ಆಂದೋಲನ 50

ʼಜನರ ಧ್ವನಿಯಾಗಿರುವ ಆಂದೋಲನʼ: ಭಾರತೀಶಂಕರ್‌

ತಿ.ನರಸೀಪುರ: ದಲಿತರು, ಶೋಷಿತರು, ದಮನಿತರ ಧ್ವನಿಯಾಗಿ ಕೆಲಸ ಮಾಡುತ್ತಿರುವ ‘ಆಂದೋಲನ’ ನೂರು ವರ್ಷಗಳನ್ನು ಪೂರೈಸಬೇಕು. ರಾಜಶೇಖರ ಕೋಟಿ ಅವರು ಹಾಕಿದ ಫೌಂಡೇಷನ್‌ನ್ನು ಮಕ್ಕಳಾದ ರವಿ ಕೋಟಿ, ರಶ್ಮಿಕೋಟಿ ಮುಂದುವರಿಸಿಕೊಂಡು ಬಂದಿರುವುದರಿಂದ ಓದುಗ ಸಮೂಹ ಬೆನ್ನಿಗೆ ನಿಲ್ಲಬೇಕು ಎಂದು ಮಾಜಿ ಶಾಸಕ ಡಾ.ಎನ್.ಎಲ್.ಭಾರತೀಶಂಕರ್ ಹೇಳಿದರು.

ಪಟ್ಟಣದಲ್ಲಿ ನಡೆದ ಆಂದೋಲನ ದಿನಪತ್ರಿಕೆ 50 ಸಾರ್ಥಕ ಪಯಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಐವತ್ತು ವರ್ಷಗಳು ತುಂಬಿರುವ ಆಂದೋಲನ ತನ್ನ ಸಿದ್ಧಾಂತ, ವಿಚಾರವನ್ನು ಸದಾ ಉಳಿಸಿಕೊಂಡು ಜನರ ಪರ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಹೈಸ್ಕೂಲ್ ವಿದ್ಯಾರ್ಥಿ ಆಗಿದ್ದಾಗ ಆಂದೋಲನ ಪತ್ರಿಕೆ ಹೊರ ಬರುತ್ತಿತ್ತು. ಆಂದೋಲನ ಜೊತೆಗೆ ನಾವು ಬೆಳೆದು ಬಂದಿದ್ದೇವೆ. ತಿ. ನರಸೀಪುರ ತಾಲ್ಲೂಕಿನಲ್ಲಿ ಕಾವೇರಿ, ಕಪಿಲ ಹಾಗೂ ಸ್ಪಟಿಕ ಸಂಗಮವಾಗಿ ಗಮನ ಸೆಳೆದಿರುವ ಜತೆಗೆ ಹಲವಾರು ವಿಚಾರಗಳಲ್ಲಿ ತಾಲ್ಲೂಕು  ಪ್ರಥಮವನ್ನು ಹೊಂದಿದೆ. ಎನ್.ರಾಚಯ್ಯ ,ಟಿ.ಪಿ.ಬೋರಯ್ಯ,ಟಿ.ಎನ್.ನರಸಿಂಹಮೂರ್ತಿ,ಎಂ.ರಾಜಶೇಖರ ಮೂರ್ತಿ ಸೇರಿದಂತೆ ಅನೇಕ ಹಿರಿಯರು ಈ ತಾಲ್ಲೂಕಿನಲ್ಲಿ ಹುಟ್ಟಿ ಹೆಸರು ಗಳಿಸಿದವರಾಗಿದ್ದಾರೆ ಎಂದರು. ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗದೊಡನೆ ಪತ್ರಿಕಾರಂಗ ಕೆಲಸ ಮಾಡಿಕೊಂಡು ಬಂದು ತಮ್ಮ  ಪ್ರಭಾವವನ್ನು ಬೀರಿದೆ. ಪ್ರಸ್ತುತ ದಿನದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಮಹತ್ವ ಕಳೆದುಕೊಳ್ಳುವಂತಾಗಿದೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಜ್ಜನರು ಮೌನವಾಗಿದ್ದರೆ, ದುಷ್ಟರು ಮುಂದೆ ಬಂದಿದ್ದಾರೆ. ಸಮಾಜ ತಪ್ಪು ದಾರಿಗೆ ಸಾಗುವುದನ್ನು ತಡೆಯಲು ಸಜ್ಜನರು ಮೌನ ಮುರಿಯಬೇಕಾಗಿದೆ ಎಂದು ಸಲಹೆ ನೀಡಿದರು.

andolanait

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

6 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

6 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

7 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

7 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

7 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

7 hours ago