ಆಂದೋಲನ 50

ʼಆಂದೋಲನ 50 ಸಾರ್ಥಕ ಪಯಣʼ ಕಾರ್ಯಕ್ರಮದ ಯಶಸ್ಸಿನಲ್ಲಿ ಮಾಧ್ಯಮಗಳ ಪಾತ್ರ

ಮೈಸೂರು : ‘ಆಂದೋಲನ’ 50 ಸಾರ್ಥಕ ಪಯಣ ಕಾರ್ಯಕ್ರಮದ ಯಶಸ್ಸಿಗೆ ಮಾಧ್ಯಮಗಳ ಪಾತ್ರವೂ ಕಾರಣವಾಗಿದೆ. ‘ಆಂದೋಲನ’ ದಿನ ಪತ್ರಿಕೆ ಹಾಗೂ ಸಂಸ್ಥಾಪಕರಾದ ರಾಜಶೇಖರ ಕೋಟಿ ಅವರ ಜತೆಗಿನ ಒಡನಾಟ, ಅವರ ಮೇಲಿನ ಅಭಿಮಾನದಿಂದ ರಾಜ್ಯದ ಉದ್ದಗಲಕ್ಕೂ ಹರಡಿರುವ ಅನೇಕ ಹಿರಿಯ ಪತ್ರಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭಕೋರಿದ್ದಾರೆ. ಅವರಿಗೆ ಪತ್ರಿಕೆ ವತಿಯಿಂದ ಕೃತಜ್ಞತೆಗಳು.


ಜತೆಗೆ ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮಗಳು ಕಾರ್ಯಕ್ರಮದ ವರದಿಗಳನ್ನು ತುಂಬಾ ಅಚ್ಚುಕಟ್ಟಾಗಿ ವರದಿ ಮಾಡಿ ನಮ್ಮ ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದಾರೆ. ಈ ಮೂಲಕ  ನಮ್ಮ ಜವಾಬ್ಧಾರಿಯನ್ನೂ ಹೆಚ್ಚಿಸಿದ್ದಾರೆ. ಕೆಲವು ದೃಷ್ಯ ವಾಹಿನಿಗಳ ಮುಖ್ಯಸ್ಥರು ಪತ್ರಿಕೆ ಹಾಗೂ ಸಂಪಾದಕರ ಬಗ್ಗೆ ವಿಶೇಷ ಮಾತುಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪತ್ರಿಕೆ ನಡೆದು ಬಂದ ಹಾದಿಯನ್ನೂ ವಿವರಿಸಿದ್ದಾರೆ. ಇವರಿಗೆಲ್ಲ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ.

ದಿ ಹಿಂದೂ, ಇಂಡಿಯನ್ ಎಕ್ಸ್‌ಪ್ರೆಸ್, ವಿಜಯ ಕರ್ನಾಟಕ, ಕನ್ನಡಪ್ರಭ, ಉದಯವಾಣಿ, ವಿಶ್ವವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ, ಮೈಸೂರು ಮಿತ್ರ, ಪ್ರಜಾನುಡಿ, ಪ್ರತಿನಿಧಿ, ಹಲೋ ಮೈಸೂರು, ನ್ಯೂಸ್ ಟ್ರೇಲ್, ನ್ಯೂಸ್ ಒನ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ಪತ್ರಿಕೆಗಳು, ಖಾಸಗಿ ವಾಹಿನಿಗಳು ಸುದ್ದಿ ಬಿತ್ತರಿಸಿವೆ.

ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಆಂದೋಲನ’ ಪತ್ರಿಕೆ ೫೦ರ ಸಂಭ್ರಮ ಆಚರಿಸಿಕೊಂಡಿದೆ. ೫೦ ವರ್ಷಗಳ ಕಾಲ ಪತ್ರಿಕೆ ನಡೆಸುವುದು ಸುಲಭದ ವಿಷಯವಲ್ಲ. ಸಂಪಾದಕರಾಗಿದ್ದ ರಾಜಶೇಖರ ಕೋಟಿ ಅವರು ಪ್ರಾರಂಭದಲ್ಲಿ ಅನೇಕ ಕಷ್ಟ, ಕೋಟಲೆಗಳನ್ನು ಎದುರಿಸಿದ್ದರು, ಬಳಲಿದ್ದರು. ಈ ಪತ್ರಿಕೆಯನ್ನು ಓದಿಕೊಂಡು, ಇದರ ನಡುವೆಯೇ ಬೆಳೆದವರು ನಾವು. ಸೈದ್ಧಾಂತಿಕವಾಗಿ ಪತ್ರಿಕೆಯನ್ನು ಕಟ್ಟಿ ಬೆಳಸಿದ್ದಾರೆ. ಪತ್ರಿಕಾ ಮಾಧ್ಯಮ ಆಮಿಷಗಳಿಗೆ, ಬ್ಲಾಕ್‌ಮೇಲ್‌ಗಳಿಗೆ ಒಳಗಾಗಿದೆ ಎಂಬ ಆರೋಪಗಳು ಕೇಳಿಬರುತ್ತಿರುವುದರ ನಡುವೆಯೂ ತಮ್ಮ ಸಿದ್ಧಾಂತವನ್ನು ಬಿಡದೆ ಉತ್ತಮ ಪತ್ರಿಕೋದ್ಯಮವನ್ನು ನಡೆಸಿಕೊಂಡು ಬಂದವರು ಕೋಟಿಯವರು. ಅವರದು ಹೋರಾಟದ ಬದುಕು. ಪತ್ರಿಕೆ ಕಟ್ಟಿ ಬೆಳಸುವುದು ಸುಲಭವಲ್ಲ. ಪತ್ರಿಕೆಗೆ ಒಳ್ಳೆಯದಾಗಲಿ.
ಎಚ್.ಆರ್.ರಂಗನಾಥ್, ಪಬ್ಲಿಕ್ ಟಿವಿ ಮುಖ್ಯಸ್ಥ

andolana

Recent Posts

ಎಲ್‌ಪಿಜಿ ಕೊರತೆ; ಜನರ ಆತಂಕ ದೂರ ಮಾಡಬೇಕಿದೆ

ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…

49 mins ago

ಭಾರತ-ಗಲ್ಛ್ ರಾಷ್ಟ್ರಗಳ ಸಂಬಂಧಕ್ಕೆ ಧಕ್ಕೆ ಇಲ್ಲ!

ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…

52 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಕಾಂಗ್ರೆಸ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಿದ ಅಧಿಕಾರ ಹಂಚಿಕೆ

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…

56 mins ago

‘ಕೈಗೂಡಿದ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕನಸು’

ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…

1 hour ago

ನಗರಸಭೆಗೆ ಗೆಜ್ಜಲಗೆರೆ-ಗೊರವನಹಳ್ಳಿ ಸೇರ್ಪಡೆಗೆ ವಿರೋಧ

ಹೇಮಂತ್‌ ಕುಮಾರ್‌  ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…

1 hour ago

ಮಧ್ಯಾಹ್ನದ ಬಿಸಿಯೂಟಕ್ಕೂ ತಟ್ಟಲಿದೆ ಗ್ಯಾಸ್ ಬಿಸಿ?

ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…

1 hour ago