ಕೋಟಿ ಅವರು ಕಂಡುಂಡ ನೋವು-ನಲಿವುಗಳು, ಸಾಧಕ-ಬಾಧಕಗಳನ್ನು ನೆನೆಯುವ, ನೆನಪಿಸುವ ಕಾರ್ಯಕ್ರಮ ಇದಾಗಿದೆ. ಕೋಟಿ ಅವರ ಒಡನಾಡಿಗಳು, ಅವರನ್ನು ಬದುಕಿನ ಭಾಗವಾಗಿಸಿಕೊಂಡವರು,ಅವರಿಂದ ಸಹಾಯ ಪಡೆದು ಬದುಕನ್ನು ರೂಪಿಸಿಕೊಂಡವರು, ʼಪತ್ರಿಕೆʼ ಯ ಓದುಗರು..
ಹೀಗೆ ಎಲ್ಲವೂ ಸೇರಿ ʼಆಂದೋಲನʼ ಮತ್ತು ಕೋಟಿ ಅವರನ್ನು ಕುರಿತು ಪುನರ್ ಮನನ ಮಾಡಿಕೊಳ್ಳಬಹುದಾದ ಅಪೂರ್ವ ವೇದಿಕೆ ಸಿದ್ದವಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ದೊರೆಯಲಿದೆ. ʼಆಂದೋಲನʼ ಸಹ ಸಂಸ್ಥಾಪಕರಾದ ನಿರ್ಮಲ ಕೋಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಹಿರಿಯ ಪತ್ರಕರ್ತ ಪಿ.ಸಾಯಿನಾಥ್, ಹೆಸರಾಂತ ನಟ ಡಾ. ಶಿವರಾಜ್ ಕುಮಾರ್, ಹಿರಿಯ ಸಾಹಿತಿ ದೇವನೂರು ಮಹಾದೇವ, ಹಿರಿಯ ಸಮಾಜವಾದಿ ಪ. ಮಲ್ಲೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ವೇದಿಕೆಯಲ್ಲಿ ʼಆಂದೋಲನʼ ಪತ್ರಿಕೆಯ ಸಂಪಾದಕ ರವಿ ಕೋಟಿ, ವ್ಯವಸ್ಥಾಪಕ ಸಂಪಾದಕರಾದ ರಶ್ಮಿ ಕೋಟಿ ಭಾಗಿಯಾಗಲಿದ್ದಾರೆ.
1972 ರಲ್ಲಿ ಪ್ರಾರಂಭವಾದ ʼಪತ್ರಿಕೆʼ ತನ್ನ 50 ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಇಂದು ಸಂಜೆ 4 ಕ್ಕೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ʼಆಂದೋಲನ-50 ಸಾರ್ಥಕ ಪಯಣʼ ಕಾರ್ಯಕ್ರಮ ಆಯೋಜನೆಯಾಗಿದೆ.
ಗಣ್ಯರ ಸ್ವಾಗತಕ್ಕೆ ಸಕಲ ಸಿದ್ಧತೆ
ಘಟಿಕೋತ್ಸವ ಭವನದ ದ್ವಾರದಲ್ಲಿ ಸ್ಥಾಪಿಸಿರುವ ʼʼಆಂದೋಲನ ಡಿಜಿಟಲ್ʼ ಕಿಯೋಸ್ಕ್ ನಲ್ಲಿ ಮೈಸೂರು,ಚಾಮರಾಜನಗರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳು ಸೇರಿ ರಾಜ್ಯದೆಲ್ಲೆಡೆಯಿಂದ ಆಗಮಿಸಲಿರುವ ಗಣ್ಯ ಮಾನ್ಯರು ʼಪತ್ರಿಕೆʼ ನಡೆದು ಬಂದ ಹಾದಿ ಬಗ್ಗೆ ಚುಟುಕು ಅನಿಸಿಕೆ ವ್ಯಕ್ತಪಡಿಸಲಿದ್ದಾರೆ. ಇವರ ನುಡಿಗಳು ʼಆಂದೋಲನ ಟಿವಿʼ ಡಿಜಿಟಲ್ ವೇದಿಕೆಯಲ್ಲಿ ಪ್ರಸಾರವಾಗಲಿದೆ. ನೂತನ ʼಆಂದೋಲನʼ ವೆಬ್ಸೈಟ್ ಅನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನಾವರಣಗೊಳಿಸಲಿದ್ದಾರೆ.
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…
ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…
ಹೇಮಂತ್ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…