ಕೋಟಿ ಅವರು ಕಂಡುಂಡ ನೋವು-ನಲಿವುಗಳು, ಸಾಧಕ-ಬಾಧಕಗಳನ್ನು ನೆನೆಯುವ, ನೆನಪಿಸುವ ಕಾರ್ಯಕ್ರಮ ಇದಾಗಿದೆ. ಕೋಟಿ ಅವರ ಒಡನಾಡಿಗಳು, ಅವರನ್ನು ಬದುಕಿನ ಭಾಗವಾಗಿಸಿಕೊಂಡವರು,ಅವರಿಂದ ಸಹಾಯ ಪಡೆದು ಬದುಕನ್ನು ರೂಪಿಸಿಕೊಂಡವರು, ʼಪತ್ರಿಕೆʼ ಯ ಓದುಗರು..
ಹೀಗೆ ಎಲ್ಲವೂ ಸೇರಿ ʼಆಂದೋಲನʼ ಮತ್ತು ಕೋಟಿ ಅವರನ್ನು ಕುರಿತು ಪುನರ್ ಮನನ ಮಾಡಿಕೊಳ್ಳಬಹುದಾದ ಅಪೂರ್ವ ವೇದಿಕೆ ಸಿದ್ದವಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ದೊರೆಯಲಿದೆ. ʼಆಂದೋಲನʼ ಸಹ ಸಂಸ್ಥಾಪಕರಾದ ನಿರ್ಮಲ ಕೋಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಹಿರಿಯ ಪತ್ರಕರ್ತ ಪಿ.ಸಾಯಿನಾಥ್, ಹೆಸರಾಂತ ನಟ ಡಾ. ಶಿವರಾಜ್ ಕುಮಾರ್, ಹಿರಿಯ ಸಾಹಿತಿ ದೇವನೂರು ಮಹಾದೇವ, ಹಿರಿಯ ಸಮಾಜವಾದಿ ಪ. ಮಲ್ಲೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ವೇದಿಕೆಯಲ್ಲಿ ʼಆಂದೋಲನʼ ಪತ್ರಿಕೆಯ ಸಂಪಾದಕ ರವಿ ಕೋಟಿ, ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ ಭಾಗಿಯಾಗಲಿದ್ದಾರೆ.
1972 ರಲ್ಲಿ ಪ್ರಾರಂಭವಾದ ʼಪತ್ರಿಕೆʼ ತನ್ನ 50 ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಇಂದು ಸಂಜೆ 4 ಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ʼಆಂದೋಲನ-50 ಸಾರ್ಥಕ ಪಯಣʼ ಕಾರ್ಯಕ್ರಮ ಆಯೋಜನೆಯಾಗಿದೆ.
ಗಣ್ಯರ ಸ್ವಾಗತಕ್ಕೆ ಸಕಲ ಸಿದ್ಧತೆ
ಘಟಿಕೋತ್ಸವ ಭವನದ ದ್ವಾರದಲ್ಲಿ ಸ್ಥಾಪಿಸಿರುವ ʼʼಆಂದೋಲನ ಡಿಜಿಟಲ್ʼ ಕಿಯೋಸ್ಕ್ ನಲ್ಲಿ ಮೈಸೂರು,ಚಾಮರಾಜನಗರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳು ಸೇರಿ ರಾಜ್ಯದೆಲ್ಲೆಡೆಯಿಂದ ಆಗಮಿಸಲಿರುವ ಗಣ್ಯ ಮಾನ್ಯರು ʼಪತ್ರಿಕೆʼ ನಡೆದು ಬಂದ ಹಾದಿ ಬಗ್ಗೆ ಚುಟುಕು ಅನಿಸಿಕೆ ವ್ಯಕ್ತಪಡಿಸಲಿದ್ದಾರೆ. ಇವರ ನುಡಿಗಳು ʼಆಂದೋಲನ ಟಿವಿʼ ಡಿಜಿಟಲ್ ವೇದಿಕೆಯಲ್ಲಿ ಪ್ರಸಾರವಾಗಲಿದೆ. ನೂತನ ʼಆಂದೋಲನʼ ವೆಬ್ಸೈಟ್ ಅನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನಾವರಣಗೊಳಿಸಲಿದ್ದಾರೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…