ಕೃಷಿ

ನೀರಾವರಿ ಇಲಾಖೆಯ ವಿವಿಧ ಹುದ್ದೆಗಳು ಶೀಘ್ರವೇ ಭರ್ತಿ : ಸಚಿವ ಗೋವಿಂದ ಕಾರಜೋಳ

ಬೆಂಗಳೂರು : ನೀರಾವರಿ ಇಲಾಖೆಯಲ್ಲಿ 400 ಜನರ ನೇಮಕಕ್ಕೆ ಅನುಮತಿ ನೀಡಿದ್ದು, 300 ಜನ ಅಸಿಸ್ಟೆಂಟ್ ಇಂಜಿನಿಯರ್, 100 ಜನ ಜ್ಯೂನಿಯರ್ ಇಂಜಿನಿಯರ್ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಚಿವ ಗೋವಿಂದ ಕಾರಜೋಳ ಅವರು ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನೀರಾವರಿ ಇಲಾಖೆಯಲ್ಲಿ ಅನೇಕ ವರ್ಷದಿಂದ ಅಸಿಸ್ಟೆಂಟ್ ಇಂಜಿನಿಯರ್, ಜ್ಯೂನಿಯರ್ ಇಂಜಿನಿಯರ್ ನೇಮಕ ಆಗಿಲ್ಲ. ಸಾವಿರ ಜನರ ಹುದ್ದೆ ನೇಮಕ ಆಗಬೇಕಿದೆ ಎಂದು ತಿಳಿಸಿದರು.
ವಿಳಂಬದ ಪರಿಣಾಮ ಕಾಮಗಾರಿ ವಿಳಂಭ ಆಗುತ್ತಿದೆ. ಮುಖ್ಯಮಂತ್ರಿ ಹಾಗೂ ಹಣಕಾಸು ಇಲಾಖೆ ಜೊತೆ ಮಾತನಾಡಿದ್ದೇನೆ. 400 ಜನರ ನೇಮಕಕ್ಕೆ ಅನುಮತಿ ನೀಡಿದ್ದಾರೆ. 300 ಜನ ಅಸಿಸ್ಟೆಂಟ್ ಇಂಜಿನಿಯರ್, ನೂರು ಜನ ಜ್ಯೂನಿಯರ್ ಇಂಜಿನಿಯರ್ ನೇಮಕ ಮಾಡಿಕೊಳ್ಳಲಾಗುವುದು. ಸಿವಿಲ್ ಇಂಜಿನಿಯರ್ ಗಳ ಕಾಂಟ್ರಾಕ್ಟ್ ನೇಮಕ ಮಾಡಿಕೊಳ್ತಿದ್ದೇವೆ.
ಹಣಕಾಸು ಇಲಾಖೆ ಒಪ್ಪಿಗೆ ಪಡೆದು ಅಧಿಸೂಚನೆ ಮಾಡಿಕೊಳ್ಳಬೇಕು.ಇದು ಕಾಂಟ್ರಾಕ್ಟ್ ನೇಮಕ .ಇದನ್ನು
ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು.ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ನೇಮಕ ಮಾಡಲಾಗುವುದು ಎಂದರು. ಮಹದಾಯಿ ನೀರು ಹಂಚಿಕೆಯಲ್ಲಿ, ನಮ್ಮ ಪಾಲಿನ ನೀರನ್ನ ಪಡೆದೇ ಪಡೆಯುತ್ತೇವೆ ಎಂದ ಗೋವಿಂದ ಕಾರಜೋಳ ಅವರು ಹೇಳಿದರು.

andolanait

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

3 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

5 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

11 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

11 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

11 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

11 hours ago