ಆಂದೋಲನ 50

ಬದನವಾಳು ಖಾದಿ ಕೇಂದ್ರ

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮಕ್ಕೆ ೧೯೨೭ರಲ್ಲಿ ಭೇಟಿ ನೀಡಿದ್ದ ಮಹಾತ್ಮಾ ಗಾಂಧಿ ಅವರು ಬದನವಾಳು ನೂಲುವ ಪ್ರಾಂತ್ಯ ಎಂಬ ಕಲ್ಲನ್ನು ಶಿಲಾನ್ಯಾಸ ಮಾಡಿದರು. ಆ ಮೂಲಕ ಬದನವಾಳು ಖಾದಿ ಗ್ರಾಮೋದ್ಯೋಗ ಸಹಕಾರ ಸಂಘ ಎಂಬ ಸಂಸ್ಥೆ ಉದಯಕ್ಕೆ ಕಾರಣರಾದರು. ಆನಂತರ ಬದನವಾಳಿನಲ್ಲಿ ಖಾದಿ ಬಟ್ಟೆ, ಅವಲಕ್ಕಿ, ಎಣ್ಣೆ, ಬೆಂಕಿ ಪೊಟ್ಟಣ, ಕಾಗದ ತಯಾರಿ ಸೇರಿದಂತೆ ೧೪ಕ್ಕೂ ಹೆಚ್ಚು ಬಗೆಯ ಸ್ವದೇಶಿ ಉತ್ಪನ್ನಗಳನ್ನು ತಯಾರಿಸುವ ಕಾರ್ಯ ಆರಂಭಗೊಂಡಿತ್ತು. ಮತ್ತೊಮ್ಮೆ

೧೯೩೨ರಲ್ಲಿ ಬದನವಾಳಿಗೆ ಭೇಟಿ ನೀಡಿದ ಗಾಂಧೀಜಿ, ಸುಮಾರು ೭೦೦ಕ್ಕೂ ಹೆಚ್ಚು ಮಂದಿ ಕೆಲಸ ನಿರ್ವಹಿಸುವ ಮೂಲಕ ಗ್ರಾಮೀಣ ಉದ್ಯೋಗಾವಕಾಶದ ಕೇಂದ್ರವಾಗಿದ್ದ ಬದನವಾಳನ್ನು ನೋಡಿ ಖುಷಿಪಟ್ಟಿದ್ದಾರೆ ಎಂದು ಸ್ಥಳೀಯರು ನೆನಪಿಸಿಕೊಳ್ಳುತ್ತಾರೆ.

ಕೈಗಾರಿಕೋದ್ಯಮ ಜಾಸ್ತಿಯಾದಂತೆ ಬದನವಾಳು ಕೇಂದ್ರದಲ್ಲಿ ಚಟುವಟಿಕೆ ಕಡಿಮೆಯಾಗತೊಡಗಿತು. ೧೯೮೬ರ ವೇಳೆ ಮುಚ್ಚುವ ಹಂತಕ್ಕೆ ತಲುಪಿದ್ದ ಬದನವಾಳು ಖಾದಿ ಕೇಂದ್ರವನ್ನು ಹೊಳೆ ನರಸೀಪುರ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಹಸ್ತಾಂತರಿಸುವ ಮೂಲಕ ಪುನಶ್ಚೇತನ ಕಾರ್ಯನಡೆಯಿತು. ಅಂದಿನಿಂದ ನಡೆದುಕೊಂಡು ಬಂದ ಕೇಂದ್ರದಲ್ಲಿ ಇದೀಗ ಒಂದಷ್ಟು ಸುಧಾರಣೆ ಕಂಡುಬಂದಿದ್ದು ೨೦೧೬-೧೭ನೇ ಸಾಲಿನಲ್ಲಿ ಬದನವಳೂ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ೨೦ ಲಕ್ಷ ರೂ.ಗೂ ಹೆಚ್ಚು ಮೊತ್ತದ ನೂಲು ಮತ್ತು ಖಾದಿ ಉತ್ಪನ್ನಗಳ ಮಾರಾಟ ಮಾಡಿ ಗಮನ ಸೆಳೆದಿದೆ.

andolana

Recent Posts

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

3 hours ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

8 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

8 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

8 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

8 hours ago