ತಿ.ನರಸೀಪುರ: ದಲಿತರು, ಶೋಷಿತರು, ದಮನಿತರ ಧ್ವನಿಯಾಗಿ ಕೆಲಸ ಮಾಡುತ್ತಿರುವ ‘ಆಂದೋಲನ’ ನೂರು ವರ್ಷಗಳನ್ನು ಪೂರೈಸಬೇಕು. ರಾಜಶೇಖರ ಕೋಟಿ ಅವರು ಹಾಕಿದ ಫೌಂಡೇಷನ್ನ್ನು ಮಕ್ಕಳಾದ ರವಿ ಕೋಟಿ, ರಶ್ಮಿಕೋಟಿ ಮುಂದುವರಿಸಿಕೊಂಡು ಬಂದಿರುವುದರಿಂದ ಓದುಗ ಸಮೂಹ ಬೆನ್ನಿಗೆ ನಿಲ್ಲಬೇಕು ಎಂದು ಮಾಜಿ ಶಾಸಕ ಡಾ.ಎನ್.ಎಲ್.ಭಾರತೀಶಂಕರ್ ಹೇಳಿದರು.
ಪಟ್ಟಣದಲ್ಲಿ ನಡೆದ ಆಂದೋಲನ ದಿನಪತ್ರಿಕೆ 50 ಸಾರ್ಥಕ ಪಯಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಐವತ್ತು ವರ್ಷಗಳು ತುಂಬಿರುವ ಆಂದೋಲನ ತನ್ನ ಸಿದ್ಧಾಂತ, ವಿಚಾರವನ್ನು ಸದಾ ಉಳಿಸಿಕೊಂಡು ಜನರ ಪರ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಹೈಸ್ಕೂಲ್ ವಿದ್ಯಾರ್ಥಿ ಆಗಿದ್ದಾಗ ಆಂದೋಲನ ಪತ್ರಿಕೆ ಹೊರ ಬರುತ್ತಿತ್ತು. ಆಂದೋಲನ ಜೊತೆಗೆ ನಾವು ಬೆಳೆದು ಬಂದಿದ್ದೇವೆ. ತಿ. ನರಸೀಪುರ ತಾಲ್ಲೂಕಿನಲ್ಲಿ ಕಾವೇರಿ, ಕಪಿಲ ಹಾಗೂ ಸ್ಪಟಿಕ ಸಂಗಮವಾಗಿ ಗಮನ ಸೆಳೆದಿರುವ ಜತೆಗೆ ಹಲವಾರು ವಿಚಾರಗಳಲ್ಲಿ ತಾಲ್ಲೂಕು ಪ್ರಥಮವನ್ನು ಹೊಂದಿದೆ. ಎನ್.ರಾಚಯ್ಯ ,ಟಿ.ಪಿ.ಬೋರಯ್ಯ,ಟಿ.ಎನ್.ನರಸಿಂಹಮೂರ್ತಿ,ಎಂ.ರಾಜಶೇಖರ ಮೂರ್ತಿ ಸೇರಿದಂತೆ ಅನೇಕ ಹಿರಿಯರು ಈ ತಾಲ್ಲೂಕಿನಲ್ಲಿ ಹುಟ್ಟಿ ಹೆಸರು ಗಳಿಸಿದವರಾಗಿದ್ದಾರೆ ಎಂದರು. ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗದೊಡನೆ ಪತ್ರಿಕಾರಂಗ ಕೆಲಸ ಮಾಡಿಕೊಂಡು ಬಂದು ತಮ್ಮ ಪ್ರಭಾವವನ್ನು ಬೀರಿದೆ. ಪ್ರಸ್ತುತ ದಿನದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಮಹತ್ವ ಕಳೆದುಕೊಳ್ಳುವಂತಾಗಿದೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಜ್ಜನರು ಮೌನವಾಗಿದ್ದರೆ, ದುಷ್ಟರು ಮುಂದೆ ಬಂದಿದ್ದಾರೆ. ಸಮಾಜ ತಪ್ಪು ದಾರಿಗೆ ಸಾಗುವುದನ್ನು ತಡೆಯಲು ಸಜ್ಜನರು ಮೌನ ಮುರಿಯಬೇಕಾಗಿದೆ ಎಂದು ಸಲಹೆ ನೀಡಿದರು.
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…
Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…
ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…