ಆಂದೋಲನ 50

ಸಾಮಾಜಿಕ ನ್ಯಾಯಕ್ಕಾಗಿ ಸದಾ ಬದ್ಧವಾದ ಆಂದೋಲನ ; ಭಾಗ-3

ಬದನವಾಳು ದುರಂತ: ವೃತ್ತಿ ಧರ್ಮಕ್ಕೆ ಚ್ಯುತಿ ತಾರದ ‘ಆಂದೋಲನ’

-ಶ್ರೀಧರ್ ಆರ್ ಭಟ್ಟ

ಗಾಂಧೀಜಿ ಭೇಟಿ ನೀಡಿದ್ದ ಬದನವಾಳು ಗ್ರಾಮದಲ್ಲಿ ನಡೆದ ದುರಂತದ ಕಪ್ಪುಚುಕ್ಕಿ ಈಗ ಇತಿಹಾಸದ ಪುಟದಲ್ಲಿ ಸೇರಿ ಹೋಗಿದೆ. ಅದಾಗಿ ಈಗಾಗಲೇ ೨೯ ವರ್ಷಗಳೇ ಗತಿಸಿ ಹೋಗಿವೆ. ೧೯೯೩ರ ಆರಂಭದಲ್ಲೇ ಇಲ್ಲೊಂದು ಅಮಾನವೀಯ ಘಟನೆ ನಡೆದು ಕಡು ದ್ವೇಷ, ಅಸೂೆುಂಗಳ ಗೂಡಾಗಿ ದುರಂತಕ್ಕೆ ಕಾರಣವಾಗಿ ಹೋಯಿತು.

೧೯೯೩ರ ಜನವರಿಯಲ್ಲಿ ಆರಂಭವಾದ ಈ ದುರಂತದ ವಿವರಗಳನ್ನು ನಿರ್ಭೀತವಾಗಿ ಪ್ರಕಟಿಸಿದ ಏಕೈಕ ದಿನಪತ್ರಿಕೆ ‘ಆಂದೋಲನ’ ಎಂದರೆ ತಪ್ಪಾಗಲಾರದು.

‘ಆಂದೋಲನ’ ಸಂಪಾದಕರಾಗಿದ್ದ ರಾಜಶೇಖರ ಕೋಟಿಯವರು ಸತ್ಯಸಂಗತಿಯ ವರದಿಗಳನ್ನು ಯಾವುದೇ ಮುಲಾಜಿಲ್ಲದೆ ಪ್ರಕಟಿಸುವ ಮೂಲಕ ‘ನಾನಿದ್ದೇನೆ’ ಎಂಬ ಸ್ಪಷ್ಟ ಸಂದೇಶವೂ ರವಾನಿಸಿದಂತೆ ಕೆಲಸ ನಡೆದಿತ್ತು. ನಂಜನಗೂಡು ತಾಲ್ಲೂಕು ಬದನವಾಳು ಗ್ರಾಮದ ಹೊರವಲಯದಲ್ಲಿರುವ ಶ್ರೀ ಸಿದ್ಧೇಶ್ವರ ದೇವಾಲಯದ ಪ್ರವೇಶವೇ ಈ ದುರಂತಕ್ಕೆ ಮೂಲವಾಗಿತ್ತು.ಬೂದಿ ಮುಚ್ಚಿದ ಕೆಂಡವಾಗಿದ್ದ ಪರಸ್ಪರರ ಅನುಮಾನದ ಹುತ್ತ ಒಡೆಯಲು ದೇವಾಲಯದ ಪ್ರವೇಶ ನೆಪವಾಯಿತು.

ಜನವರಿ ೩೦, ೧೯೯೩ ರಂದು ನಿಗದಿಯಾಗಿದ್ದ ಈ ದೇವಾಲಯದ ಉದ್ಘಾಟನಾ ಸಮಾರಂಭದಿಂದ ಆರಂಭವಾದ ‘ಆಂದೋಲನ’ ಬದನವಾಳಿನ ವರದಿ ಮಾರ್ಚ್ ೨೫, ೧೯೯೩ರಂದು ನಡೆದ ದಲಿತರ ಹತ್ಯೆ, ನಂತರ ನಡೆದ ಪರ ವಿರೋಧ ಮೆರವಣಿಗೆ, ಏಪ್ರಿಲ್ ೨೬ ರಂದು ನಡೆದ ಗೋಲಿಬಾರ್ ಹಾಗೂ ಅದರ ದಳ್ಳುರಿಯ ಸುದ್ದಿ ..ಇದೆಲ್ಲವನ್ನೂ ಸವಿವರವಾಗಿ ವರದಿ ಮಾಡಿದ್ದ ‘ಆಂದೋಲನ’ ಪತ್ರಿಕಾ ಧರ್ಮದ ಇತಿ ಮಿತಿಯಲ್ಲಿ ಸಮಾಜದ ಸೇತುವಾಗಿಯೂ ಕೆಲಸ ಮಾಡಿತು. ತನ್ನ ನಿಷ್ಠುರ ವರದಿಗಳಿಂದಾಗಿ ಪತ್ರಿಕೆ ಪರ-ವಿರೋಧಿಗಳ ಹೊಗಳಿಕೆ, ತೆಗಳಿಕೆಗಳನ್ನೂ ಅಂದು ಎದುರಿಸಬೇಕಾಯಿತು.
ಆದರೂ ಅಂದಿನ ‘ಆಂದೋಲನ’ ಸಂಪಾದಕ ಮಂಡಳಿ ಎದೆಗುಂದದೆ ಈ ವಿಷಯವನ್ನು ನಿರ್ಭೀತಿಯಿಂದ ವರದಿ ಮಾಡಿ ಈ ಭಾಗದ ಜನಸಾಮಾನ್ಯರ ಪ್ರೀತಿ ಮತ್ತು ಅಭಿಮಾನಕ್ಕೆ ‘ಪತ್ರಿಕೆ’ ಕಾರಣವಾಯಿತು.

andolana

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

8 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

8 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

9 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

9 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

10 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

11 hours ago