ಕೃಷಿ

ನೀರಾವರಿ ಇಲಾಖೆಯ ವಿವಿಧ ಹುದ್ದೆಗಳು ಶೀಘ್ರವೇ ಭರ್ತಿ : ಸಚಿವ ಗೋವಿಂದ ಕಾರಜೋಳ

ಬೆಂಗಳೂರು : ನೀರಾವರಿ ಇಲಾಖೆಯಲ್ಲಿ 400 ಜನರ ನೇಮಕಕ್ಕೆ ಅನುಮತಿ ನೀಡಿದ್ದು, 300 ಜನ ಅಸಿಸ್ಟೆಂಟ್ ಇಂಜಿನಿಯರ್, 100 ಜನ ಜ್ಯೂನಿಯರ್ ಇಂಜಿನಿಯರ್ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ಅವರು ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೀರಾವರಿ ಇಲಾಖೆಯಲ್ಲಿ ಅನೇಕ ವರ್ಷದಿಂದ ಅಸಿಸ್ಟೆಂಟ್ ಇಂಜಿನಿಯರ್, ಜ್ಯೂನಿಯರ್ ಇಂಜಿನಿಯರ್ ನೇಮಕ ಆಗಿಲ್ಲ. ಸಾವಿರ ಜನರ ಹುದ್ದೆ ನೇಮಕ ಆಗಬೇಕಿದೆ ಎಂದು ತಿಳಿಸಿದರು.
ವಿಳಂಬದ ಪರಿಣಾಮ ಕಾಮಗಾರಿ ವಿಳಂಭ ಆಗುತ್ತಿದೆ. ಮುಖ್ಯಮಂತ್ರಿ ಹಾಗೂ ಹಣಕಾಸು ಇಲಾಖೆ ಜೊತೆ ಮಾತನಾಡಿದ್ದೇನೆ. 400 ಜನರ ನೇಮಕಕ್ಕೆ ಅನುಮತಿ ನೀಡಿದ್ದಾರೆ. 300 ಜನ ಅಸಿಸ್ಟೆಂಟ್ ಇಂಜಿನಿಯರ್, ನೂರು ಜನ ಜ್ಯೂನಿಯರ್ ಇಂಜಿನಿಯರ್ ನೇಮಕ ಮಾಡಿಕೊಳ್ಳಲಾಗುವುದು. ಸಿವಿಲ್ ಇಂಜಿನಿಯರ್ ಗಳ ಕಾಂಟ್ರಾಕ್ಟ್ ನೇಮಕ ಮಾಡಿಕೊಳ್ತಿದ್ದೇವೆ.
ಹಣಕಾಸು ಇಲಾಖೆ ಒಪ್ಪಿಗೆ ಪಡೆದು ಅಧಿಸೂಚನೆ ಮಾಡಿಕೊಳ್ಳಬೇಕು.ಇದು ಕಾಂಟ್ರಾಕ್ಟ್ ನೇಮಕ .ಇದನ್ನು
ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು.ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ನೇಮಕ ಮಾಡಲಾಗುವುದು ಎಂದರು. ಮಹದಾಯಿ ನೀರು ಹಂಚಿಕೆಯಲ್ಲಿ, ನಮ್ಮ ಪಾಲಿನ ನೀರನ್ನ ಪಡೆದೇ ಪಡೆಯುತ್ತೇವೆ ಎಂದ ಗೋವಿಂದ ಕಾರಜೋಳ ಅವರು ಹೇಳಿದರು.

andolanait

Recent Posts

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಮೈಸೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮಾರ್ಚ್.‌17ರವರೆಗೂ ನಡೆಯಲಿದೆ. ಮೈಸೂರು ಜಿಲ್ಲೆಯಲ್ಲಿ 35,835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು,…

8 mins ago

ಮಾ.23ರಿಂದ ವಿಜೃಂಭಣೆಯ ವೈರಮುಡಿ ಬ್ರಹ್ಮೋತ್ಸವ

ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…

4 hours ago

ಓದುಗರ ಪತ್ರ: ಮೊಬೈಲ್ ಸ್ಟೇಟಸ್ !

ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್‌ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್‌ಗಳು ?…

4 hours ago

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…

4 hours ago

ಓದುಗರ ಪತ್ರ; ಸಫಾರಿಗೆ ಅನುಮತಿ ಖಂಡನೀಯ

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…

4 hours ago

ತಂಪಾದ ಕೊಡಗಿನಲ್ಲಿಯೂ ಹೆಚ್ಚುತ್ತಿದೆ ತಾಪ

ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…

4 hours ago