ಮೈಸೂರು-ನಂಜನಗೂಡು ರಸ್ತೆಗೆ ಅಡ್ಡವಾಗಿ ಕಪಿಲಾ ನದಿಗೆ ನಿರ್ಮಿಸಲಾದ ರಾಜ್ಯದ ಅತ್ಯಂತ ಪುರಾತನವಾದ ಸೇತುವೆ ನಂಜನಗೂಡಿನ ಹಿರಿಮೆಯನ್ನು ಹೆಚ್ಚಿಸಿದೆ. ೧೭೩೫ ರಲ್ಲಿ ನಿರ್ಮಿಸಿದ ದಾಖಲೆ ಇರುವ ಈ ಸೇತುವೆ ರಾಜ್ಯದ ಅತ್ಯಂತ ಹಳೆಯ ಸೇತುವೆ ಎನ್ನುವ ಹೆಗ್ಗಳಿಕೆ ಹೊಂದಿದೆ. ಆಧುನಿಕ ಸೇತುವೆಗಳು ಲೋಕಾರ್ಪಣೆಯಾದ ಕೆಲವರ್ಷಗಳಲ್ಲೇ ನೆಲಕಚ್ಚುವ ಸ್ಥಿತಿಯನ್ನು ಕಾಣುತ್ತಿರುವ ಈ ಕಾಲದಲ್ಲಿ ನಂಜನಗೂಡಿನ ಕಪಿಲಾ ಸೇತುವೆ ಈಗಲೂ ಸಾಕಷ್ಟು ಭದ್ರವಾಗಿಯೇ ಇ ದೆಎಂಬುದು ರಾಜ್ಯಕ್ಕೊಂದು ಹೆಮ್ಮೆಯ ವಿಷಯವಾಗಿದೆ. ಪ್ರಾರಂಭದಲ್ಲಿ ಎತ್ತಿನ ಗಾಡಿ, ಕುದುರೆ ಗಾಡಿಗಳ ಸಂಚಾರಕ್ಕಾಗಿ ಎಂಬಂತಾಗಿ ದ ಈ ಸೇತುವೆಯಲ್ಲಿ ೧೯ನೇ ಶತಮಾನ ದಲ್ಲಿ ಮೋಟಾರು ವಾಹನಗಳು ಸಂಚರಿಸಲಾರಂಭಿಸಿದ್ದವು.
ಶತಮಾನಗಳ ಹಿಂದೆೆಯೇ ನಂಜನಗೂಡಿಗೆ ರೈಲು ಸಂಪರ್ಕ ಕಲ್ಪಿತವಾದಾಗ ಈ ಸೇತುವೆಯಲ್ಲಿ ಮೋಟಾರು ಹಾಗೂ ರೈಲುಗಳೆರಡರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು. ಮೀಟರ್ ಗೇಜಿ ನಿಂದ ಬ್ರಾಡ್ ಗೇಜಾಗಿ ಇಲ್ಲಿನ ರೈಲು ಬದಲಾಗುವವರೆಗೂ (೨೦೦೮) ಇದೇ ಸೇತುವೆ ಮೇಲೆ ರೈಲು ಸರಾಗವಾಗಿ ಸಂಚರಿಸುತ್ತಿತ್ತು. ಮೈಸೂರು- ನಂಜನಗೂಡು ನಡುವೆ ಸುಗಮ ಸಂಚಾರಕ್ಕಾಗಿ ದಳವಾಯಿ ದೇವರಾಜ ಎನ್ನುವವರು ಬೆಲ್ಲ, ಸುಣ್ಣ ದ ಗಾರೆ ಹಾಗೂ ಇಟ್ಟಿಗೆಗಳಿಂದ ಈ ಬಲಿಷ್ಠ ಸೇತುವೆಯನ್ನು ೧೭೩೫ ರಲ್ಲಿ ನಿರ್ಮಿಸಿ ದರು. ಸುಮಾರು ೨೭೩ ವರ್ಷಗಳ ಕಾಲ ಸಂಚಾರ ದ ವ್ಯವಸ್ಥೆಗೆ ಸಾಕ್ಷಿಯಾಗಿ ಈಗ ೨೮೬ ವರ್ಷ ಕಳೆದರೂ ಸಾಕಷ್ಟು ಗಟ್ಟಿಯಾಗಿ ಇರುವ ಈ ಸೇತುವೆ ಅಪರೂಪದ ವಾಸ್ತು ಶೈಲಿಯಿಂದ ಕೂಡಿದ್ದು ಅದನ್ನು ನಾವೀಗ ಉಳಿಸಿಕೊಳ್ಳ ಬೇಕಿದೆ. ಈಸ್ಟ್ ಇಂಡಿಯಾ ಕಂಪನಿಯ ರಾಯಭಾರಿ ಡ್ಯಾನೀಷ್ ರೇವ್ ಎಂಬವರು ಕಪಿಲಾ ನದಿಯಾ ಈ ಸೇತುವೆ ಕುರಿತು ೧೭೭೯ ಆಗಸ್ಟ್ ೨೩ ರಂದು ದಾಖಲಿಸಿದ್ದಾರೆ.
೧೦ ಅಡಿ ವಿಸ್ತಾರದ ಗೋಥಿಕ್ ಶೈಲಿಯ ಇತಿಹಾಸ ಹೊಂದಿರುವ ಕಮಾನುಗಳ ಸರಣಿಯಿಂದ ಕೂಡಿದ ಈ ಸೇತುವೆ ೮ ಅಡಿ ಅಗಲದ ಮಧ್ಯಸ್ಥಿಕೆಯ ಬೃಹತ್ತಾದ ಸ್ತಂಭಗಳನ್ನು ಹೊಂದಿದೆ. ಆರ್ಚ್ ಕ್ರೈಸ್ಟ್ ಮೇಲೆ ೫ ಅಡಿಗಳಿಗಿಂತ ಹೆಚ್ಚು ಅಗಲದ ಅಡಿಪಾಯದ ಕಲ್ಲಿನ ಸ್ತರಗಳ ಮೇಲೆ ಇದನ್ನು ನಿಲ್ಲಿಸಲಾಗಿದೆ. ಮೂರು ಶತಮಾನಗಳ ಇತಿಹಾಸ ಹೊಂದಿರುವ ಈ ಸೇತುವೆಮ ಕಪಿಲೆಯಲ್ಲಿ ಬಂದ ಪ್ರವಾಹಗಳಿಗೆ ಜಗ್ಗದೆ ಅಳುಕದೆ ನಮ್ಮ ಮುಂದೆ ನಿಂತಿರುವುದೇ ನಮ್ಮವರ ಅಂದಿನ ಕಾಲದ ತಾಂತ್ರಿಕತೆಗೆ ಸಾಕ್ಷಿಯಾಗಿದೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…