ಆಂದೋಲನ 50

ಆಂದೋಲನ ನಮ್ಮ ನಡುವಣ ಆಶಾ ಕಿರಣ : ಎಚ್. ವಿಶ್ವನಾಥ್

ಮೈಸೂರು: ಆಂದೋಲನ ಪತ್ರಿಕೆಯ 50 ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ಅಭಿವೃದ್ಧಿ ಮುನ್ನೋಟದ ಬಗ್ಗೆ ಇಂದು ಅರ್ಥ ಪೂರ್ಣ ಸಂವಾದ ಕಾರ್ಯಕ್ರಮ ನಡೆಯಿತು.
ಕೆ. ಆರ್. ನಗರದ ಚೀರನಹಳ್ಳಿ ರಸ್ತೆಯ ಸಾಯಿ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮವನ್ನು ಪುರಸಭೆ ಕೋಳಿ ಪ್ರಕಾಶ್, ಹರದನಹಳ್ಳಿ ಗ್ರಾಮಪಂಚಾಯಿ ಅಧ್ಯಕ್ಷೆ ನಂದಿನಿ ರಮೇಶ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಮಾತನಾಡಿ ಆಂದೋಲನ ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿ ಅವರ ಜತೆಗಿನ ಒಡನಾಟವನ್ನು ಸ್ಮರಿಸಿದರು. ಪತ್ರಿಕೆಯನ್ನು ಕಟ್ಟಿ ಬೆಳೆಸಲು ಅವರು ಪಟ್ಟ ಶ್ರಮವನ್ನು ಸಭಿಕರ ಮುಂದೆ ತೆರೆದಿಟ್ಟರು. ತಾವೂ ಪತ್ರಿಕೆಗೆ ಬರೆಯುತ್ತಿದ್ದುದನ್ನು ಸ್ಮರಿಸಿದರು. ಆಂದೋಲನ ಪತ್ರಿಕೆ ಗ್ರಾಮೀಣ ಜನರ ಕಷ್ಟ ಕಾರ್ಪಣ್ಯಗಳನ್ನು ಬಿಂಬಿಸಿ ಜನಸ್ನೇಹಿಯಾಗಿ ಬೆಳೆದ ಪತ್ರಿಕೆ ಎಂದು ಬಣ್ಣಿಸಿದರು. ಮಾಧ್ಯಮಗಳು ಇಂದು ರಾಜಕಾರಣಿಗಳು, ಮಠಗಳು ಮತ್ತು ಮಠಾಧಿಪತಿಗಳ ಅಡಿಯಾಳಾಗುತ್ತಿವೆ. ಎಲ್ಲವನ್ನೂ ಓಟಿನಿಂದ ಅಳೆಯುವ ಪ್ರವೃತ್ತಿ ಬಂದಿದೆ. ಈ ನಡುವೆ ಆಂದೋಲನದಂತಹ ಪತ್ರಿಕೆ ನಮ್ಮ ನಡುವಣ ಆಶಾಕಿರಣ ಎಂದರು. ದೇವರಾಜ ಅರಸು, ತುಳಸಿದಾಸಪ್ಪ ಅವರಂತಹ ಧೀಮಂತರನ್ನು ಕಂಡ‌ ಮೈಸೂರು ಎಂದವರು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಸಾ.ರಾ ಮಹೇಶ್ ಪುತ್ರ ಜಯಂತ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಡಿ ರವಿಶಂಕರ್, ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಅಚ್ಚುತಾ ನಂದ್, ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ ಎನ್ ಬಸಂತ್, ಪ್ರಖ್ಯಾತ ಮೂಳೆ ತಜ್ಞರಾದ ಡಾಕ್ಟರ್ ಮೆಹಬೂಬ್ ಖಾನ್, ರಾಜ್ಯ ರೈತ ಸಂಘದ ವಿಭಾಗಿಯ ಸಂಘಟನಾ ಕಾರ್ಯದರ್ಶಿ ಸರಗೂರು ನಟರಾಜ್ ಮತ್ತಿತರರು ಭಾಗವಹಿಸಿದ್ದರು.

ಸಾಹಿತಿ, ಪತ್ರಕರ್ತ  ಭೇರ್ಯ ರಾಮಕುಮಾರ್ ಅವರು ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕಿನ 50 ವರ್ಷಗಳ ಅಭಿವೃದ್ಧಿ ಮುನ್ನೋಟದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ಇದೆ ವೇಳೆ ಸಾಧಕರಾದ ಕೆ ಎಲ್ ಹೇಮಂತ್ ಕುಮಾರ್, ಹಾಗೂ ಎಚ್ ಆರ್ ನವೀನ್ ಕುಮಾರ್ ಅವರಿಗೆ ಪತ್ರಿಕೆವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

andolanait

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

5 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

5 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

5 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

5 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

5 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

5 hours ago