Categories: ಆಂದೋಲನ 50

ʼಆಂದೋಲನ 50ರ ಸಾರ್ಥಕ ಪಯಣʼ ಇಂದು

ಕೋಟಿ ಅವರು ಕಂಡುಂಡ ನೋವು-ನಲಿವುಗಳು, ಸಾಧಕ-ಬಾಧಕಗಳನ್ನು ನೆನೆಯುವ, ನೆನಪಿಸುವ ಕಾರ್ಯಕ್ರಮ ಇದಾಗಿದೆ. ಕೋಟಿ ಅವರ ಒಡನಾಡಿಗಳು, ಅವರನ್ನು ಬದುಕಿನ ಭಾಗವಾಗಿಸಿಕೊಂಡವರು,ಅವರಿಂದ ಸಹಾಯ ಪಡೆದು ಬದುಕನ್ನು ರೂಪಿಸಿಕೊಂಡವರು, ʼಪತ್ರಿಕೆʼ ಯ ಓದುಗರು..

ಹೀಗೆ ಎಲ್ಲವೂ ಸೇರಿ ʼಆಂದೋಲನʼ ಮತ್ತು ಕೋಟಿ ಅವರನ್ನು ಕುರಿತು ಪುನರ್‌ ಮನನ ಮಾಡಿಕೊಳ್ಳಬಹುದಾದ ಅಪೂರ್ವ ವೇದಿಕೆ ಸಿದ್ದವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ದೊರೆಯಲಿದೆ. ʼಆಂದೋಲನʼ ಸಹ ಸಂಸ್ಥಾಪಕರಾದ ನಿರ್ಮಲ ಕೋಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್‌.ಯಡಿಯೂರಪ್ಪ, ಎಚ್‌.ಡಿ.ಕುಮಾರಸ್ವಾಮಿ, ಹಿರಿಯ ಪತ್ರಕರ್ತ ಪಿ.ಸಾಯಿನಾಥ್‌, ಹೆಸರಾಂತ ನಟ ಡಾ. ಶಿವರಾಜ್‌ ಕುಮಾರ್‌, ಹಿರಿಯ ಸಾಹಿತಿ ದೇವನೂರು ಮಹಾದೇವ, ಹಿರಿಯ ಸಮಾಜವಾದಿ ಪ. ಮಲ್ಲೇಶ್‌ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ವೇದಿಕೆಯಲ್ಲಿ ʼಆಂದೋಲನʼ ಪತ್ರಿಕೆಯ ಸಂಪಾದಕ ರವಿ ಕೋಟಿ, ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ ಭಾಗಿಯಾಗಲಿದ್ದಾರೆ.

1972 ರಲ್ಲಿ ಪ್ರಾರಂಭವಾದ ʼಪತ್ರಿಕೆʼ ತನ್ನ 50 ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಇಂದು ಸಂಜೆ 4 ಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ʼಆಂದೋಲನ-50 ಸಾರ್ಥಕ ಪಯಣʼ ಕಾರ್ಯಕ್ರಮ ಆಯೋಜನೆಯಾಗಿದೆ.

ಗಣ್ಯರ ಸ್ವಾಗತಕ್ಕೆ ಸಕಲ ಸಿದ್ಧತೆ

ಘಟಿಕೋತ್ಸವ ಭವನದ ದ್ವಾರದಲ್ಲಿ ಸ್ಥಾಪಿಸಿರುವ ʼʼಆಂದೋಲನ ಡಿಜಿಟಲ್‌ʼ ಕಿಯೋಸ್ಕ್‌ ನಲ್ಲಿ ಮೈಸೂರು,ಚಾಮರಾಜನಗರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳು ಸೇರಿ ರಾಜ್ಯದೆಲ್ಲೆಡೆಯಿಂದ ಆಗಮಿಸಲಿರುವ ಗಣ್ಯ ಮಾನ್ಯರು ʼಪತ್ರಿಕೆʼ ನಡೆದು ಬಂದ ಹಾದಿ ಬಗ್ಗೆ ಚುಟುಕು ಅನಿಸಿಕೆ ವ್ಯಕ್ತಪಡಿಸಲಿದ್ದಾರೆ. ಇವರ ನುಡಿಗಳು ʼಆಂದೋಲನ ಟಿವಿʼ ಡಿಜಿಟಲ್‌ ವೇದಿಕೆಯಲ್ಲಿ ಪ್ರಸಾರವಾಗಲಿದೆ. ನೂತನ ʼಆಂದೋಲನʼ ವೆಬ್‌ಸೈಟ್‌ ಅನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅನಾವರಣಗೊಳಿಸಲಿದ್ದಾರೆ.

andolana

Recent Posts

ಡಿಕೆಶಿ ಸರ್ಕಾರಕ್ಕೆ ಶತದಿನಗಳ ಸಂಭ್ರಮ ; ಬಣ್ಣ ಬಣ್ಣದ ಬೆಳಕಿನಲ್ಲಿ ಝಗಮಗಿಸಲಿದೆ ಮೈಸೂರು ಅರಮನೆ

ಮೈಸೂರು :  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಸೆ.10ಕ್ಕೆ ನೂರು ದಿನಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ಅರಮನೆ ಸೆ.10…

8 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ ; ಜಿಲ್ಲಾಧಿಕಾರ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು : ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು…

13 hours ago

ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ ; ರಮೇಶ್‌ ಬಂಡಿಸಿದ್ದೇಗೌಡ

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿದ್ಯುತ್ ದೀಪಾಲಂಕಾರಕ್ಕೆ ಈ ಬಾರಿ ಹೊಸ ಮೆರುಗು ನೀಡುವುದರ ಜತೆಗೆ ಆಕರ್ಷಕ…

13 hours ago

ದಸರಾ ಮಹೋತ್ಸವದಲ್ಲಿ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿ: ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯ ವೇಳೆ ಕನ್ನಡ ಚಲನಚಿತ್ರ ರಂಗದ ಪ್ರಖ್ಯಾತ ಕಲಾವಿದರು ಭಾಗಿಯಾಗುವರು ಎಂದು ಜಿಲ್ಲಾಧಿಕಾರಿ…

17 hours ago

ಅಬಕಾರಿ ಅಕ್ರಮ ಕೇಸ್‌: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಗೆ ED ಶಾಕ್‌

ಬೆಂಗಳೂರು: ಅಬಕಾರಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.…

18 hours ago

ಓದುಗರ ಪತ್ರ: ಬಂದೂಕು ಹಿಡಿದಿರುವ ನಾಯಕನ ಚಿತ್ರದ ಜಾಹೀರಾತಿಗೆ ‘ಇಲ್ಲೂ’ ಪ್ರೋತ್ಸಾಹ ಏಕೆ?

ಇತ್ತೀಚೆಗೆ ಬಿಡುಗಡೆಯಾದ ಟಾಕ್ಸಿಕ್ ಚಲನಚಿತ್ರವು ಕನ್ನಡ ಸೇರಿ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಪ್ರಚಾರಕ್ಕಾಗಿ ಪೋಸ್ಟರ್ ಅನ್ನು…

23 hours ago