-ಶ್ರೀಧರ್ ಆರ್ ಭಟ್ಟ
ಗಾಂಧೀಜಿ ಭೇಟಿ ನೀಡಿದ್ದ ಬದನವಾಳು ಗ್ರಾಮದಲ್ಲಿ ನಡೆದ ದುರಂತದ ಕಪ್ಪುಚುಕ್ಕಿ ಈಗ ಇತಿಹಾಸದ ಪುಟದಲ್ಲಿ ಸೇರಿ ಹೋಗಿದೆ. ಅದಾಗಿ ಈಗಾಗಲೇ ೨೯ ವರ್ಷಗಳೇ ಗತಿಸಿ ಹೋಗಿವೆ. ೧೯೯೩ರ ಆರಂಭದಲ್ಲೇ ಇಲ್ಲೊಂದು ಅಮಾನವೀಯ ಘಟನೆ ನಡೆದು ಕಡು ದ್ವೇಷ, ಅಸೂೆುಂಗಳ ಗೂಡಾಗಿ ದುರಂತಕ್ಕೆ ಕಾರಣವಾಗಿ ಹೋಯಿತು.
೧೯೯೩ರ ಜನವರಿಯಲ್ಲಿ ಆರಂಭವಾದ ಈ ದುರಂತದ ವಿವರಗಳನ್ನು ನಿರ್ಭೀತವಾಗಿ ಪ್ರಕಟಿಸಿದ ಏಕೈಕ ದಿನಪತ್ರಿಕೆ ‘ಆಂದೋಲನ’ ಎಂದರೆ ತಪ್ಪಾಗಲಾರದು.
‘ಆಂದೋಲನ’ ಸಂಪಾದಕರಾಗಿದ್ದ ರಾಜಶೇಖರ ಕೋಟಿಯವರು ಸತ್ಯಸಂಗತಿಯ ವರದಿಗಳನ್ನು ಯಾವುದೇ ಮುಲಾಜಿಲ್ಲದೆ ಪ್ರಕಟಿಸುವ ಮೂಲಕ ‘ನಾನಿದ್ದೇನೆ’ ಎಂಬ ಸ್ಪಷ್ಟ ಸಂದೇಶವೂ ರವಾನಿಸಿದಂತೆ ಕೆಲಸ ನಡೆದಿತ್ತು. ನಂಜನಗೂಡು ತಾಲ್ಲೂಕು ಬದನವಾಳು ಗ್ರಾಮದ ಹೊರವಲಯದಲ್ಲಿರುವ ಶ್ರೀ ಸಿದ್ಧೇಶ್ವರ ದೇವಾಲಯದ ಪ್ರವೇಶವೇ ಈ ದುರಂತಕ್ಕೆ ಮೂಲವಾಗಿತ್ತು.ಬೂದಿ ಮುಚ್ಚಿದ ಕೆಂಡವಾಗಿದ್ದ ಪರಸ್ಪರರ ಅನುಮಾನದ ಹುತ್ತ ಒಡೆಯಲು ದೇವಾಲಯದ ಪ್ರವೇಶ ನೆಪವಾಯಿತು.
ಜನವರಿ ೩೦, ೧೯೯೩ ರಂದು ನಿಗದಿಯಾಗಿದ್ದ ಈ ದೇವಾಲಯದ ಉದ್ಘಾಟನಾ ಸಮಾರಂಭದಿಂದ ಆರಂಭವಾದ ‘ಆಂದೋಲನ’ ಬದನವಾಳಿನ ವರದಿ ಮಾರ್ಚ್ ೨೫, ೧೯೯೩ರಂದು ನಡೆದ ದಲಿತರ ಹತ್ಯೆ, ನಂತರ ನಡೆದ ಪರ ವಿರೋಧ ಮೆರವಣಿಗೆ, ಏಪ್ರಿಲ್ ೨೬ ರಂದು ನಡೆದ ಗೋಲಿಬಾರ್ ಹಾಗೂ ಅದರ ದಳ್ಳುರಿಯ ಸುದ್ದಿ ..ಇದೆಲ್ಲವನ್ನೂ ಸವಿವರವಾಗಿ ವರದಿ ಮಾಡಿದ್ದ ‘ಆಂದೋಲನ’ ಪತ್ರಿಕಾ ಧರ್ಮದ ಇತಿ ಮಿತಿಯಲ್ಲಿ ಸಮಾಜದ ಸೇತುವಾಗಿಯೂ ಕೆಲಸ ಮಾಡಿತು. ತನ್ನ ನಿಷ್ಠುರ ವರದಿಗಳಿಂದಾಗಿ ಪತ್ರಿಕೆ ಪರ-ವಿರೋಧಿಗಳ ಹೊಗಳಿಕೆ, ತೆಗಳಿಕೆಗಳನ್ನೂ ಅಂದು ಎದುರಿಸಬೇಕಾಯಿತು.
ಆದರೂ ಅಂದಿನ ‘ಆಂದೋಲನ’ ಸಂಪಾದಕ ಮಂಡಳಿ ಎದೆಗುಂದದೆ ಈ ವಿಷಯವನ್ನು ನಿರ್ಭೀತಿಯಿಂದ ವರದಿ ಮಾಡಿ ಈ ಭಾಗದ ಜನಸಾಮಾನ್ಯರ ಪ್ರೀತಿ ಮತ್ತು ಅಭಿಮಾನಕ್ಕೆ ‘ಪತ್ರಿಕೆ’ ಕಾರಣವಾಯಿತು.
ಮಡಿಕೇರಿ: ಸಿದ್ದಾಪುರದಿಂದ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮಾಲ್ದಾರೆ ಗ್ರಾಮ ಸಮೀಪದ ಕುಶಾಲನಗರ ಹಾಗೂ ದೇವಮತಿ ಅರಣ್ಯ ಪ್ರದೇಶದಲ್ಲಿ ಪ್ರವಾಸಿಗರಿಗೆ ಹುಲಿಯೊಂದು…
ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್ಮೆಂಟ್ನಲ್ಲಿ…
ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್ ತಂದರು. ಹಳ್ಳಿಗಳಲ್ಲೂ ಗ್ಯಾಸ್ ಬಂತು. ಈಗ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್ನ ಇಸ್ಪಹಾನ್ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…