ಆಂದೋಲನ 50

ʼಆಂದೋಲನ 50 ಸಾರ್ಥಕ ಪಯಣʼ ಕಾರ್ಯಕ್ರಮದ ಯಶಸ್ಸಿನಲ್ಲಿ ಮಾಧ್ಯಮಗಳ ಪಾತ್ರ

ಮೈಸೂರು : ‘ಆಂದೋಲನ’ 50 ಸಾರ್ಥಕ ಪಯಣ ಕಾರ್ಯಕ್ರಮದ ಯಶಸ್ಸಿಗೆ ಮಾಧ್ಯಮಗಳ ಪಾತ್ರವೂ ಕಾರಣವಾಗಿದೆ. ‘ಆಂದೋಲನ’ ದಿನ ಪತ್ರಿಕೆ ಹಾಗೂ ಸಂಸ್ಥಾಪಕರಾದ ರಾಜಶೇಖರ ಕೋಟಿ ಅವರ ಜತೆಗಿನ ಒಡನಾಟ, ಅವರ ಮೇಲಿನ ಅಭಿಮಾನದಿಂದ ರಾಜ್ಯದ ಉದ್ದಗಲಕ್ಕೂ ಹರಡಿರುವ ಅನೇಕ ಹಿರಿಯ ಪತ್ರಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭಕೋರಿದ್ದಾರೆ. ಅವರಿಗೆ ಪತ್ರಿಕೆ ವತಿಯಿಂದ ಕೃತಜ್ಞತೆಗಳು.


ಜತೆಗೆ ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮಗಳು ಕಾರ್ಯಕ್ರಮದ ವರದಿಗಳನ್ನು ತುಂಬಾ ಅಚ್ಚುಕಟ್ಟಾಗಿ ವರದಿ ಮಾಡಿ ನಮ್ಮ ಬೆನ್ನು ತಟ್ಟಿ ಪ್ರೋತ್ಸಾಹಿಸಿದ್ದಾರೆ. ಈ ಮೂಲಕ  ನಮ್ಮ ಜವಾಬ್ಧಾರಿಯನ್ನೂ ಹೆಚ್ಚಿಸಿದ್ದಾರೆ. ಕೆಲವು ದೃಷ್ಯ ವಾಹಿನಿಗಳ ಮುಖ್ಯಸ್ಥರು ಪತ್ರಿಕೆ ಹಾಗೂ ಸಂಪಾದಕರ ಬಗ್ಗೆ ವಿಶೇಷ ಮಾತುಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪತ್ರಿಕೆ ನಡೆದು ಬಂದ ಹಾದಿಯನ್ನೂ ವಿವರಿಸಿದ್ದಾರೆ. ಇವರಿಗೆಲ್ಲ ವಿಶೇಷ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ.

ದಿ ಹಿಂದೂ, ಇಂಡಿಯನ್ ಎಕ್ಸ್‌ಪ್ರೆಸ್, ವಿಜಯ ಕರ್ನಾಟಕ, ಕನ್ನಡಪ್ರಭ, ಉದಯವಾಣಿ, ವಿಶ್ವವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ, ಮೈಸೂರು ಮಿತ್ರ, ಪ್ರಜಾನುಡಿ, ಪ್ರತಿನಿಧಿ, ಹಲೋ ಮೈಸೂರು, ನ್ಯೂಸ್ ಟ್ರೇಲ್, ನ್ಯೂಸ್ ಒನ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ಪತ್ರಿಕೆಗಳು, ಖಾಸಗಿ ವಾಹಿನಿಗಳು ಸುದ್ದಿ ಬಿತ್ತರಿಸಿವೆ.

ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಆಂದೋಲನ’ ಪತ್ರಿಕೆ ೫೦ರ ಸಂಭ್ರಮ ಆಚರಿಸಿಕೊಂಡಿದೆ. ೫೦ ವರ್ಷಗಳ ಕಾಲ ಪತ್ರಿಕೆ ನಡೆಸುವುದು ಸುಲಭದ ವಿಷಯವಲ್ಲ. ಸಂಪಾದಕರಾಗಿದ್ದ ರಾಜಶೇಖರ ಕೋಟಿ ಅವರು ಪ್ರಾರಂಭದಲ್ಲಿ ಅನೇಕ ಕಷ್ಟ, ಕೋಟಲೆಗಳನ್ನು ಎದುರಿಸಿದ್ದರು, ಬಳಲಿದ್ದರು. ಈ ಪತ್ರಿಕೆಯನ್ನು ಓದಿಕೊಂಡು, ಇದರ ನಡುವೆಯೇ ಬೆಳೆದವರು ನಾವು. ಸೈದ್ಧಾಂತಿಕವಾಗಿ ಪತ್ರಿಕೆಯನ್ನು ಕಟ್ಟಿ ಬೆಳಸಿದ್ದಾರೆ. ಪತ್ರಿಕಾ ಮಾಧ್ಯಮ ಆಮಿಷಗಳಿಗೆ, ಬ್ಲಾಕ್‌ಮೇಲ್‌ಗಳಿಗೆ ಒಳಗಾಗಿದೆ ಎಂಬ ಆರೋಪಗಳು ಕೇಳಿಬರುತ್ತಿರುವುದರ ನಡುವೆಯೂ ತಮ್ಮ ಸಿದ್ಧಾಂತವನ್ನು ಬಿಡದೆ ಉತ್ತಮ ಪತ್ರಿಕೋದ್ಯಮವನ್ನು ನಡೆಸಿಕೊಂಡು ಬಂದವರು ಕೋಟಿಯವರು. ಅವರದು ಹೋರಾಟದ ಬದುಕು. ಪತ್ರಿಕೆ ಕಟ್ಟಿ ಬೆಳಸುವುದು ಸುಲಭವಲ್ಲ. ಪತ್ರಿಕೆಗೆ ಒಳ್ಳೆಯದಾಗಲಿ.
ಎಚ್.ಆರ್.ರಂಗನಾಥ್, ಪಬ್ಲಿಕ್ ಟಿವಿ ಮುಖ್ಯಸ್ಥ

andolana

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

16 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

16 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

16 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

16 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

16 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

16 hours ago