ಆಂದೋಲನ 50

ಆಂದೋಲನ ಪತ್ರಿಕೆಯ ಒಡನಾಡಿಗಳ ಒಡಲಾಳದ ಮಾತು – 4

 

ನನ್ನ ೧೮ ವರ್ಷಗಳ ಪರಿಸರ ರಕ್ಷಣೆಯ ಹೋರಾಟದ ಬೆನ್ನೆಲುಬಾಗಿ ನಿಂತ ಪತ್ರಿಕೆ ಎಂದರೆ ಅದು ‘ಆಂದೋಲನ’. ಅಂದಿನ ಕಾಲದಿಂದಲೂ ರಾಜಶೇಖರ ಕೋಟಿಯವರು ನಮ್ಮ ಪ್ರೋತ್ಸಾಹಕ್ಕೆ ನಿಂತ ಪರಿಣಾಮ ನಾವು ಇಂದು ಪರಿಸರವಾದಿಗಳು ಎಂದು ಗುರುತಿಸಿಕೊಳ್ಳಲು ಸಾಧ್ಯವಾಯಿತು. ತನ್ನ ಪ್ರಗತಿಪರ ಆಶಯಗಳೊಂದಿಗೆ ‘ಆಂದೋಲನ’ ರಾಜ್ಯ ಮಟ್ಟದಲ್ಲಿ ಜನಪ್ರಿಯತೆಯನ್ನು ಗಳಿಸಲಿ – ಭಾನು ಮೋಹನ್, ಪರಿಸರ ವಾದಿ.

‘ಆಂದೋಲನ ೫೦ ಸಾರ್ಥಕ ಪಯಣ’ ನಮ್ಮ ಕಾರ್ಯಕ್ರಮ ಎಂದು ಭಾವಿಸಿದ್ದೇನೆ. ಎಲ್ಲರನ್ನೂ ಒಳಗೊಂಡ ಮತ್ತು ಎಲ್ಲ ಪತ್ರಿಕೆಗಳ ಪುನಶ್ಚೇತನಕ್ಕೆ ಬೇಕಾದ ಕಾರ್ಯಕ್ರಮ. ಈ ಕಾರ್ಯಕ್ರಮ ‘ಆಂದೋಲನ’ ಮುಂದಿನ ಮೆಟ್ಟಿಲುಗಳನ್ನು ಹತ್ತಲು ಮತ್ತು ಅಲ್ಲಿ ಕೆಲಸ ಮಾಡುವ ಸಾಮಾಜಿಕ ಸ್ಥೈರ್ಯವನ್ನು ನೀಡಿದೆ. ಮುದ್ರಣ ಮಾಧ್ಯಮಗಳು ಬಹಳ ಸಂಕಷ್ಟದಲ್ಲಿ ಇರುವ ಈ ದಿನಗಳಲ್ಲಿ ‘ಆಂದೋಲನ’ ಪತ್ರಿಕೆ ಪ್ರವರ್ಧಮಾನಕ್ಕೆ ಬರಲಿ. -ಸ್ಟ್ಯಾನ್ಲಿ , ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ

‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮ ತುಂಬಾ ಅರ್ಥಪೂರ್ಣವಾಗಿ, ಯಶಸ್ವಿಯಾಗಿ ನೆರವೇರಿದ್ದು ತುಂಬಾ ಸಂತಸದ ವಿಷಯ. ರಾಜಶೇಖರ ಕೋಟಿ ಅವರ ಆಸೆ, ಆಶಯಗಳಿಗೆ ಅನುಗುಣವಾಗಿ ಕಾರ್ಯಕ್ರಮ ನಡೆದಿದೆ. ಶೋಷಿತರ, ಶ್ರಮಿಕರ ಹಾಗೂ ದಮನಿತರ ದನಿಯಾಗಿ ಸಮಾಜದ ಸ್ಪಷ್ಟ ಪ್ರತಿಬಿಂಬವಾಗಿ ಹೊರಬರುತ್ತಿರುವ ‘ಆಂದೋಲನ’ಕ್ಕೆ ಮತ್ತೊಮ್ಮೆ ಅಭಿನಂದನೆಗಳು. -ಡಾ.ಲತಾ ರಾಜಶೇಖರ್, ಕವಯಿತ್ರಿ

ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯದ ಭಾಗದಲ್ಲಿ ಚಾಲ್ತಿಯಲ್ಲಿ ಇರುವ ಪತ್ರಿಕೆ ‘ಆಂದೋಲನ’. ಆದರೆ, ರಾಜ್ಯ ಪತ್ರಿಕೆಗೆ ಸಮನಾಗಿದೆ. ಒಂದು ಪ್ರಾದೇಶಿಕ ಪತ್ರಿಕೆಯಾಗಿ ಜವಾಬ್ದಾರಿಯುತ ಮತ್ತು ಮಾನವೀಯತೆ ನೆಲೆಯಲ್ಲಿ ಪತ್ರಿಕೋದ್ಯಮ ಮಾಡುತ್ತಾ ಮೈಸೂರು ಭಾಗದ ಮನೆ-ಮನಗಳನ್ನು ತಲುಪಿದೆ. – ಆರ್.ಚೇತನ್, ಎಸ್.ಪಿ.ಮೈಸೂರು ಜಿಲ್ಲೆ

ರಾಜಶೇಖರ ಕೋಟಿ ಅವರ ಕಾಲದಿಂದ ಇಲ್ಲಿಯವರೆಗೂ ಪತ್ರಿಕೆಯೊಂದಿಗೆ ಉತ್ತಮ್ಮ ಒಡನಾಟವಿದೆ. ಪ್ರತಿಯೊಂದು ವಿಚಾರದಲ್ಲೂ ಆಂದೋಲನ ಬೆಂಬಲವಿತ್ತು. ‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮ ಪತ್ರಿಕೆಯ ಓದುಗರಲ್ಲಿ ಹೊಸ ಹುರುಪು ನೀಡಿದ್ದು, ಮುಂದಿನ ದಿನಗಳಲ್ಲಿ ಹೊಸತನದಿಂದ ಯಶಸ್ವಿಯಾಗಿ ಮುನ್ನಡೆಯಲಿ. -ಜೈನಹಳ್ಳಿ ಸತ್ಯನಾರಾಯಣಗೌಡ, ಪ್ರಧಾನ ಕಾರ್ಯದರ್ಶಿ, ಜ್ಞಾನಬುತ್ತಿ ಸಂಸ್ಥೆ

ರಾಜಶೇಖರ ಕೋಟಿ ಅವರು ಯಾವುದೇ ಮುಲಾಜಿಗೆ ಒಳಗಾಗದ, ಪತ್ರಿಕೋದ್ಯಮವನ್ನೇ ಬದುಕು ಎಂದು ಅದಕ್ಕಾಗಿ ಜೀವನ ಸವೆಸಿದ ಸಾಧಕ. ಅವರು ಮೈಸೂರು ಭಾಗದಲ್ಲಿ ತಮ್ಮ ಅಮೂಲ್ಯವಾದ ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಿದ್ದಾರೆ. ‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಕೆಳ ವರ್ಗದ ಜನರಿಂದ ಹಿಡಿದು ಅನೇಕ ಗಣ್ಯರು ಭಾಗವಹಿಸಿದ್ದರು. ಇದು ಅವರು ನಡೆಸಿದ ಪತ್ರಿಕೋದ್ಯಮಕ್ಕೆ ಸಾಕ್ಷಿಯಾಗಿದೆ. – ನಾಗಣ್ಣ, ಸಂಪಾದಕ, ಪ್ರಜಾಪಗ್ರತಿ ದಿನಪತ್ರಿಕೆ

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

9 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago