ತಿ.ನರಸೀಪುರ: ದಲಿತರು, ಶೋಷಿತರು, ದಮನಿತರ ಧ್ವನಿಯಾಗಿ ಕೆಲಸ ಮಾಡುತ್ತಿರುವ ‘ಆಂದೋಲನ’ ನೂರು ವರ್ಷಗಳನ್ನು ಪೂರೈಸಬೇಕು. ರಾಜಶೇಖರ ಕೋಟಿ ಅವರು ಹಾಕಿದ ಫೌಂಡೇಷನ್ನ್ನು ಮಕ್ಕಳಾದ ರವಿ ಕೋಟಿ, ರಶ್ಮಿಕೋಟಿ ಮುಂದುವರಿಸಿಕೊಂಡು ಬಂದಿರುವುದರಿಂದ ಓದುಗ ಸಮೂಹ ಬೆನ್ನಿಗೆ ನಿಲ್ಲಬೇಕು ಎಂದು ಮಾಜಿ ಶಾಸಕ ಡಾ.ಎನ್.ಎಲ್.ಭಾರತೀಶಂಕರ್ ಹೇಳಿದರು.
ಪಟ್ಟಣದಲ್ಲಿ ನಡೆದ ಆಂದೋಲನ ದಿನಪತ್ರಿಕೆ 50 ಸಾರ್ಥಕ ಪಯಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಐವತ್ತು ವರ್ಷಗಳು ತುಂಬಿರುವ ಆಂದೋಲನ ತನ್ನ ಸಿದ್ಧಾಂತ, ವಿಚಾರವನ್ನು ಸದಾ ಉಳಿಸಿಕೊಂಡು ಜನರ ಪರ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಹೈಸ್ಕೂಲ್ ವಿದ್ಯಾರ್ಥಿ ಆಗಿದ್ದಾಗ ಆಂದೋಲನ ಪತ್ರಿಕೆ ಹೊರ ಬರುತ್ತಿತ್ತು. ಆಂದೋಲನ ಜೊತೆಗೆ ನಾವು ಬೆಳೆದು ಬಂದಿದ್ದೇವೆ. ತಿ. ನರಸೀಪುರ ತಾಲ್ಲೂಕಿನಲ್ಲಿ ಕಾವೇರಿ, ಕಪಿಲ ಹಾಗೂ ಸ್ಪಟಿಕ ಸಂಗಮವಾಗಿ ಗಮನ ಸೆಳೆದಿರುವ ಜತೆಗೆ ಹಲವಾರು ವಿಚಾರಗಳಲ್ಲಿ ತಾಲ್ಲೂಕು ಪ್ರಥಮವನ್ನು ಹೊಂದಿದೆ. ಎನ್.ರಾಚಯ್ಯ ,ಟಿ.ಪಿ.ಬೋರಯ್ಯ,ಟಿ.ಎನ್.ನರಸಿಂಹಮೂರ್ತಿ,ಎಂ.ರಾಜಶೇಖರ ಮೂರ್ತಿ ಸೇರಿದಂತೆ ಅನೇಕ ಹಿರಿಯರು ಈ ತಾಲ್ಲೂಕಿನಲ್ಲಿ ಹುಟ್ಟಿ ಹೆಸರು ಗಳಿಸಿದವರಾಗಿದ್ದಾರೆ ಎಂದರು. ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗದೊಡನೆ ಪತ್ರಿಕಾರಂಗ ಕೆಲಸ ಮಾಡಿಕೊಂಡು ಬಂದು ತಮ್ಮ ಪ್ರಭಾವವನ್ನು ಬೀರಿದೆ. ಪ್ರಸ್ತುತ ದಿನದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಮಹತ್ವ ಕಳೆದುಕೊಳ್ಳುವಂತಾಗಿದೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಜ್ಜನರು ಮೌನವಾಗಿದ್ದರೆ, ದುಷ್ಟರು ಮುಂದೆ ಬಂದಿದ್ದಾರೆ. ಸಮಾಜ ತಪ್ಪು ದಾರಿಗೆ ಸಾಗುವುದನ್ನು ತಡೆಯಲು ಸಜ್ಜನರು ಮೌನ ಮುರಿಯಬೇಕಾಗಿದೆ ಎಂದು ಸಲಹೆ ನೀಡಿದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…