Categories: ಆಂದೋಲನ 50

ಆಂದೋಲನ 50 ಸಾರ್ಥಕ ಪಯಣಕ್ಕೆ ನಾಳೆ ಸಿಎಂ ಬೊಮ್ಮಾಯಿ ಅವರಿಂದ ಅಧಿಕೃತ ಚಾಲನೆ..

ಮೈಸೂರು : ನಾಳೆ ಆಂದೋಲನ ದಿನ ಪತ್ರಿಕೆಗೆ 50 ರ ತುಂಬು ಸಂಭ್ರಮ. ಈ ಹಿನ್ನೆಲೆಯಲ್ಲಿ ನಾಳೆ ಹುಣಸೂರು ರಸ್ತೆಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿರುವ ಘಟಿಕೋತ್ಸವ ಭವನದಲ್ಲಿ 50 ನೇ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 

ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಹಿರಿಯ ಸಾಹಿತಿ ದೇವನೂರು ಮಹಾದೇವ, ಆಂದೋಲನ ಪತ್ರಿಕೆಯ ಸಹ ಸಂಸ್ಥಾಪಕರಾದ ನಿರ್ಮಲ ಕೋಟಿ, ಮಾಜಿ ಮುಖ್ಯಮಂತ್ರಿಳಾದ ಸಿದ್ದರಾಮಯ್ಯ, ಬಿ.ಎಸ್‌.ಯಡಿಯೂರಪ್ಪ, ಹೆಚ್‌.ಡಿ.ಕುಮಾರಸ್ವಾಮಿ,  ಹಿರಿಯ ಪತ್ರಕರ್ತರಾದ ಪಿ. ಸಾಯಿನಾಥ್‌, ಖ್ಯಾತ ನಟ ಶಿವರಾಜ್‌ ಕುಮಾರ್‌, ಹಿರಿಯ ಸಮಾಜವಾದಿ ಪ. ಮಲ್ಲೇಶ್‌ ಗಣ್ಯರು ವೇದಿಕೆಯನ್ನು ಅಲಂಕರಿಸುತ್ತಿದ್ದಾರೆ. 

ಆಂದೋಲನ ದಿನ ಪತ್ರಿಕೆ 

ಆಂದೋಲನ ಎಂಬುದು ಇತಿಹಾಸದಲ್ಲಿ ಒಂದು ಅವಿಸ್ಮರಣೀಯ ಸಂದರ್ಭವಾಗಿದೆ. 1972 ರಲ್ಲಿ ಪ್ರಾರಂಭವಾದ ಆಂದೋಲನ ಪತ್ರಿಕೆಯು ಸಮಾಜಮುಖಿ ಚಿಂತನೆ ಹಾಗೂ ವಿಚಾರಗಳನ್ನು ಓದುಗರಿಗೆ ನೀಡುತ್ತಾ. ಓದುಗರ ಮನದಾಳದಲ್ಲಿ ತನ್ನದೇ ಸ್ಥಾನವನ್ನು  ಗಿಟ್ಟಿಸಿಕೊಂಡಿದೆ. ಈ ಪತ್ರಿಕೆಗೀಗ 50 ರ ಸಂಭ್ರಮ ಮೈಸೂರು ಭಾಗದ ಜನರ ಆಶೋತ್ತರಗಳ ಪ್ರತಿಬಿಂಬವಾಗಿ ರೂಪುಗೊಂಡ ಈ ಪತ್ರಿಕೆ  ಜನಜೀವನದಲ್ಲಿ ಹಾಸುಹೊಕ್ಕಾಗಿ ಅಳಿಸಲಾಗದ ಛಾಪು ಮೂಡಿಸುತ್ತಾ ಇಂದು ಆಂದೋಲನ ಪತ್ರಿಕೆಯು ಒಂದು ಸಂಘಟಿತ ಶಕ್ತಿಯಾಗಿ ಬೆಳೆದಿದೆ. ಇದಕ್ಕೆ ಮೂಲ ಕಾರಣ ಓದುಗರೇ ಆಗಿದ್ದಾರೆ. ಪತ್ರಿಕೆಗಳನ್ನು ಕೊಂಡು, ಓದಿ ಬೆಳೆಸುತ್ತಿದ್ದಾರೆ ಸಾಕಷ್ಟು ಓದುಗರು.

ಪತ್ರಿಕೆಯು 50 ವರ್ಷಗಳನ್ನು  ಪೂರೈಸುತ್ತಿರುವ ಈ ಸಂದರ್ಭವನ್ನು ದಾಖಲಿಸುವ ಸಲುವಾಗಿ ನಾಳೆ ಜುಲೈ 6 ನೇ ತಾರೀಖಿನಂದು ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆಂದೋಲನ ಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರ ಅಂಕಣಗಳ ಸಂಗ್ರಹವನ್ನು ಹೊತ್ತ  ʼಇದ್ದದ್ದು ಇದ್ದಾಂಗ” ಎಂಬ ಪುಸ್ತಕವನ್ನು  ಹೊರತರಲಾಗುತ್ತಿದೆ. ಇದರ ಜೊತೆಗೆ  ʼಆಂದೋಲನ” ಡಾಕ್ಯುಮೆಂಟರಿಯನ್ನು ಬಿಡುಗಡೆ ಮಾಡುವ ಮೂಲಕ ಈ ಸಂದರ್ಭವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದಿದ್ದೇವೆ. ಬನ್ನಿ ಈ ಪತ್ರಿಕೆಯ ಸಾರ್ಥಕ ಪಯಣದಲ್ಲಿ ಎಲ್ಲರೂ ಜೊತೆಯಾಗಿ.

andolana

Recent Posts

ಗಣೇಶೋತ್ಸವದ ವೇಳೆ ಪ್ರಸಾದಕ್ಕೆ ಪರವಾನಗಿ ಕಡ್ಡಾಯ ಆದೇಶಕ್ಕೆ ಪ್ರಹ್ಲಾದ್‌ ಜೋಶಿ ಆಕ್ರೋಶ

ಹುಬ್ಬಳ್ಳಿ: ಗಣೇಶೋತ್ಸವ ಆಚರಣೆ ವೇಳೆ ಪೆಂಡಾಲ್‌ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಗಿ ಪಡೆಯಬೇಕು ಎಂಬ ರಾಜ್ಯ ಸರ್ಕಾರದ…

2 mins ago

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

18 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

35 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

48 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago