ಆಂದೋಲನ 50

ಆಂದೋಲನ ನಮ್ಮ ನಡುವಣ ಆಶಾ ಕಿರಣ : ಎಚ್. ವಿಶ್ವನಾಥ್

ಮೈಸೂರು: ಆಂದೋಲನ ಪತ್ರಿಕೆಯ 50 ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಕೆ.ಆರ್. ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ಅಭಿವೃದ್ಧಿ ಮುನ್ನೋಟದ ಬಗ್ಗೆ ಇಂದು ಅರ್ಥ ಪೂರ್ಣ ಸಂವಾದ ಕಾರ್ಯಕ್ರಮ ನಡೆಯಿತು.
ಕೆ. ಆರ್. ನಗರದ ಚೀರನಹಳ್ಳಿ ರಸ್ತೆಯ ಸಾಯಿ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮವನ್ನು ಪುರಸಭೆ ಕೋಳಿ ಪ್ರಕಾಶ್, ಹರದನಹಳ್ಳಿ ಗ್ರಾಮಪಂಚಾಯಿ ಅಧ್ಯಕ್ಷೆ ನಂದಿನಿ ರಮೇಶ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಮಾತನಾಡಿ ಆಂದೋಲನ ಸಂಸ್ಥಾಪಕ ಸಂಪಾದಕ ರಾಜಶೇಖರ ಕೋಟಿ ಅವರ ಜತೆಗಿನ ಒಡನಾಟವನ್ನು ಸ್ಮರಿಸಿದರು. ಪತ್ರಿಕೆಯನ್ನು ಕಟ್ಟಿ ಬೆಳೆಸಲು ಅವರು ಪಟ್ಟ ಶ್ರಮವನ್ನು ಸಭಿಕರ ಮುಂದೆ ತೆರೆದಿಟ್ಟರು. ತಾವೂ ಪತ್ರಿಕೆಗೆ ಬರೆಯುತ್ತಿದ್ದುದನ್ನು ಸ್ಮರಿಸಿದರು. ಆಂದೋಲನ ಪತ್ರಿಕೆ ಗ್ರಾಮೀಣ ಜನರ ಕಷ್ಟ ಕಾರ್ಪಣ್ಯಗಳನ್ನು ಬಿಂಬಿಸಿ ಜನಸ್ನೇಹಿಯಾಗಿ ಬೆಳೆದ ಪತ್ರಿಕೆ ಎಂದು ಬಣ್ಣಿಸಿದರು. ಮಾಧ್ಯಮಗಳು ಇಂದು ರಾಜಕಾರಣಿಗಳು, ಮಠಗಳು ಮತ್ತು ಮಠಾಧಿಪತಿಗಳ ಅಡಿಯಾಳಾಗುತ್ತಿವೆ. ಎಲ್ಲವನ್ನೂ ಓಟಿನಿಂದ ಅಳೆಯುವ ಪ್ರವೃತ್ತಿ ಬಂದಿದೆ. ಈ ನಡುವೆ ಆಂದೋಲನದಂತಹ ಪತ್ರಿಕೆ ನಮ್ಮ ನಡುವಣ ಆಶಾಕಿರಣ ಎಂದರು. ದೇವರಾಜ ಅರಸು, ತುಳಸಿದಾಸಪ್ಪ ಅವರಂತಹ ಧೀಮಂತರನ್ನು ಕಂಡ‌ ಮೈಸೂರು ಎಂದವರು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಸಾ.ರಾ ಮಹೇಶ್ ಪುತ್ರ ಜಯಂತ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಾಂಗ್ರೆಸ್ ಮುಖಂಡ ಡಿ ರವಿಶಂಕರ್, ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಅಚ್ಚುತಾ ನಂದ್, ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ ಎನ್ ಬಸಂತ್, ಪ್ರಖ್ಯಾತ ಮೂಳೆ ತಜ್ಞರಾದ ಡಾಕ್ಟರ್ ಮೆಹಬೂಬ್ ಖಾನ್, ರಾಜ್ಯ ರೈತ ಸಂಘದ ವಿಭಾಗಿಯ ಸಂಘಟನಾ ಕಾರ್ಯದರ್ಶಿ ಸರಗೂರು ನಟರಾಜ್ ಮತ್ತಿತರರು ಭಾಗವಹಿಸಿದ್ದರು.

ಸಾಹಿತಿ, ಪತ್ರಕರ್ತ  ಭೇರ್ಯ ರಾಮಕುಮಾರ್ ಅವರು ಕೆ ಆರ್ ನಗರ ಮತ್ತು ಸಾಲಿಗ್ರಾಮ ತಾಲೂಕಿನ 50 ವರ್ಷಗಳ ಅಭಿವೃದ್ಧಿ ಮುನ್ನೋಟದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ಇದೆ ವೇಳೆ ಸಾಧಕರಾದ ಕೆ ಎಲ್ ಹೇಮಂತ್ ಕುಮಾರ್, ಹಾಗೂ ಎಚ್ ಆರ್ ನವೀನ್ ಕುಮಾರ್ ಅವರಿಗೆ ಪತ್ರಿಕೆವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

andolanait

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

9 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

12 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

13 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

14 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

14 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

15 hours ago