ತಿ.ನರಸೀಪುರ: ದಲಿತರು, ಶೋಷಿತರು, ದಮನಿತರ ಧ್ವನಿಯಾಗಿ ಕೆಲಸ ಮಾಡುತ್ತಿರುವ ‘ಆಂದೋಲನ’ ನೂರು ವರ್ಷಗಳನ್ನು ಪೂರೈಸಬೇಕು. ರಾಜಶೇಖರ ಕೋಟಿ ಅವರು ಹಾಕಿದ ಫೌಂಡೇಷನ್ನ್ನು ಮಕ್ಕಳಾದ ರವಿ ಕೋಟಿ, ರಶ್ಮಿಕೋಟಿ ಮುಂದುವರಿಸಿಕೊಂಡು ಬಂದಿರುವುದರಿಂದ ಓದುಗ ಸಮೂಹ ಬೆನ್ನಿಗೆ ನಿಲ್ಲಬೇಕು ಎಂದು ಮಾಜಿ ಶಾಸಕ ಡಾ.ಎನ್.ಎಲ್.ಭಾರತೀಶಂಕರ್ ಹೇಳಿದರು.
ಪಟ್ಟಣದಲ್ಲಿ ನಡೆದ ಆಂದೋಲನ ದಿನಪತ್ರಿಕೆ 50 ಸಾರ್ಥಕ ಪಯಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಐವತ್ತು ವರ್ಷಗಳು ತುಂಬಿರುವ ಆಂದೋಲನ ತನ್ನ ಸಿದ್ಧಾಂತ, ವಿಚಾರವನ್ನು ಸದಾ ಉಳಿಸಿಕೊಂಡು ಜನರ ಪರ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಹೈಸ್ಕೂಲ್ ವಿದ್ಯಾರ್ಥಿ ಆಗಿದ್ದಾಗ ಆಂದೋಲನ ಪತ್ರಿಕೆ ಹೊರ ಬರುತ್ತಿತ್ತು. ಆಂದೋಲನ ಜೊತೆಗೆ ನಾವು ಬೆಳೆದು ಬಂದಿದ್ದೇವೆ. ತಿ. ನರಸೀಪುರ ತಾಲ್ಲೂಕಿನಲ್ಲಿ ಕಾವೇರಿ, ಕಪಿಲ ಹಾಗೂ ಸ್ಪಟಿಕ ಸಂಗಮವಾಗಿ ಗಮನ ಸೆಳೆದಿರುವ ಜತೆಗೆ ಹಲವಾರು ವಿಚಾರಗಳಲ್ಲಿ ತಾಲ್ಲೂಕು ಪ್ರಥಮವನ್ನು ಹೊಂದಿದೆ. ಎನ್.ರಾಚಯ್ಯ ,ಟಿ.ಪಿ.ಬೋರಯ್ಯ,ಟಿ.ಎನ್.ನರಸಿಂಹಮೂರ್ತಿ,ಎಂ.ರಾಜಶೇಖರ ಮೂರ್ತಿ ಸೇರಿದಂತೆ ಅನೇಕ ಹಿರಿಯರು ಈ ತಾಲ್ಲೂಕಿನಲ್ಲಿ ಹುಟ್ಟಿ ಹೆಸರು ಗಳಿಸಿದವರಾಗಿದ್ದಾರೆ ಎಂದರು. ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗದೊಡನೆ ಪತ್ರಿಕಾರಂಗ ಕೆಲಸ ಮಾಡಿಕೊಂಡು ಬಂದು ತಮ್ಮ ಪ್ರಭಾವವನ್ನು ಬೀರಿದೆ. ಪ್ರಸ್ತುತ ದಿನದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಮಹತ್ವ ಕಳೆದುಕೊಳ್ಳುವಂತಾಗಿದೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಜ್ಜನರು ಮೌನವಾಗಿದ್ದರೆ, ದುಷ್ಟರು ಮುಂದೆ ಬಂದಿದ್ದಾರೆ. ಸಮಾಜ ತಪ್ಪು ದಾರಿಗೆ ಸಾಗುವುದನ್ನು ತಡೆಯಲು ಸಜ್ಜನರು ಮೌನ ಮುರಿಯಬೇಕಾಗಿದೆ ಎಂದು ಸಲಹೆ ನೀಡಿದರು.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…