ಆಂದೋಲನ 50

ʼಆಂದೋಲನ 50 ಸಾರ್ಥಕ ಪಯಣʼ ಕಾರ್ಯಕ್ರಮದ ಯಶಸ್ಸಿನಲ್ಲಿ ಮಾಧ್ಯಮಗಳ ಪಾತ್ರ

ಮೈಸೂರು : ‘ಆಂದೋಲನ’ 50 ಸಾರ್ಥಕ ಪಯಣ ಕಾರ್ಯಕ್ರಮದ ಯಶಸ್ಸಿಗೆ ಮಾಧ್ಯಮಗಳ ಪಾತ್ರವೂ ಕಾರಣವಾಗಿದೆ. ‘ಆಂದೋಲನ’ ದಿನ ಪತ್ರಿಕೆ ಹಾಗೂ ಸಂಸ್ಥಾಪಕರಾದ ರಾಜಶೇಖರ ಕೋಟಿ ಅವರ ಜತೆಗಿನ ಒಡನಾಟ, ಅವರ ಮೇಲಿನ ಅಭಿಮಾನದಿಂದ ರಾಜ್ಯದ ಉದ್ದಗಲಕ್ಕೂ ಹರಡಿರುವ ಅನೇಕ ಹಿರಿಯ ಪತ್ರಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭಕೋರಿದ್ದಾರೆ. ಅವರಿಗೆ ಪತ್ರಿಕೆ ವತಿಯಿಂದ ಕೃತಜ್ಞತೆಗಳು.


ಜತೆಗೆ ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮಗಳು ಕಾರ್ಯಕ್ರಮದ ವರದಿಗಳನ್ನು ತುಂಬಾ ಅಚ್ಚುಕಟ್ಟಾಗಿ ವರದಿ ಮಾಡಿ ನಮ್ಮ ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದಾರೆ. ಈ ಮೂಲಕ  ನಮ್ಮ ಜವಾಬ್ಧಾರಿಯನ್ನೂ ಹೆಚ್ಚಿಸಿದ್ದಾರೆ. ಕೆಲವು ದೃಷ್ಯ ವಾಹಿನಿಗಳ ಮುಖ್ಯಸ್ಥರು ಪತ್ರಿಕೆ ಹಾಗೂ ಸಂಪಾದಕರ ಬಗ್ಗೆ ವಿಶೇಷ ಮಾತುಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪತ್ರಿಕೆ ನಡೆದು ಬಂದ ಹಾದಿಯನ್ನೂ ವಿವರಿಸಿದ್ದಾರೆ. ಇವರಿಗೆಲ್ಲ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ.

ದಿ ಹಿಂದೂ, ಇಂಡಿಯನ್ ಎಕ್ಸ್‌ಪ್ರೆಸ್, ವಿಜಯ ಕರ್ನಾಟಕ, ಕನ್ನಡಪ್ರಭ, ಉದಯವಾಣಿ, ವಿಶ್ವವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ, ಮೈಸೂರು ಮಿತ್ರ, ಪ್ರಜಾನುಡಿ, ಪ್ರತಿನಿಧಿ, ಹಲೋ ಮೈಸೂರು, ನ್ಯೂಸ್ ಟ್ರೇಲ್, ನ್ಯೂಸ್ ಒನ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ಪತ್ರಿಕೆಗಳು, ಖಾಸಗಿ ವಾಹಿನಿಗಳು ಸುದ್ದಿ ಬಿತ್ತರಿಸಿವೆ.

ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಆಂದೋಲನ’ ಪತ್ರಿಕೆ ೫೦ರ ಸಂಭ್ರಮ ಆಚರಿಸಿಕೊಂಡಿದೆ. ೫೦ ವರ್ಷಗಳ ಕಾಲ ಪತ್ರಿಕೆ ನಡೆಸುವುದು ಸುಲಭದ ವಿಷಯವಲ್ಲ. ಸಂಪಾದಕರಾಗಿದ್ದ ರಾಜಶೇಖರ ಕೋಟಿ ಅವರು ಪ್ರಾರಂಭದಲ್ಲಿ ಅನೇಕ ಕಷ್ಟ, ಕೋಟಲೆಗಳನ್ನು ಎದುರಿಸಿದ್ದರು, ಬಳಲಿದ್ದರು. ಈ ಪತ್ರಿಕೆಯನ್ನು ಓದಿಕೊಂಡು, ಇದರ ನಡುವೆಯೇ ಬೆಳೆದವರು ನಾವು. ಸೈದ್ಧಾಂತಿಕವಾಗಿ ಪತ್ರಿಕೆಯನ್ನು ಕಟ್ಟಿ ಬೆಳಸಿದ್ದಾರೆ. ಪತ್ರಿಕಾ ಮಾಧ್ಯಮ ಆಮಿಷಗಳಿಗೆ, ಬ್ಲಾಕ್‌ಮೇಲ್‌ಗಳಿಗೆ ಒಳಗಾಗಿದೆ ಎಂಬ ಆರೋಪಗಳು ಕೇಳಿಬರುತ್ತಿರುವುದರ ನಡುವೆಯೂ ತಮ್ಮ ಸಿದ್ಧಾಂತವನ್ನು ಬಿಡದೆ ಉತ್ತಮ ಪತ್ರಿಕೋದ್ಯಮವನ್ನು ನಡೆಸಿಕೊಂಡು ಬಂದವರು ಕೋಟಿಯವರು. ಅವರದು ಹೋರಾಟದ ಬದುಕು. ಪತ್ರಿಕೆ ಕಟ್ಟಿ ಬೆಳಸುವುದು ಸುಲಭವಲ್ಲ. ಪತ್ರಿಕೆಗೆ ಒಳ್ಳೆಯದಾಗಲಿ.
ಎಚ್.ಆರ್.ರಂಗನಾಥ್, ಪಬ್ಲಿಕ್ ಟಿವಿ ಮುಖ್ಯಸ್ಥ

andolana

Recent Posts

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

24 mins ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

58 mins ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

3 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

4 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

4 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

4 hours ago