ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮಕ್ಕೆ ೧೯೨೭ರಲ್ಲಿ ಭೇಟಿ ನೀಡಿದ್ದ ಮಹಾತ್ಮಾ ಗಾಂಧಿ ಅವರು ಬದನವಾಳು ನೂಲುವ ಪ್ರಾಂತ್ಯ ಎಂಬ ಕಲ್ಲನ್ನು ಶಿಲಾನ್ಯಾಸ ಮಾಡಿದರು. ಆ ಮೂಲಕ ಬದನವಾಳು ಖಾದಿ ಗ್ರಾಮೋದ್ಯೋಗ ಸಹಕಾರ ಸಂಘ ಎಂಬ ಸಂಸ್ಥೆ ಉದಯಕ್ಕೆ ಕಾರಣರಾದರು. ಆನಂತರ ಬದನವಾಳಿನಲ್ಲಿ ಖಾದಿ ಬಟ್ಟೆ, ಅವಲಕ್ಕಿ, ಎಣ್ಣೆ, ಬೆಂಕಿ ಪೊಟ್ಟಣ, ಕಾಗದ ತಯಾರಿ ಸೇರಿದಂತೆ ೧೪ಕ್ಕೂ ಹೆಚ್ಚು ಬಗೆಯ ಸ್ವದೇಶಿ ಉತ್ಪನ್ನಗಳನ್ನು ತಯಾರಿಸುವ ಕಾರ್ಯ ಆರಂಭಗೊಂಡಿತ್ತು. ಮತ್ತೊಮ್ಮೆ
೧೯೩೨ರಲ್ಲಿ ಬದನವಾಳಿಗೆ ಭೇಟಿ ನೀಡಿದ ಗಾಂಧೀಜಿ, ಸುಮಾರು ೭೦೦ಕ್ಕೂ ಹೆಚ್ಚು ಮಂದಿ ಕೆಲಸ ನಿರ್ವಹಿಸುವ ಮೂಲಕ ಗ್ರಾಮೀಣ ಉದ್ಯೋಗಾವಕಾಶದ ಕೇಂದ್ರವಾಗಿದ್ದ ಬದನವಾಳನ್ನು ನೋಡಿ ಖುಷಿಪಟ್ಟಿದ್ದಾರೆ ಎಂದು ಸ್ಥಳೀಯರು ನೆನಪಿಸಿಕೊಳ್ಳುತ್ತಾರೆ.
ಕೈಗಾರಿಕೋದ್ಯಮ ಜಾಸ್ತಿಯಾದಂತೆ ಬದನವಾಳು ಕೇಂದ್ರದಲ್ಲಿ ಚಟುವಟಿಕೆ ಕಡಿಮೆಯಾಗತೊಡಗಿತು. ೧೯೮೬ರ ವೇಳೆ ಮುಚ್ಚುವ ಹಂತಕ್ಕೆ ತಲುಪಿದ್ದ ಬದನವಾಳು ಖಾದಿ ಕೇಂದ್ರವನ್ನು ಹೊಳೆ ನರಸೀಪುರ ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಹಸ್ತಾಂತರಿಸುವ ಮೂಲಕ ಪುನಶ್ಚೇತನ ಕಾರ್ಯನಡೆಯಿತು. ಅಂದಿನಿಂದ ನಡೆದುಕೊಂಡು ಬಂದ ಕೇಂದ್ರದಲ್ಲಿ ಇದೀಗ ಒಂದಷ್ಟು ಸುಧಾರಣೆ ಕಂಡುಬಂದಿದ್ದು ೨೦೧೬-೧೭ನೇ ಸಾಲಿನಲ್ಲಿ ಬದನವಳೂ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ೨೦ ಲಕ್ಷ ರೂ.ಗೂ ಹೆಚ್ಚು ಮೊತ್ತದ ನೂಲು ಮತ್ತು ಖಾದಿ ಉತ್ಪನ್ನಗಳ ಮಾರಾಟ ಮಾಡಿ ಗಮನ ಸೆಳೆದಿದೆ.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…