Categories: ಆಂದೋಲನ 50

ಆಂದೋಲನ 50 ಸಾರ್ಥಕ ಪಯಣಕ್ಕೆ ನಾಳೆ ಸಿಎಂ ಬೊಮ್ಮಾಯಿ ಅವರಿಂದ ಅಧಿಕೃತ ಚಾಲನೆ..

ಮೈಸೂರು : ನಾಳೆ ಆಂದೋಲನ ದಿನ ಪತ್ರಿಕೆಗೆ 50 ರ ತುಂಬು ಸಂಭ್ರಮ. ಈ ಹಿನ್ನೆಲೆಯಲ್ಲಿ ನಾಳೆ ಹುಣಸೂರು ರಸ್ತೆಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿರುವ ಘಟಿಕೋತ್ಸವ ಭವನದಲ್ಲಿ 50 ನೇ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 

ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಹಿರಿಯ ಸಾಹಿತಿ ದೇವನೂರು ಮಹಾದೇವ, ಆಂದೋಲನ ಪತ್ರಿಕೆಯ ಸಹ ಸಂಸ್ಥಾಪಕರಾದ ನಿರ್ಮಲ ಕೋಟಿ, ಮಾಜಿ ಮುಖ್ಯಮಂತ್ರಿಳಾದ ಸಿದ್ದರಾಮಯ್ಯ, ಬಿ.ಎಸ್‌.ಯಡಿಯೂರಪ್ಪ, ಹೆಚ್‌.ಡಿ.ಕುಮಾರಸ್ವಾಮಿ,  ಹಿರಿಯ ಪತ್ರಕರ್ತರಾದ ಪಿ. ಸಾಯಿನಾಥ್‌, ಖ್ಯಾತ ನಟ ಶಿವರಾಜ್‌ ಕುಮಾರ್‌, ಹಿರಿಯ ಸಮಾಜವಾದಿ ಪ. ಮಲ್ಲೇಶ್‌ ಗಣ್ಯರು ವೇದಿಕೆಯನ್ನು ಅಲಂಕರಿಸುತ್ತಿದ್ದಾರೆ. 

ಆಂದೋಲನ ದಿನ ಪತ್ರಿಕೆ 

ಆಂದೋಲನ ಎಂಬುದು ಇತಿಹಾಸದಲ್ಲಿ ಒಂದು ಅವಿಸ್ಮರಣೀಯ ಸಂದರ್ಭವಾಗಿದೆ. 1972 ರಲ್ಲಿ ಪ್ರಾರಂಭವಾದ ಆಂದೋಲನ ಪತ್ರಿಕೆಯು ಸಮಾಜಮುಖಿ ಚಿಂತನೆ ಹಾಗೂ ವಿಚಾರಗಳನ್ನು ಓದುಗರಿಗೆ ನೀಡುತ್ತಾ. ಓದುಗರ ಮನದಾಳದಲ್ಲಿ ತನ್ನದೇ ಸ್ಥಾನವನ್ನು  ಗಿಟ್ಟಿಸಿಕೊಂಡಿದೆ. ಈ ಪತ್ರಿಕೆಗೀಗ 50 ರ ಸಂಭ್ರಮ ಮೈಸೂರು ಭಾಗದ ಜನರ ಆಶೋತ್ತರಗಳ ಪ್ರತಿಬಿಂಬವಾಗಿ ರೂಪುಗೊಂಡ ಈ ಪತ್ರಿಕೆ  ಜನಜೀವನದಲ್ಲಿ ಹಾಸುಹೊಕ್ಕಾಗಿ ಅಳಿಸಲಾಗದ ಛಾಪು ಮೂಡಿಸುತ್ತಾ ಇಂದು ಆಂದೋಲನ ಪತ್ರಿಕೆಯು ಒಂದು ಸಂಘಟಿತ ಶಕ್ತಿಯಾಗಿ ಬೆಳೆದಿದೆ. ಇದಕ್ಕೆ ಮೂಲ ಕಾರಣ ಓದುಗರೇ ಆಗಿದ್ದಾರೆ. ಪತ್ರಿಕೆಗಳನ್ನು ಕೊಂಡು, ಓದಿ ಬೆಳೆಸುತ್ತಿದ್ದಾರೆ ಸಾಕಷ್ಟು ಓದುಗರು.

ಪತ್ರಿಕೆಯು 50 ವರ್ಷಗಳನ್ನು  ಪೂರೈಸುತ್ತಿರುವ ಈ ಸಂದರ್ಭವನ್ನು ದಾಖಲಿಸುವ ಸಲುವಾಗಿ ನಾಳೆ ಜುಲೈ 6 ನೇ ತಾರೀಖಿನಂದು ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆಂದೋಲನ ಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರ ಅಂಕಣಗಳ ಸಂಗ್ರಹವನ್ನು ಹೊತ್ತ  ʼಇದ್ದದ್ದು ಇದ್ದಾಂಗ” ಎಂಬ ಪುಸ್ತಕವನ್ನು  ಹೊರತರಲಾಗುತ್ತಿದೆ. ಇದರ ಜೊತೆಗೆ  ʼಆಂದೋಲನ” ಡಾಕ್ಯುಮೆಂಟರಿಯನ್ನು ಬಿಡುಗಡೆ ಮಾಡುವ ಮೂಲಕ ಈ ಸಂದರ್ಭವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದಿದ್ದೇವೆ. ಬನ್ನಿ ಈ ಪತ್ರಿಕೆಯ ಸಾರ್ಥಕ ಪಯಣದಲ್ಲಿ ಎಲ್ಲರೂ ಜೊತೆಯಾಗಿ.

andolana

Recent Posts

‘ಮೈಸೂರು ಮತ್ತೆ ಸ್ವಚ್ಛ ನಗರಿ ಗರಿ ಧರಿಸಬೇಕು’

ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…

20 mins ago

ಸಫಾರಿ ಕಾಡಿನ ನಾಶಕ್ಕೆ ರಹದಾರಿ: ರೈತರ ಆರೋಪ

ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …

24 mins ago

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

14 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

14 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

14 hours ago