‌.ಸಿ.ಫಾರಂನಲ್ಲಿ ಕೃಷಿ ಮೇಳ ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇಳವನ್ನು ಉದ್ಘಾಟಿಸಲಿದ್ದಾರೆ.

ಆಂದೋಲನ ಡೆಸ್ಕ್

Share
Published by
ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

3 mins ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

11 mins ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

44 mins ago

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

4 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

4 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

14 hours ago