ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮಕ್ಕೆ ೧೯೨೭ರಲ್ಲಿ ಭೇಟಿ ನೀಡಿದ್ದ ಮಹಾತ್ಮಾ ಗಾಂಧಿ ಅವರು ಬದನವಾಳು ನೂಲುವ ಪ್ರಾಂತ್ಯ ಎಂಬ ಕಲ್ಲನ್ನು ಶಿಲಾನ್ಯಾಸ ಮಾಡಿದರು. ಆ ಮೂಲಕ ಬದನವಾಳು ಖಾದಿ ಗ್ರಾಮೋದ್ಯೋಗ ಸಹಕಾರ ಸಂಘ ಎಂಬ ಸಂಸ್ಥೆ ಉದಯಕ್ಕೆ ಕಾರಣರಾದರು. ಆನಂತರ ಬದನವಾಳಿನಲ್ಲಿ ಖಾದಿ ಬಟ್ಟೆ, ಅವಲಕ್ಕಿ, ಎಣ್ಣೆ, ಬೆಂಕಿ ಪೊಟ್ಟಣ, ಕಾಗದ ತಯಾರಿ ಸೇರಿದಂತೆ ೧೪ಕ್ಕೂ ಹೆಚ್ಚು ಬಗೆಯ ಸ್ವದೇಶಿ ಉತ್ಪನ್ನಗಳನ್ನು ತಯಾರಿಸುವ ಕಾರ್ಯ ಆರಂಭಗೊಂಡಿತ್ತು. ಮತ್ತೊಮ್ಮೆ
೧೯೩೨ರಲ್ಲಿ ಬದನವಾಳಿಗೆ ಭೇಟಿ ನೀಡಿದ ಗಾಂಧೀಜಿ, ಸುಮಾರು ೭೦೦ಕ್ಕೂ ಹೆಚ್ಚು ಮಂದಿ ಕೆಲಸ ನಿರ್ವಹಿಸುವ ಮೂಲಕ ಗ್ರಾಮೀಣ ಉದ್ಯೋಗಾವಕಾಶದ ಕೇಂದ್ರವಾಗಿದ್ದ ಬದನವಾಳನ್ನು ನೋಡಿ ಖುಷಿಪಟ್ಟಿದ್ದಾರೆ ಎಂದು ಸ್ಥಳೀಯರು ನೆನಪಿಸಿಕೊಳ್ಳುತ್ತಾರೆ.
ಕೈಗಾರಿಕೋದ್ಯಮ ಜಾಸ್ತಿಯಾದಂತೆ ಬದನವಾಳು ಕೇಂದ್ರದಲ್ಲಿ ಚಟುವಟಿಕೆ ಕಡಿಮೆಯಾಗತೊಡಗಿತು. ೧೯೮೬ರ ವೇಳೆ ಮುಚ್ಚುವ ಹಂತಕ್ಕೆ ತಲುಪಿದ್ದ ಬದನವಾಳು ಖಾದಿ ಕೇಂದ್ರವನ್ನು ಹೊಳೆ ನರಸೀಪುರ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಹಸ್ತಾಂತರಿಸುವ ಮೂಲಕ ಪುನಶ್ಚೇತನ ಕಾರ್ಯನಡೆಯಿತು. ಅಂದಿನಿಂದ ನಡೆದುಕೊಂಡು ಬಂದ ಕೇಂದ್ರದಲ್ಲಿ ಇದೀಗ ಒಂದಷ್ಟು ಸುಧಾರಣೆ ಕಂಡುಬಂದಿದ್ದು ೨೦೧೬-೧೭ನೇ ಸಾಲಿನಲ್ಲಿ ಬದನವಳೂ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ೨೦ ಲಕ್ಷ ರೂ.ಗೂ ಹೆಚ್ಚು ಮೊತ್ತದ ನೂಲು ಮತ್ತು ಖಾದಿ ಉತ್ಪನ್ನಗಳ ಮಾರಾಟ ಮಾಡಿ ಗಮನ ಸೆಳೆದಿದೆ.
ಅವಳಿ ತಾಲ್ಲೂಕುಗಳ ಹಲವೆಡೆ ಅವಾಂತರ; ಕಾವಲು ಹೊಸೂರು ಗ್ರಾಮದಲ್ಲಿ ರಾಗಿ ಬೆಳೆದಿದ್ದ ರೈತರು ಕಂಗಾಲು ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪೂರಕವಾಗಿ ೧೯೨೪ರಲ್ಲೇ ಆರಂಭವಾದ ಈ ಪ್ರೌಢಶಾಲೆ ಪ್ರಸ್ತುತ ಉದುರಿಬೀಳುವ ಹಂತದ ಗೋಡೆ ಹಾಗೂ ಮಳೆ…
ಕೋಲ್ಕತ್ತಾ : ಟಿ20 ವಿಶ್ವಕಪ್ನ ಸೂಪರ್ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…
ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…
ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…