–ಪರಮಶಿವ ನಡುಬೆಟ್ಟ, ಸಾಹಿತಿ
ಆಂದೋಲನ’ ಪತ್ರಿಕೆಯ ಪ್ರಾರಂಭದಲ್ಲಿ ಕರಡು ಪ್ರತಿ ತಿದ್ದುವುದು, ಅಂಚೆಗೆ ಹೋಗುವ ಪ್ರತಿಗಳಿಗೆ ವಿಳಾಸ ಬರೆಯುವುದನ್ನೂ ಮಾಡುತ್ತಿದ್ದೆ. ಹಲವು ಕಾರ್ಯಕ್ರಮಗಳಿಗೆ ಹೋದಾಗ ಅದರ ವರದಿಯನ್ನು ಬರೆದು ಕಳುಹಿಸುತ್ತಿದ್ದೆ. ವರದಿಯನ್ನು ಓದಿ ‘ನೀವು ಪತ್ರಿಕೆಯಲ್ಲಿ ಕೆಲಸ ಮಾಡಿದವರು, ಚೆನ್ನಾಗಿ ವರದಿ ಮಾಡಬಲ್ಲಿರಿ’ ಎಂದು ಬೆನ್ನು ತಟ್ಟುತ್ತಿದ್ದರು. ‘ಆಂದೋಲನ’ದಲ್ಲಿ ಪ್ರಕಟವಾಗುತ್ತಿದ್ದ ಆಡಳಿತಶಾಹಿಗಳಿಂದ ಆಗುವ ಶೋಷಣೆ, ಸಾಮಾಜಿಕ ದೌರ್ಜನ್ಯ, ಸರ್ಕಾರದ ನ್ಯೂನತೆಯ ಸತ್ಯನಿಷ್ಠ ವರದಿಗಳು ಜನಸಾಮಾನ್ಯರಿಗೆ ಮೆಚ್ಚುಗೆಯಾದವು. ಅಂದಿನಿಂದಲೂ ಕೋಟಿಯವರ ಪತ್ರಿಕೆ ರಾಜ್ಯ ಮಟ್ಟದ ಪತ್ರಿಕೆಯಷ್ಟೇ ಪ್ರಸಿದ್ಧವಾಯಿತು.
ಜಾತಿ, ಧರ್ಮದ ಬಗ್ಗೆ ಖೇದ ವ್ಯಕ್ತಪಡಿಸುತ್ತಿದ್ದ ಕೋಟಿಯವರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವಾಗ ಜಾತಿ, ಧರ್ಮದ ಕಾಲಮಿನ ಬಗ್ಗೆ ನೊಂದುಕೊಂಡರು. ಚಾಮುಂಡಿಬೆಟ್ಟದಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ನನಗೆ ‘ಕುಸುಮ ಬಾಲೆ’ ರಂಗರೂಪಕ್ಕಿಳಿಸಲು ಹೆಗಲಾಗಿದ್ದ ಕೋಟಿ ನನ್ನ ಜೊತೆ ಅದನ್ನು ವ್ಯಕ್ತಪಡಿಸುತ್ತ, ಆ ಕಾಲಮಿನಲ್ಲಿ ಜಾತಿ, ಧರ್ಮ ‘ಮಾನವೀಯ’ ಎಂದು ಬರೆಯಲೇ ಎಂದದ್ದು ಅವರಿಗೆ ಜಾತಿ, ಧರ್ಮದಲ್ಲಿ ನಂಬಿಕೆ ಇರಲಿಲ್ಲ ಎಂಬುದನ್ನು ತೋರುತ್ತದೆ.
ಕತೆಗಾರನಾದ ನನಗೆ ನಮ್ಮ ಆಂದೋಲನ’ ಪತ್ರಿಕೆಯಲ್ಲಿ ಸಾಪ್ತಾಹಿಕ ವಿಭಾಗವನ್ನು ಏಕೆ ಆರಂಭಿಸಬಾರದು? ಆ ಮೂಲಕ ಉದಯೋನ್ಮುಖ ಬರಹಗಾರರಿಗೆ ಆಸರೆಯಾಗಬಾರದೇಕೆ ಎಂಬೆಲ್ಲ ಚಿಂತನೆಗಳು ಬಂದು, ಕೋಟಿಯವರ ಜೊತೆ ಇದನ್ನೂ ಚರ್ಚಿಸಿದೆ. ಅವರ ಬೆನ್ನಿಗಿದ್ದ ಬರಹಗಾರರ ಸಲಹೆ ಪಡೆದು ಅದನ್ನೂ ಆರಂಭಿಸಿದರು. ಇಂದು ಸಾಪ್ತಾಹಿಕ ವಿಭಾಗ ರಾಜ್ಯ ಮಟ್ಟದ ಯಾವ ಪತ್ರಿಕೆಗೂ ಕಡಿಮೆ ಇಲ್ಲದಂತೆ ಮೂಡಿಬುರುತ್ತಿರುವುದು ಹೆಮ್ಮೆಯ ಸಂಗತಿ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…