ಆಂದೋಲನ 50

ಬದನವಾಳು ಖಾದಿ ಕೇಂದ್ರ

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮಕ್ಕೆ ೧೯೨೭ರಲ್ಲಿ ಭೇಟಿ ನೀಡಿದ್ದ ಮಹಾತ್ಮಾ ಗಾಂಧಿ ಅವರು ಬದನವಾಳು ನೂಲುವ ಪ್ರಾಂತ್ಯ ಎಂಬ ಕಲ್ಲನ್ನು ಶಿಲಾನ್ಯಾಸ ಮಾಡಿದರು. ಆ ಮೂಲಕ ಬದನವಾಳು ಖಾದಿ ಗ್ರಾಮೋದ್ಯೋಗ ಸಹಕಾರ ಸಂಘ ಎಂಬ ಸಂಸ್ಥೆ ಉದಯಕ್ಕೆ ಕಾರಣರಾದರು. ಆನಂತರ ಬದನವಾಳಿನಲ್ಲಿ ಖಾದಿ ಬಟ್ಟೆ, ಅವಲಕ್ಕಿ, ಎಣ್ಣೆ, ಬೆಂಕಿ ಪೊಟ್ಟಣ, ಕಾಗದ ತಯಾರಿ ಸೇರಿದಂತೆ ೧೪ಕ್ಕೂ ಹೆಚ್ಚು ಬಗೆಯ ಸ್ವದೇಶಿ ಉತ್ಪನ್ನಗಳನ್ನು ತಯಾರಿಸುವ ಕಾರ್ಯ ಆರಂಭಗೊಂಡಿತ್ತು. ಮತ್ತೊಮ್ಮೆ

೧೯೩೨ರಲ್ಲಿ ಬದನವಾಳಿಗೆ ಭೇಟಿ ನೀಡಿದ ಗಾಂಧೀಜಿ, ಸುಮಾರು ೭೦೦ಕ್ಕೂ ಹೆಚ್ಚು ಮಂದಿ ಕೆಲಸ ನಿರ್ವಹಿಸುವ ಮೂಲಕ ಗ್ರಾಮೀಣ ಉದ್ಯೋಗಾವಕಾಶದ ಕೇಂದ್ರವಾಗಿದ್ದ ಬದನವಾಳನ್ನು ನೋಡಿ ಖುಷಿಪಟ್ಟಿದ್ದಾರೆ ಎಂದು ಸ್ಥಳೀಯರು ನೆನಪಿಸಿಕೊಳ್ಳುತ್ತಾರೆ.

ಕೈಗಾರಿಕೋದ್ಯಮ ಜಾಸ್ತಿಯಾದಂತೆ ಬದನವಾಳು ಕೇಂದ್ರದಲ್ಲಿ ಚಟುವಟಿಕೆ ಕಡಿಮೆಯಾಗತೊಡಗಿತು. ೧೯೮೬ರ ವೇಳೆ ಮುಚ್ಚುವ ಹಂತಕ್ಕೆ ತಲುಪಿದ್ದ ಬದನವಾಳು ಖಾದಿ ಕೇಂದ್ರವನ್ನು ಹೊಳೆ ನರಸೀಪುರ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಹಸ್ತಾಂತರಿಸುವ ಮೂಲಕ ಪುನಶ್ಚೇತನ ಕಾರ್ಯನಡೆಯಿತು. ಅಂದಿನಿಂದ ನಡೆದುಕೊಂಡು ಬಂದ ಕೇಂದ್ರದಲ್ಲಿ ಇದೀಗ ಒಂದಷ್ಟು ಸುಧಾರಣೆ ಕಂಡುಬಂದಿದ್ದು ೨೦೧೬-೧೭ನೇ ಸಾಲಿನಲ್ಲಿ ಬದನವಳೂ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ೨೦ ಲಕ್ಷ ರೂ.ಗೂ ಹೆಚ್ಚು ಮೊತ್ತದ ನೂಲು ಮತ್ತು ಖಾದಿ ಉತ್ಪನ್ನಗಳ ಮಾರಾಟ ಮಾಡಿ ಗಮನ ಸೆಳೆದಿದೆ.

andolana

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

15 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

16 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

18 hours ago