Categories: ಆಂದೋಲನ 50

ಆಂದೋಲನ 50 ಸಾರ್ಥಕ ಪಯಣಕ್ಕೆ ನಾಳೆ ಸಿಎಂ ಬೊಮ್ಮಾಯಿ ಅವರಿಂದ ಅಧಿಕೃತ ಚಾಲನೆ..

ಮೈಸೂರು : ನಾಳೆ ಆಂದೋಲನ ದಿನ ಪತ್ರಿಕೆಗೆ 50 ರ ತುಂಬು ಸಂಭ್ರಮ. ಈ ಹಿನ್ನೆಲೆಯಲ್ಲಿ ನಾಳೆ ಹುಣಸೂರು ರಸ್ತೆಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿರುವ ಘಟಿಕೋತ್ಸವ ಭವನದಲ್ಲಿ 50 ನೇ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 

ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಹಿರಿಯ ಸಾಹಿತಿ ದೇವನೂರು ಮಹಾದೇವ, ಆಂದೋಲನ ಪತ್ರಿಕೆಯ ಸಹ ಸಂಸ್ಥಾಪಕರಾದ ನಿರ್ಮಲ ಕೋಟಿ, ಮಾಜಿ ಮುಖ್ಯಮಂತ್ರಿಳಾದ ಸಿದ್ದರಾಮಯ್ಯ, ಬಿ.ಎಸ್‌.ಯಡಿಯೂರಪ್ಪ, ಹೆಚ್‌.ಡಿ.ಕುಮಾರಸ್ವಾಮಿ,  ಹಿರಿಯ ಪತ್ರಕರ್ತರಾದ ಪಿ. ಸಾಯಿನಾಥ್‌, ಖ್ಯಾತ ನಟ ಶಿವರಾಜ್‌ ಕುಮಾರ್‌, ಹಿರಿಯ ಸಮಾಜವಾದಿ ಪ. ಮಲ್ಲೇಶ್‌ ಗಣ್ಯರು ವೇದಿಕೆಯನ್ನು ಅಲಂಕರಿಸುತ್ತಿದ್ದಾರೆ. 

ಆಂದೋಲನ ದಿನ ಪತ್ರಿಕೆ 

ಆಂದೋಲನ ಎಂಬುದು ಇತಿಹಾಸದಲ್ಲಿ ಒಂದು ಅವಿಸ್ಮರಣೀಯ ಸಂದರ್ಭವಾಗಿದೆ. 1972 ರಲ್ಲಿ ಪ್ರಾರಂಭವಾದ ಆಂದೋಲನ ಪತ್ರಿಕೆಯು ಸಮಾಜಮುಖಿ ಚಿಂತನೆ ಹಾಗೂ ವಿಚಾರಗಳನ್ನು ಓದುಗರಿಗೆ ನೀಡುತ್ತಾ. ಓದುಗರ ಮನದಾಳದಲ್ಲಿ ತನ್ನದೇ ಸ್ಥಾನವನ್ನು  ಗಿಟ್ಟಿಸಿಕೊಂಡಿದೆ. ಈ ಪತ್ರಿಕೆಗೀಗ 50 ರ ಸಂಭ್ರಮ ಮೈಸೂರು ಭಾಗದ ಜನರ ಆಶೋತ್ತರಗಳ ಪ್ರತಿಬಿಂಬವಾಗಿ ರೂಪುಗೊಂಡ ಈ ಪತ್ರಿಕೆ  ಜನಜೀವನದಲ್ಲಿ ಹಾಸುಹೊಕ್ಕಾಗಿ ಅಳಿಸಲಾಗದ ಛಾಪು ಮೂಡಿಸುತ್ತಾ ಇಂದು ಆಂದೋಲನ ಪತ್ರಿಕೆಯು ಒಂದು ಸಂಘಟಿತ ಶಕ್ತಿಯಾಗಿ ಬೆಳೆದಿದೆ. ಇದಕ್ಕೆ ಮೂಲ ಕಾರಣ ಓದುಗರೇ ಆಗಿದ್ದಾರೆ. ಪತ್ರಿಕೆಗಳನ್ನು ಕೊಂಡು, ಓದಿ ಬೆಳೆಸುತ್ತಿದ್ದಾರೆ ಸಾಕಷ್ಟು ಓದುಗರು.

ಪತ್ರಿಕೆಯು 50 ವರ್ಷಗಳನ್ನು  ಪೂರೈಸುತ್ತಿರುವ ಈ ಸಂದರ್ಭವನ್ನು ದಾಖಲಿಸುವ ಸಲುವಾಗಿ ನಾಳೆ ಜುಲೈ 6 ನೇ ತಾರೀಖಿನಂದು ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆಂದೋಲನ ಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿ ಅವರ ಅಂಕಣಗಳ ಸಂಗ್ರಹವನ್ನು ಹೊತ್ತ  ʼಇದ್ದದ್ದು ಇದ್ದಾಂಗ” ಎಂಬ ಪುಸ್ತಕವನ್ನು  ಹೊರತರಲಾಗುತ್ತಿದೆ. ಇದರ ಜೊತೆಗೆ  ʼಆಂದೋಲನ” ಡಾಕ್ಯುಮೆಂಟರಿಯನ್ನು ಬಿಡುಗಡೆ ಮಾಡುವ ಮೂಲಕ ಈ ಸಂದರ್ಭವನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದಿದ್ದೇವೆ. ಬನ್ನಿ ಈ ಪತ್ರಿಕೆಯ ಸಾರ್ಥಕ ಪಯಣದಲ್ಲಿ ಎಲ್ಲರೂ ಜೊತೆಯಾಗಿ.

andolana

Recent Posts

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

1 hour ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

2 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

2 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

2 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

2 hours ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

2 hours ago