ಆಂದೋಲನ 50

ಸಾಮಾಜಿಕ ನ್ಯಾಯಕ್ಕಾಗಿ ಸದಾ ಬದ್ಧವಾದ ಆಂದೋಲನ ; ಭಾಗ -1

ಚಳವಳಿಗಳ ಮಡಿಲಲ್ಲೇ ಬೆಳೆದ ‘ಆಂದೋಲನ’ಕ್ಕೆ ಸದಾ ಜನಪರ ಚಿಂತನೆಗಳಿಗೆ ಕಿವಿಯಾಗಿ, ನೋವುಗಳ ಪರಿಹಾರಕ್ಕೆ ಧ್ವನಿಯಾಗಿ ಮೌಲ್ಯಭರಿತ ಸುದ್ದಿಗಳನ್ನು ಪ್ರಕಟಿಸುವುದೇ ಏಕೈಕ ಗುರಿಯಾಗಿದೆ. ಅಷ್ಟೇ ಅಲ್ಲದೆ, ವ್ಯಕ್ತಿಗತ ಅನ್ಯಾಯವಾದರೂ, ಸಾಮೂಹಿಕವಾಗಿ ದೌರ್ಜನ್ಯ ನಡೆದರೂ ‘ಪತ್ರಿಕೆ’ ಸಂತ್ರಸ್ತರ ಪರವಾಗಿ ನಿಂತು ಚಿಕಿತ್ಸಕ ದೃಷ್ಟಿಯಿಂದ ಸುದ್ದಿಗಳನ್ನು ಬಿತ್ತರಿಸುತ್ತಿದೆ. ೫೦ ವರ್ಷಗಳ ಪಯಣದಲ್ಲಿ ಇಂತಹ ಅನೇಕ ಪ್ರಕರಣಗಳಿಗೆ ‘ಪತ್ರಿಕೆ’ ಸಾಕ್ಷಿಯಾಗಿದೆ. ನೊಂದವರಿಗೆ ನ್ಯಾಯ ಒದಗಿಸುವ ಹೋರಾಟಕ್ಕೆ ವೇದಿಕೆಯಾಗಿದೆ. ಅದರಲ್ಲಿಯೂ ಪ್ರಮುಖವಾಗಿ ವಿಕ್ರಾಂತ್ ಟೈರ್ಸ್‌ ಕಾರ್ಖಾನೆ ಕಾರ್ಮಿಕ ಸತ್ಯದೇವ್ ಕೊಲೆ ಪ್ರಕರಣ, ಹಂಗರಹಳ್ಳಿ ಜೀತಕ್ಕಿದ್ದವರಿಗೆ ಬಿಡುಗಡೆ ಸಿಕ್ಕಿದ್ದು ಮತ್ತು ಜಾತಿ ದಳ್ಳುರಿಯಿಂದ ಬೆಂದು ಹೋದ ಬದನವಾಳು ದುರಂತದ ಸಂದರ್ಭಗಳಲ್ಲಿ ಪ್ರಾದೇಶಿಕ ಪತ್ರಿಕೆಯಾಗಿಯೂ ‘ಆಂದೋಲನ’ ತಳೆದ ದಿಟ್ಟ ನಿಲುವು ಪತ್ರಿಕಾ ಕ್ಷೇತ್ರದಲ್ಲಿ ಅನುಕರಣೀಯ. ಸತ್ಯದೇವ್ ಕೊಲೆ ಪ್ರಕರಣ ಮುಚ್ಚಿಯೇ ಹೋಗಿತ್ತು. ಆರೋಪಿ ಮೈಸೂರಿನಲ್ಲೇ ಡಿಸಿಪಿಯಾಗಿದ್ದ ಸೋಮಶೇಖರ್! ಸತ್ಯಶೋಧನೆಗಾಗಿ ‘ಪತ್ರಿಕೆ’ ಅವರನ್ನೂ ಎದುರು ಹಾಕಿಕೊಂಡಿತ್ತು. ಹಂಗರಹಳ್ಳಿಯಲ್ಲಿ ಕಾಲುಗಳಿಗೆ ಸರಪಳಿ ಬಿಗಿಸಿಕೊಂಡಿದ್ದ ಕಾರ್ಮಿಕರ ಬಿಡುಗಡೆಗೆ ಶ್ರಮ ವಹಿಸಿದ ರೈತ ಸಂಘದ ಮುಖಂಡರಿಗೆ ಸಹಕಾರ ನೀಡಿದ್ದಲ್ಲದೆ, ಬದನವಾಳು ದುರಂತದಲ್ಲಿ ಸಂತ್ರಸ್ತರ ಪರ ನಿಲ್ಲುವ ಮೂಲಕ ‘ಪತ್ರಿಕೆ’, ಇನ್ನೊಂದು ಕೋಮಿನ ಬಹಿಷ್ಕಾರಕ್ಕೆ ಒಳಗಾಗುವ ಹಂತಕ್ಕೂ ಹೋಗಿತ್ತು.

ಡಿಸಿಪಿಯನ್ನೇ ಜೈಲಿಗಟ್ಟಿದ ‘ಸತ್ಯದೇವ್ ಕೊಲೆ’ ಪ್ರಕರಣ

ಡಿಸಿಪಿ ಮತ್ತು ಅವರ ಕುಟುಂಬ ಲಲಿತ ಮಹಲ್ ಪ್ಯಾಲೆಸ್ ಈಜುಕೊಳದಲ್ಲಿ ವಿಹರಿಸುತ್ತಿದ್ದ ಸಂದರ್ಭದಲ್ಲಿ ವಿಕ್ರಾಂತ್ ಟೈರ್ಸ್‌ ಕಾರ್ಮಿಕ ಸತ್ಯದೇವ್ ಅಲ್ಲಿಗೆ ಹೋಗಿದ್ದ. ಅದರಿಂದ ಕುಪಿತಗೊಂಡ ಡಿಸಿಪಿ ಆತನ ಮೇಲೆ ಹಲ್ಲೆ ನಡೆಸಿದ್ದರಿಂದ ಸತ್ಯದೇವ್ ಮೃತಪಟ್ಟ. ಪ್ರಕರಣವನ್ನು ಮುಚ್ಚಿ ಹಾಕಲು ಡಿಸಿಪಿ ಮೃತದೇಹವನ್ನು ಈಜುಕೊಳಕ್ಕೆ ತಳ್ಳಿದ್ದರು. ಆದರೆ, ‘ಆಂದೋಲನ’ದ ವರದಿಗಾರರು, ಸಂಪಾದಕರ ಜನಪರ ಕಾಳಜಿಯಿಂದ ಸತ್ಯವನ್ನು ಮುಚ್ಚಿಡುವುದು ಸಾಧ್ಯವಾಗಲಿಲ್ಲ. 

ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ತನಿಖಾ ಪತ್ರಿಕೋದ್ಯಮದ ಬಗ್ಗೆ ಪಾಠ ಹೇಳುವಾಗ ಮೈಸೂರಿನ ಸತ್ಯದೇವ್ ಕೊಲೆ ಪ್ರಕರಣ ಬಯಲು ಮಾಡಿದ್ದನ್ನು ಆಗಾಗ ಉಲ್ಲೇಖಿಸಲಾಗುತ್ತದೆ. ಇದನ್ನ ಬಯಲಿಗೆಳೆದಿದ್ದು ಆಂದೋಲನ.

ಅಮಾಯಕ ವ್ಯಕ್ತಿಯೊಬ್ಬನನ್ನು ಪೊಲೀಸ್ ಅಧಿಕಾಬ್ಬ ಈಜುಕೊಳದಲ್ಲಿ ಮುಳುಗಿಸಿ ಕೊಲೆ ಮಾಡಿದ್ದು, ಅದನ್ನು ಮುಚ್ಚಿ ಹಾಕುವುದಕ್ಕೆ ನಡೆಸಿದರೂ ‘ಆಂದೋಲನ’ ದಿನಪತ್ರಿಕೆಯ ಎಕ್ಸ್‌ರೇ ಕಣ್ಣುಗಳಿಂದ ತಪ್ಪಿಸಿಕೊಳ್ಳುವುದು ಸಾಧ್ಯವಾಗಲಿಲ್ಲ. ಅದೊಂದು ಅಸ್ವಾಭಾವಿಕ ಸಾವು ಎಂದು ಸಮಾಜವನ್ನು ನಂಬಿಸಲಾಗಿತ್ತು. ಆದರೆ, ಅಂದು ‘ಆಂದೋಲನ’ ವರದಿಗಾರರಾಗಿದ್ದ ‘ಅಂಶಿ ಪ್ರಸನ್ನಕುಮಾರ್’ ಅವರಿಗೆ ಸಿಕ್ಕಿದ ಕೂದಲೆಳೆಯಂತಹ ಮಾಹಿತಿ ಡಿಸಿಪಿ ಹುದ್ದೆಯಲ್ಲಿದ್ದ ಅಧಿಕಾರಿಯನ್ನು ಕಾನೂನಿನ ಮುಷ್ಟಿಗೊಪ್ಪಿಸುವಲ್ಲಿ ಪ್ರಮುಖ ಪಾತ್ರವಹಿಸಿತು.

ಅದು ೧೯೯೦ರ ದಶಕ. ಮೈಸೂರಿನ ಲಲಿತ ಮಹಲ್ ಪ್ಯಾಲೇಸ್‌ನ ಈಜುಕೊಳದಲ್ಲಿ ಸತ್ಯದೇವ್ ಎಂಬ ಯುವಕನ ಶವ ಪತ್ತೆಯಾಗಿತ್ತು. ಈ ಸಂಬಂಧ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಿಸಲಾಗಿತ್ತು. ಒಂದು ದಿನ ವರದಿಗಾರ ಅಂಶಿ ಅವರಿಗೆ ಫೋನ್ ಕರೆೊಂಂದು ಬರುತ್ತದೆ. ‘‘ಸತ್ಯದೇವ್ ಶವ ಸಿಕ್ಕಿದಾಗ ಡಿಸಿಪಿ ಅಲ್ಲಿದ್ದರು. ಆದರೆ, ನಾನು ಅಲ್ಲಿರಲಿಲ್ಲ ಎಂದು ಎಲ್ಲರಿಗೂ ವೈರ್‌ಲೆಸ್ ಮೂಲಕ ಸಂದೇಶ ರವಾನಿಸಿದ್ದಾರೆ’’ ಎಂಬುದಾಗಿ ಇನ್‌ಸ್ಪೆಕ್ಟರ್ ದರ್ಜೆ ಅಧಿಕಾರಿೊಂಬ್ಬರು ಮಾಹಿತಿ ನೀಡಿದ್ದರು. ಅದರ ಬೆನ್ನುಬಿದ್ದಾಗ, ಮರಣೋತ್ತರ ವರದಿಯಲ್ಲಿ ಕೂಡ ಶವದ ಹೊಟ್ಟೆಯಲ್ಲಿ ನೀರು ಇರಲಿಲ್ಲ ಎಂದು ದಾಖಲಾಗಿತ್ತು. ಅಲ್ಲದೆ, ಸತ್ಯದೇವ್ ಕುತ್ತಿಗೆಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸಾವು ಸಂಭವಿಸಿದೆ ಎಂದು ಹೇಳಲಾಗಿತ್ತು. ಅಂದರೆ ಉಸಿರು ಹೋದ ಮೇಲೆ ನೀರಿಗೆ ಬಿದ್ದಿರಬೇಕು ಅಥವಾ ಯಾರೋ ಸಾಯಿಸಿ ಬಳಿಕ ನೀರಿಗೆ ಹಾಕಿರಬೇಕು ಎನ್ನುವುದು ಸ್ಪಷ್ಟವಾಗಿತ್ತು.

ಹಲವು ಪೊಲೀಸ್ ಕುಟುಂಬದವರು ಲಲಿತ ಮಹಲ್ ಈಜುಕೊಳಕ್ಕೆ ವಿಹಾರಕ್ಕಾಗಿ ಹೋಗುತ್ತಿದ್ದರು. ಸತ್ಯದೇವ್ ಪ್ರತಿದಿನ ಆ ಈಜುಕೊಳದತ್ತ ಹೋಗುತ್ತಿದ್ದ ಎಂಬ ಅಂಶಗಳೂ ಒಂದಕ್ಕೊಂದು ತಾಳೆಯಾಗುತ್ತಿದ್ದವು. ಅಂದರೆ ಘಟನೆ ನಡೆದ ದಿನ ಡಿಸಿಪಿ ಕೂಡ ಆ ಈಜುಕೊಳದ ಬಳಿ ಇದ್ದರು ಎಂಬುದಕ್ಕೆ ಸಾಕ್ಷಿಗಳೂ ಇದ್ದವು. ಇದನ್ನೇ ಆಧರಿಸಿ ‘ಆಂದೋಲನ’ದಲ್ಲಿ ‘ವಿಕ್ರಾಂತ್ ಟೈರ್ಸ್‌ ಕಾರ್ಮಿಕ ಸತ್ಯದೇವ್ ಕೊಲೆಯಾದನೆ?’ ಶೀರ್ಷಿಕೆಯಡಿ ವರದಿ ಪ್ರಕಟವಾಯಿತು. ಅದೇ ದಿನ ಸತ್ಯದೇವ್ ತಾಯಿ ಕೂಡ ತನ್ನ ಮಗ ಕೊಲೆಯಾಗಿರಬಹುದು ತನಿಖೆ ನಡೆಸಿ ಎಂದು ದೂರು ನೀಡಿದರು.

ಡಿಸಿಪಿಯೇ ಆರೋಪಿಯಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಅಂದಿನ ಸಿಒಡಿಗೆ ವಹಿಸಲಾಯಿತು. ಡಿಸಿಪಿ ಬಂಧನಕ್ಕೊಳಗಾದರು. ಅವರು ಜಾಮೀನು ಸಿಗುವ ತನಕ ಸೆರೆಮನೆಯಲ್ಲಿರುವುದು ಅನಿವಾರ್ಯವಾಯಿತು. ಜಿಲ್ಲಾ ನ್ಯಾಯಾಲಯ ಡಿಸಿಪಿಯನ್ನು ಆರೋಪ ಮುಕ್ತಗೊಳಿಸಿದರೂ, ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಆರೋಪಿಗೆ ೧೦ ವರ್ಷ ಸಜೆ ವಿಧಿಸಲಾಯಿತು. ನಂತರ ಆತ ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲು ಹತ್ತಿದರೂ, ಅಲ್ಲಿ ಪ್ರಕರಣ ವಿಚಾರಣಾ ಹಂತದಲ್ಲಿದ್ದಾಗಲೇ ಆರೋಪಿ ನಿಧನರಾದರು. ಅದರಿಂದ ಪ್ರಕರಣವನ್ನು ಮುಕ್ತಾಯಗೊಳಿಸಲಾಯಿತು.

andolana

Recent Posts

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

1 hour ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

1 hour ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

2 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

3 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

4 hours ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

4 hours ago