ಆಂದೋಲನ 50

ಗಿಡಗಂಟಿಗಳ ನಡುವೆ ಮುಚ್ಚಿ ಹೋಗಿದೆ ಪಾರಂಪರಿಕ ಸೇತುವೆ

ಮೈಸೂರು-ನಂಜನಗೂಡು ರಸ್ತೆಗೆ ಅಡ್ಡವಾಗಿ ಕಪಿಲಾ ನದಿಗೆ ನಿರ್ಮಿಸಲಾದ ರಾಜ್ಯದ ಅತ್ಯಂತ ಪುರಾತನವಾದ ಸೇತುವೆ ನಂಜನಗೂಡಿನ ಹಿರಿಮೆಯನ್ನು ಹೆಚ್ಚಿಸಿದೆ. ೧೭೩೫ ರಲ್ಲಿ ನಿರ್ಮಿಸಿದ ದಾಖಲೆ ಇರುವ ಈ ಸೇತುವೆ ರಾಜ್ಯದ ಅತ್ಯಂತ ಹಳೆಯ ಸೇತುವೆ ಎನ್ನುವ ಹೆಗ್ಗಳಿಕೆ ಹೊಂದಿದೆ. ಆಧುನಿಕ ಸೇತುವೆಗಳು ಲೋಕಾರ್ಪಣೆಯಾದ ಕೆಲವರ್ಷಗಳಲ್ಲೇ ನೆಲಕಚ್ಚುವ ಸ್ಥಿತಿಯನ್ನು ಕಾಣುತ್ತಿರುವ ಈ ಕಾಲದಲ್ಲಿ ನಂಜನಗೂಡಿನ ಕಪಿಲಾ ಸೇತುವೆ ಈಗಲೂ ಸಾಕಷ್ಟು ಭದ್ರವಾಗಿಯೇ ಇ ದೆಎಂಬುದು ರಾಜ್ಯಕ್ಕೊಂದು ಹೆಮ್ಮೆಯ ವಿಷಯವಾಗಿದೆ. ಪ್ರಾರಂಭದಲ್ಲಿ ಎತ್ತಿನ ಗಾಡಿ, ಕುದುರೆ ಗಾಡಿಗಳ ಸಂಚಾರಕ್ಕಾಗಿ ಎಂಬಂತಾಗಿ ದ ಈ ಸೇತುವೆಯಲ್ಲಿ ೧೯ನೇ ಶತಮಾನ ದಲ್ಲಿ ಮೋಟಾರು ವಾಹನಗಳು ಸಂಚರಿಸಲಾರಂಭಿಸಿದ್ದವು.

ಶತಮಾನಗಳ ಹಿಂದೆೆಯೇ ನಂಜನಗೂಡಿಗೆ ರೈಲು ಸಂಪರ್ಕ ಕಲ್ಪಿತವಾದಾಗ ಈ ಸೇತುವೆಯಲ್ಲಿ ಮೋಟಾರು ಹಾಗೂ ರೈಲುಗಳೆರಡರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು. ಮೀಟರ್‌ ಗೇಜಿ ನಿಂದ ಬ್ರಾಡ್‌ ಗೇಜಾಗಿ ಇಲ್ಲಿನ ರೈಲು ಬದಲಾಗುವವರೆಗೂ (೨೦೦೮) ಇದೇ ಸೇತುವೆ ಮೇಲೆ ರೈಲು ಸರಾಗವಾಗಿ ಸಂಚರಿಸುತ್ತಿತ್ತು. ಮೈಸೂರು- ನಂಜನಗೂಡು ನಡುವೆ ಸುಗಮ ಸಂಚಾರಕ್ಕಾಗಿ ದಳವಾಯಿ ದೇವರಾಜ ಎನ್ನುವವರು ಬೆಲ್ಲ, ಸುಣ್ಣ ದ ಗಾರೆ ಹಾಗೂ ಇಟ್ಟಿಗೆಗಳಿಂದ ಈ ಬಲಿಷ್ಠ ಸೇತುವೆಯನ್ನು ೧೭೩೫ ರಲ್ಲಿ ನಿರ್ಮಿಸಿ ದರು. ಸುಮಾರು ೨೭೩ ವರ್ಷಗಳ ಕಾಲ ಸಂಚಾರ ದ ವ್ಯವಸ್ಥೆಗೆ ಸಾಕ್ಷಿಯಾಗಿ ಈಗ ೨೮೬ ವರ್ಷ ಕಳೆದರೂ ಸಾಕಷ್ಟು ಗಟ್ಟಿಯಾಗಿ ಇರುವ ಈ ಸೇತುವೆ ಅಪರೂಪದ ವಾಸ್ತು ಶೈಲಿಯಿಂದ ಕೂಡಿದ್ದು ಅದನ್ನು ನಾವೀಗ ಉಳಿಸಿಕೊಳ್ಳ ಬೇಕಿದೆ. ಈಸ್ಟ್‌ ಇಂಡಿಯಾ ಕಂಪನಿಯ ರಾಯಭಾರಿ ಡ್ಯಾನೀಷ್‌ ರೇವ್‌ ಎಂಬವರು ಕಪಿಲಾ ನದಿಯಾ ಈ ಸೇತುವೆ ಕುರಿತು ೧೭೭೯ ಆಗಸ್ಟ್‌ ೨೩ ರಂದು ದಾಖಲಿಸಿದ್ದಾರೆ.

೧೦ ಅಡಿ ವಿಸ್ತಾರದ ಗೋಥಿಕ್‌ ಶೈಲಿಯ ಇತಿಹಾಸ ಹೊಂದಿರುವ ಕಮಾನುಗಳ ಸರಣಿಯಿಂದ ಕೂಡಿದ ಈ ಸೇತುವೆ ೮ ಅಡಿ ಅಗಲದ ಮಧ್ಯಸ್ಥಿಕೆಯ ಬೃಹತ್ತಾದ ಸ್ತಂಭಗಳನ್ನು ಹೊಂದಿದೆ. ಆರ್ಚ್‌ ಕ್ರೈಸ್ಟ್‌ ಮೇಲೆ ೫ ಅಡಿಗಳಿಗಿಂತ ಹೆಚ್ಚು ಅಗಲದ ಅಡಿಪಾಯದ ಕಲ್ಲಿನ ಸ್ತರಗಳ ಮೇಲೆ ಇದನ್ನು ನಿಲ್ಲಿಸಲಾಗಿದೆ. ಮೂರು ಶತಮಾನಗಳ ಇತಿಹಾಸ ಹೊಂದಿರುವ ಈ ಸೇತುವೆಮ ಕಪಿಲೆಯಲ್ಲಿ ಬಂದ ಪ್ರವಾಹಗಳಿಗೆ ಜಗ್ಗದೆ ಅಳುಕದೆ ನಮ್ಮ ಮುಂದೆ ನಿಂತಿರುವುದೇ ನಮ್ಮವರ ಅಂದಿನ ಕಾಲದ ತಾಂತ್ರಿಕತೆಗೆ ಸಾಕ್ಷಿಯಾಗಿದೆ.

andolana

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

6 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

19 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

19 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

19 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

19 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

19 hours ago