ಆಂದೋಲನ 50

ಸಾಮಾಜಿಕ ನ್ಯಾಯಕ್ಕಾಗಿ ಸದಾ ಬದ್ಧವಾದ ಆಂದೋಲನ ; ಭಾಗ-3

ಬದನವಾಳು ದುರಂತ: ವೃತ್ತಿ ಧರ್ಮಕ್ಕೆ ಚ್ಯುತಿ ತಾರದ ‘ಆಂದೋಲನ’

-ಶ್ರೀಧರ್ ಆರ್ ಭಟ್ಟ

ಗಾಂಧೀಜಿ ಭೇಟಿ ನೀಡಿದ್ದ ಬದನವಾಳು ಗ್ರಾಮದಲ್ಲಿ ನಡೆದ ದುರಂತದ ಕಪ್ಪುಚುಕ್ಕಿ ಈಗ ಇತಿಹಾಸದ ಪುಟದಲ್ಲಿ ಸೇರಿ ಹೋಗಿದೆ. ಅದಾಗಿ ಈಗಾಗಲೇ ೨೯ ವರ್ಷಗಳೇ ಗತಿಸಿ ಹೋಗಿವೆ. ೧೯೯೩ರ ಆರಂಭದಲ್ಲೇ ಇಲ್ಲೊಂದು ಅಮಾನವೀಯ ಘಟನೆ ನಡೆದು ಕಡು ದ್ವೇಷ, ಅಸೂೆುಂಗಳ ಗೂಡಾಗಿ ದುರಂತಕ್ಕೆ ಕಾರಣವಾಗಿ ಹೋಯಿತು.

೧೯೯೩ರ ಜನವರಿಯಲ್ಲಿ ಆರಂಭವಾದ ಈ ದುರಂತದ ವಿವರಗಳನ್ನು ನಿರ್ಭೀತವಾಗಿ ಪ್ರಕಟಿಸಿದ ಏಕೈಕ ದಿನಪತ್ರಿಕೆ ‘ಆಂದೋಲನ’ ಎಂದರೆ ತಪ್ಪಾಗಲಾರದು.

‘ಆಂದೋಲನ’ ಸಂಪಾದಕರಾಗಿದ್ದ ರಾಜಶೇಖರ ಕೋಟಿಯವರು ಸತ್ಯಸಂಗತಿಯ ವರದಿಗಳನ್ನು ಯಾವುದೇ ಮುಲಾಜಿಲ್ಲದೆ ಪ್ರಕಟಿಸುವ ಮೂಲಕ ‘ನಾನಿದ್ದೇನೆ’ ಎಂಬ ಸ್ಪಷ್ಟ ಸಂದೇಶವೂ ರವಾನಿಸಿದಂತೆ ಕೆಲಸ ನಡೆದಿತ್ತು. ನಂಜನಗೂಡು ತಾಲ್ಲೂಕು ಬದನವಾಳು ಗ್ರಾಮದ ಹೊರವಲಯದಲ್ಲಿರುವ ಶ್ರೀ ಸಿದ್ಧೇಶ್ವರ ದೇವಾಲಯದ ಪ್ರವೇಶವೇ ಈ ದುರಂತಕ್ಕೆ ಮೂಲವಾಗಿತ್ತು.ಬೂದಿ ಮುಚ್ಚಿದ ಕೆಂಡವಾಗಿದ್ದ ಪರಸ್ಪರರ ಅನುಮಾನದ ಹುತ್ತ ಒಡೆಯಲು ದೇವಾಲಯದ ಪ್ರವೇಶ ನೆಪವಾಯಿತು.

ಜನವರಿ ೩೦, ೧೯೯೩ ರಂದು ನಿಗದಿಯಾಗಿದ್ದ ಈ ದೇವಾಲಯದ ಉದ್ಘಾಟನಾ ಸಮಾರಂಭದಿಂದ ಆರಂಭವಾದ ‘ಆಂದೋಲನ’ ಬದನವಾಳಿನ ವರದಿ ಮಾರ್ಚ್ ೨೫, ೧೯೯೩ರಂದು ನಡೆದ ದಲಿತರ ಹತ್ಯೆ, ನಂತರ ನಡೆದ ಪರ ವಿರೋಧ ಮೆರವಣಿಗೆ, ಏಪ್ರಿಲ್ ೨೬ ರಂದು ನಡೆದ ಗೋಲಿಬಾರ್ ಹಾಗೂ ಅದರ ದಳ್ಳುರಿಯ ಸುದ್ದಿ ..ಇದೆಲ್ಲವನ್ನೂ ಸವಿವರವಾಗಿ ವರದಿ ಮಾಡಿದ್ದ ‘ಆಂದೋಲನ’ ಪತ್ರಿಕಾ ಧರ್ಮದ ಇತಿ ಮಿತಿಯಲ್ಲಿ ಸಮಾಜದ ಸೇತುವಾಗಿಯೂ ಕೆಲಸ ಮಾಡಿತು. ತನ್ನ ನಿಷ್ಠುರ ವರದಿಗಳಿಂದಾಗಿ ಪತ್ರಿಕೆ ಪರ-ವಿರೋಧಿಗಳ ಹೊಗಳಿಕೆ, ತೆಗಳಿಕೆಗಳನ್ನೂ ಅಂದು ಎದುರಿಸಬೇಕಾಯಿತು.
ಆದರೂ ಅಂದಿನ ‘ಆಂದೋಲನ’ ಸಂಪಾದಕ ಮಂಡಳಿ ಎದೆಗುಂದದೆ ಈ ವಿಷಯವನ್ನು ನಿರ್ಭೀತಿಯಿಂದ ವರದಿ ಮಾಡಿ ಈ ಭಾಗದ ಜನಸಾಮಾನ್ಯರ ಪ್ರೀತಿ ಮತ್ತು ಅಭಿಮಾನಕ್ಕೆ ‘ಪತ್ರಿಕೆ’ ಕಾರಣವಾಯಿತು.

andolana

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

6 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

10 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

11 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

11 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

11 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

12 hours ago