ಆಂದೋಲನ 50

ಆಂದೋಲನ ಪತ್ರಿಕೆಯ ಒಡನಾಡಿಗಳ ಒಡಲಾಳದ ಮಾತು – 4

 

ನನ್ನ ೧೮ ವರ್ಷಗಳ ಪರಿಸರ ರಕ್ಷಣೆಯ ಹೋರಾಟದ ಬೆನ್ನೆಲುಬಾಗಿ ನಿಂತ ಪತ್ರಿಕೆ ಎಂದರೆ ಅದು ‘ಆಂದೋಲನ’. ಅಂದಿನ ಕಾಲದಿಂದಲೂ ರಾಜಶೇಖರ ಕೋಟಿಯವರು ನಮ್ಮ ಪ್ರೋತ್ಸಾಹಕ್ಕೆ ನಿಂತ ಪರಿಣಾಮ ನಾವು ಇಂದು ಪರಿಸರವಾದಿಗಳು ಎಂದು ಗುರುತಿಸಿಕೊಳ್ಳಲು ಸಾಧ್ಯವಾಯಿತು. ತನ್ನ ಪ್ರಗತಿಪರ ಆಶಯಗಳೊಂದಿಗೆ ‘ಆಂದೋಲನ’ ರಾಜ್ಯ ಮಟ್ಟದಲ್ಲಿ ಜನಪ್ರಿಯತೆಯನ್ನು ಗಳಿಸಲಿ – ಭಾನು ಮೋಹನ್, ಪರಿಸರ ವಾದಿ.

‘ಆಂದೋಲನ ೫೦ ಸಾರ್ಥಕ ಪಯಣ’ ನಮ್ಮ ಕಾರ್ಯಕ್ರಮ ಎಂದು ಭಾವಿಸಿದ್ದೇನೆ. ಎಲ್ಲರನ್ನೂ ಒಳಗೊಂಡ ಮತ್ತು ಎಲ್ಲ ಪತ್ರಿಕೆಗಳ ಪುನಶ್ಚೇತನಕ್ಕೆ ಬೇಕಾದ ಕಾರ್ಯಕ್ರಮ. ಈ ಕಾರ್ಯಕ್ರಮ ‘ಆಂದೋಲನ’ ಮುಂದಿನ ಮೆಟ್ಟಿಲುಗಳನ್ನು ಹತ್ತಲು ಮತ್ತು ಅಲ್ಲಿ ಕೆಲಸ ಮಾಡುವ ಸಾಮಾಜಿಕ ಸ್ಥೈರ್ಯವನ್ನು ನೀಡಿದೆ. ಮುದ್ರಣ ಮಾಧ್ಯಮಗಳು ಬಹಳ ಸಂಕಷ್ಟದಲ್ಲಿ ಇರುವ ಈ ದಿನಗಳಲ್ಲಿ ‘ಆಂದೋಲನ’ ಪತ್ರಿಕೆ ಪ್ರವರ್ಧಮಾನಕ್ಕೆ ಬರಲಿ. -ಸ್ಟ್ಯಾನ್ಲಿ , ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ

‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮ ತುಂಬಾ ಅರ್ಥಪೂರ್ಣವಾಗಿ, ಯಶಸ್ವಿಯಾಗಿ ನೆರವೇರಿದ್ದು ತುಂಬಾ ಸಂತಸದ ವಿಷಯ. ರಾಜಶೇಖರ ಕೋಟಿ ಅವರ ಆಸೆ, ಆಶಯಗಳಿಗೆ ಅನುಗುಣವಾಗಿ ಕಾರ್ಯಕ್ರಮ ನಡೆದಿದೆ. ಶೋಷಿತರ, ಶ್ರಮಿಕರ ಹಾಗೂ ದಮನಿತರ ದನಿಯಾಗಿ ಸಮಾಜದ ಸ್ಪಷ್ಟ ಪ್ರತಿಬಿಂಬವಾಗಿ ಹೊರಬರುತ್ತಿರುವ ‘ಆಂದೋಲನ’ಕ್ಕೆ ಮತ್ತೊಮ್ಮೆ ಅಭಿನಂದನೆಗಳು. -ಡಾ.ಲತಾ ರಾಜಶೇಖರ್, ಕವಯಿತ್ರಿ

ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯದ ಭಾಗದಲ್ಲಿ ಚಾಲ್ತಿಯಲ್ಲಿ ಇರುವ ಪತ್ರಿಕೆ ‘ಆಂದೋಲನ’. ಆದರೆ, ರಾಜ್ಯ ಪತ್ರಿಕೆಗೆ ಸಮನಾಗಿದೆ. ಒಂದು ಪ್ರಾದೇಶಿಕ ಪತ್ರಿಕೆಯಾಗಿ ಜವಾಬ್ದಾರಿಯುತ ಮತ್ತು ಮಾನವೀಯತೆ ನೆಲೆಯಲ್ಲಿ ಪತ್ರಿಕೋದ್ಯಮ ಮಾಡುತ್ತಾ ಮೈಸೂರು ಭಾಗದ ಮನೆ-ಮನಗಳನ್ನು ತಲುಪಿದೆ. – ಆರ್.ಚೇತನ್, ಎಸ್.ಪಿ.ಮೈಸೂರು ಜಿಲ್ಲೆ

ರಾಜಶೇಖರ ಕೋಟಿ ಅವರ ಕಾಲದಿಂದ ಇಲ್ಲಿಯವರೆಗೂ ಪತ್ರಿಕೆಯೊಂದಿಗೆ ಉತ್ತಮ್ಮ ಒಡನಾಟವಿದೆ. ಪ್ರತಿಯೊಂದು ವಿಚಾರದಲ್ಲೂ ಆಂದೋಲನ ಬೆಂಬಲವಿತ್ತು. ‘ಆಂದೋಲನ ೫೦ ಸಾರ್ಥಕ ಪಯಣ’ ಕಾರ್ಯಕ್ರಮ ಪತ್ರಿಕೆಯ ಓದುಗರಲ್ಲಿ ಹೊಸ ಹುರುಪು ನೀಡಿದ್ದು, ಮುಂದಿನ ದಿನಗಳಲ್ಲಿ ಹೊಸತನದಿಂದ ಯಶಸ್ವಿಯಾಗಿ ಮುನ್ನಡೆಯಲಿ. -ಜೈನಹಳ್ಳಿ ಸತ್ಯನಾರಾಯಣಗೌಡ, ಪ್ರಧಾನ ಕಾರ್ಯದರ್ಶಿ, ಜ್ಞಾನಬುತ್ತಿ ಸಂಸ್ಥೆ

ರಾಜಶೇಖರ ಕೋಟಿ ಅವರು ಯಾವುದೇ ಮುಲಾಜಿಗೆ ಒಳಗಾಗದ, ಪತ್ರಿಕೋದ್ಯಮವನ್ನೇ ಬದುಕು ಎಂದು ಅದಕ್ಕಾಗಿ ಜೀವನ ಸವೆಸಿದ ಸಾಧಕ. ಅವರು ಮೈಸೂರು ಭಾಗದಲ್ಲಿ ತಮ್ಮ ಅಮೂಲ್ಯವಾದ ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಿದ್ದಾರೆ. ‘ಆಂದೋಲನ ೫೦ ಸಾರ್ಥಕ ಪಯಣ’ದಲ್ಲಿ ಕೆಳ ವರ್ಗದ ಜನರಿಂದ ಹಿಡಿದು ಅನೇಕ ಗಣ್ಯರು ಭಾಗವಹಿಸಿದ್ದರು. ಇದು ಅವರು ನಡೆಸಿದ ಪತ್ರಿಕೋದ್ಯಮಕ್ಕೆ ಸಾಕ್ಷಿಯಾಗಿದೆ. – ನಾಗಣ್ಣ, ಸಂಪಾದಕ, ಪ್ರಜಾಪಗ್ರತಿ ದಿನಪತ್ರಿಕೆ

andolana

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

8 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

21 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

21 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

21 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

21 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

21 hours ago