ಆಂದೋಲನ 50

ʼಆಂದೋಲನ 50 ಸಾರ್ಥಕ ಪಯಣʼ ಕಾರ್ಯಕ್ರಮದ ಯಶಸ್ಸಿನಲ್ಲಿ ಮಾಧ್ಯಮಗಳ ಪಾತ್ರ

ಮೈಸೂರು : ‘ಆಂದೋಲನ’ 50 ಸಾರ್ಥಕ ಪಯಣ ಕಾರ್ಯಕ್ರಮದ ಯಶಸ್ಸಿಗೆ ಮಾಧ್ಯಮಗಳ ಪಾತ್ರವೂ ಕಾರಣವಾಗಿದೆ. ‘ಆಂದೋಲನ’ ದಿನ ಪತ್ರಿಕೆ ಹಾಗೂ ಸಂಸ್ಥಾಪಕರಾದ ರಾಜಶೇಖರ ಕೋಟಿ ಅವರ ಜತೆಗಿನ ಒಡನಾಟ, ಅವರ ಮೇಲಿನ ಅಭಿಮಾನದಿಂದ ರಾಜ್ಯದ ಉದ್ದಗಲಕ್ಕೂ ಹರಡಿರುವ ಅನೇಕ ಹಿರಿಯ ಪತ್ರಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭಕೋರಿದ್ದಾರೆ. ಅವರಿಗೆ ಪತ್ರಿಕೆ ವತಿಯಿಂದ ಕೃತಜ್ಞತೆಗಳು.


ಜತೆಗೆ ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮಗಳು ಕಾರ್ಯಕ್ರಮದ ವರದಿಗಳನ್ನು ತುಂಬಾ ಅಚ್ಚುಕಟ್ಟಾಗಿ ವರದಿ ಮಾಡಿ ನಮ್ಮ ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದಾರೆ. ಈ ಮೂಲಕ  ನಮ್ಮ ಜವಾಬ್ಧಾರಿಯನ್ನೂ ಹೆಚ್ಚಿಸಿದ್ದಾರೆ. ಕೆಲವು ದೃಷ್ಯ ವಾಹಿನಿಗಳ ಮುಖ್ಯಸ್ಥರು ಪತ್ರಿಕೆ ಹಾಗೂ ಸಂಪಾದಕರ ಬಗ್ಗೆ ವಿಶೇಷ ಮಾತುಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪತ್ರಿಕೆ ನಡೆದು ಬಂದ ಹಾದಿಯನ್ನೂ ವಿವರಿಸಿದ್ದಾರೆ. ಇವರಿಗೆಲ್ಲ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ.

ದಿ ಹಿಂದೂ, ಇಂಡಿಯನ್ ಎಕ್ಸ್‌ಪ್ರೆಸ್, ವಿಜಯ ಕರ್ನಾಟಕ, ಕನ್ನಡಪ್ರಭ, ಉದಯವಾಣಿ, ವಿಶ್ವವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ, ಮೈಸೂರು ಮಿತ್ರ, ಪ್ರಜಾನುಡಿ, ಪ್ರತಿನಿಧಿ, ಹಲೋ ಮೈಸೂರು, ನ್ಯೂಸ್ ಟ್ರೇಲ್, ನ್ಯೂಸ್ ಒನ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ಪತ್ರಿಕೆಗಳು, ಖಾಸಗಿ ವಾಹಿನಿಗಳು ಸುದ್ದಿ ಬಿತ್ತರಿಸಿವೆ.

ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಆಂದೋಲನ’ ಪತ್ರಿಕೆ ೫೦ರ ಸಂಭ್ರಮ ಆಚರಿಸಿಕೊಂಡಿದೆ. ೫೦ ವರ್ಷಗಳ ಕಾಲ ಪತ್ರಿಕೆ ನಡೆಸುವುದು ಸುಲಭದ ವಿಷಯವಲ್ಲ. ಸಂಪಾದಕರಾಗಿದ್ದ ರಾಜಶೇಖರ ಕೋಟಿ ಅವರು ಪ್ರಾರಂಭದಲ್ಲಿ ಅನೇಕ ಕಷ್ಟ, ಕೋಟಲೆಗಳನ್ನು ಎದುರಿಸಿದ್ದರು, ಬಳಲಿದ್ದರು. ಈ ಪತ್ರಿಕೆಯನ್ನು ಓದಿಕೊಂಡು, ಇದರ ನಡುವೆಯೇ ಬೆಳೆದವರು ನಾವು. ಸೈದ್ಧಾಂತಿಕವಾಗಿ ಪತ್ರಿಕೆಯನ್ನು ಕಟ್ಟಿ ಬೆಳಸಿದ್ದಾರೆ. ಪತ್ರಿಕಾ ಮಾಧ್ಯಮ ಆಮಿಷಗಳಿಗೆ, ಬ್ಲಾಕ್‌ಮೇಲ್‌ಗಳಿಗೆ ಒಳಗಾಗಿದೆ ಎಂಬ ಆರೋಪಗಳು ಕೇಳಿಬರುತ್ತಿರುವುದರ ನಡುವೆಯೂ ತಮ್ಮ ಸಿದ್ಧಾಂತವನ್ನು ಬಿಡದೆ ಉತ್ತಮ ಪತ್ರಿಕೋದ್ಯಮವನ್ನು ನಡೆಸಿಕೊಂಡು ಬಂದವರು ಕೋಟಿಯವರು. ಅವರದು ಹೋರಾಟದ ಬದುಕು. ಪತ್ರಿಕೆ ಕಟ್ಟಿ ಬೆಳಸುವುದು ಸುಲಭವಲ್ಲ. ಪತ್ರಿಕೆಗೆ ಒಳ್ಳೆಯದಾಗಲಿ.
ಎಚ್.ಆರ್.ರಂಗನಾಥ್, ಪಬ್ಲಿಕ್ ಟಿವಿ ಮುಖ್ಯಸ್ಥ

andolana

Recent Posts

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

4 mins ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

13 mins ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

21 mins ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

1 hour ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

1 hour ago

ಮೈಸೂರಿನ ಕುವೆಂಪು ಮನೆ ಇನ್ಮುಂದೆ ಸ್ಮಾರಕ : ಸರ್ಕಾರದ ಘೋಷಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…

2 hours ago