ಆಂದೋಲನ 50

ʼಆಂದೋಲನ 50 ಸಾರ್ಥಕ ಪಯಣʼ ಕಾರ್ಯಕ್ರಮದ ಯಶಸ್ಸಿನಲ್ಲಿ ಮಾಧ್ಯಮಗಳ ಪಾತ್ರ

ಮೈಸೂರು : ‘ಆಂದೋಲನ’ 50 ಸಾರ್ಥಕ ಪಯಣ ಕಾರ್ಯಕ್ರಮದ ಯಶಸ್ಸಿಗೆ ಮಾಧ್ಯಮಗಳ ಪಾತ್ರವೂ ಕಾರಣವಾಗಿದೆ. ‘ಆಂದೋಲನ’ ದಿನ ಪತ್ರಿಕೆ ಹಾಗೂ ಸಂಸ್ಥಾಪಕರಾದ ರಾಜಶೇಖರ ಕೋಟಿ ಅವರ ಜತೆಗಿನ ಒಡನಾಟ, ಅವರ ಮೇಲಿನ ಅಭಿಮಾನದಿಂದ ರಾಜ್ಯದ ಉದ್ದಗಲಕ್ಕೂ ಹರಡಿರುವ ಅನೇಕ ಹಿರಿಯ ಪತ್ರಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭಕೋರಿದ್ದಾರೆ. ಅವರಿಗೆ ಪತ್ರಿಕೆ ವತಿಯಿಂದ ಕೃತಜ್ಞತೆಗಳು.


ಜತೆಗೆ ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮಗಳು ಕಾರ್ಯಕ್ರಮದ ವರದಿಗಳನ್ನು ತುಂಬಾ ಅಚ್ಚುಕಟ್ಟಾಗಿ ವರದಿ ಮಾಡಿ ನಮ್ಮ ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದಾರೆ. ಈ ಮೂಲಕ  ನಮ್ಮ ಜವಾಬ್ಧಾರಿಯನ್ನೂ ಹೆಚ್ಚಿಸಿದ್ದಾರೆ. ಕೆಲವು ದೃಷ್ಯ ವಾಹಿನಿಗಳ ಮುಖ್ಯಸ್ಥರು ಪತ್ರಿಕೆ ಹಾಗೂ ಸಂಪಾದಕರ ಬಗ್ಗೆ ವಿಶೇಷ ಮಾತುಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪತ್ರಿಕೆ ನಡೆದು ಬಂದ ಹಾದಿಯನ್ನೂ ವಿವರಿಸಿದ್ದಾರೆ. ಇವರಿಗೆಲ್ಲ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ.

ದಿ ಹಿಂದೂ, ಇಂಡಿಯನ್ ಎಕ್ಸ್‌ಪ್ರೆಸ್, ವಿಜಯ ಕರ್ನಾಟಕ, ಕನ್ನಡಪ್ರಭ, ಉದಯವಾಣಿ, ವಿಶ್ವವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ, ಮೈಸೂರು ಮಿತ್ರ, ಪ್ರಜಾನುಡಿ, ಪ್ರತಿನಿಧಿ, ಹಲೋ ಮೈಸೂರು, ನ್ಯೂಸ್ ಟ್ರೇಲ್, ನ್ಯೂಸ್ ಒನ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ಪತ್ರಿಕೆಗಳು, ಖಾಸಗಿ ವಾಹಿನಿಗಳು ಸುದ್ದಿ ಬಿತ್ತರಿಸಿವೆ.

ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಆಂದೋಲನ’ ಪತ್ರಿಕೆ ೫೦ರ ಸಂಭ್ರಮ ಆಚರಿಸಿಕೊಂಡಿದೆ. ೫೦ ವರ್ಷಗಳ ಕಾಲ ಪತ್ರಿಕೆ ನಡೆಸುವುದು ಸುಲಭದ ವಿಷಯವಲ್ಲ. ಸಂಪಾದಕರಾಗಿದ್ದ ರಾಜಶೇಖರ ಕೋಟಿ ಅವರು ಪ್ರಾರಂಭದಲ್ಲಿ ಅನೇಕ ಕಷ್ಟ, ಕೋಟಲೆಗಳನ್ನು ಎದುರಿಸಿದ್ದರು, ಬಳಲಿದ್ದರು. ಈ ಪತ್ರಿಕೆಯನ್ನು ಓದಿಕೊಂಡು, ಇದರ ನಡುವೆಯೇ ಬೆಳೆದವರು ನಾವು. ಸೈದ್ಧಾಂತಿಕವಾಗಿ ಪತ್ರಿಕೆಯನ್ನು ಕಟ್ಟಿ ಬೆಳಸಿದ್ದಾರೆ. ಪತ್ರಿಕಾ ಮಾಧ್ಯಮ ಆಮಿಷಗಳಿಗೆ, ಬ್ಲಾಕ್‌ಮೇಲ್‌ಗಳಿಗೆ ಒಳಗಾಗಿದೆ ಎಂಬ ಆರೋಪಗಳು ಕೇಳಿಬರುತ್ತಿರುವುದರ ನಡುವೆಯೂ ತಮ್ಮ ಸಿದ್ಧಾಂತವನ್ನು ಬಿಡದೆ ಉತ್ತಮ ಪತ್ರಿಕೋದ್ಯಮವನ್ನು ನಡೆಸಿಕೊಂಡು ಬಂದವರು ಕೋಟಿಯವರು. ಅವರದು ಹೋರಾಟದ ಬದುಕು. ಪತ್ರಿಕೆ ಕಟ್ಟಿ ಬೆಳಸುವುದು ಸುಲಭವಲ್ಲ. ಪತ್ರಿಕೆಗೆ ಒಳ್ಳೆಯದಾಗಲಿ.
ಎಚ್.ಆರ್.ರಂಗನಾಥ್, ಪಬ್ಲಿಕ್ ಟಿವಿ ಮುಖ್ಯಸ್ಥ

andolana

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

4 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

4 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

5 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

8 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

8 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

9 hours ago