ಆಂದೋಲನ 50

ಜಾತಿ, ಧರ್ಮದ ಕಾಲಂನಲ್ಲಿ ‘ಮಾನವೀಯ’ ಅಂತ ಬರೆಸಲೇ… ಎಂದಿದ್ದರು!

ಪರಮಶಿವ ನಡುಬೆಟ್ಟ, ಸಾಹಿತಿ

ಆಂದೋಲನ’ ಪತ್ರಿಕೆಯ ಪ್ರಾರಂಭದಲ್ಲಿ ಕರಡು ಪ್ರತಿ ತಿದ್ದುವುದು, ಅಂಚೆಗೆ ಹೋಗುವ ಪ್ರತಿಗಳಿಗೆ ವಿಳಾಸ ಬರೆಯುವುದನ್ನೂ ಮಾಡುತ್ತಿದ್ದೆ. ಹಲವು ಕಾರ್ಯಕ್ರಮಗಳಿಗೆ ಹೋದಾಗ ಅದರ ವರದಿಯನ್ನು ಬರೆದು ಕಳುಹಿಸುತ್ತಿದ್ದೆ. ವರದಿಯನ್ನು ಓದಿ ‘ನೀವು ಪತ್ರಿಕೆಯಲ್ಲಿ ಕೆಲಸ ಮಾಡಿದವರು, ಚೆನ್ನಾಗಿ ವರದಿ ಮಾಡಬಲ್ಲಿರಿ’ ಎಂದು ಬೆನ್ನು ತಟ್ಟುತ್ತಿದ್ದರು. ‘ಆಂದೋಲನ’ದಲ್ಲಿ ಪ್ರಕಟವಾಗುತ್ತಿದ್ದ ಆಡಳಿತಶಾಹಿಗಳಿಂದ ಆಗುವ ಶೋಷಣೆ, ಸಾಮಾಜಿಕ ದೌರ್ಜನ್ಯ, ಸರ್ಕಾರದ ನ್ಯೂನತೆಯ ಸತ್ಯನಿಷ್ಠ ವರದಿಗಳು ಜನಸಾಮಾನ್ಯರಿಗೆ ಮೆಚ್ಚುಗೆಯಾದವು. ಅಂದಿನಿಂದಲೂ ಕೋಟಿಯವರ ಪತ್ರಿಕೆ ರಾಜ್ಯ ಮಟ್ಟದ ಪತ್ರಿಕೆಯಷ್ಟೇ ಪ್ರಸಿದ್ಧವಾಯಿತು.
ಜಾತಿ, ಧರ್ಮದ ಬಗ್ಗೆ ಖೇದ ವ್ಯಕ್ತಪಡಿಸುತ್ತಿದ್ದ ಕೋಟಿಯವರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವಾಗ ಜಾತಿ, ಧರ್ಮದ ಕಾಲಮಿನ ಬಗ್ಗೆ ನೊಂದುಕೊಂಡರು. ಚಾಮುಂಡಿಬೆಟ್ಟದಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ನನಗೆ ‘ಕುಸುಮ ಬಾಲೆ’ ರಂಗರೂಪಕ್ಕಿಳಿಸಲು ಹೆಗಲಾಗಿದ್ದ ಕೋಟಿ ನನ್ನ ಜೊತೆ ಅದನ್ನು ವ್ಯಕ್ತಪಡಿಸುತ್ತ, ಆ ಕಾಲಮಿನಲ್ಲಿ ಜಾತಿ, ಧರ್ಮ ‘ಮಾನವೀಯ’ ಎಂದು ಬರೆಯಲೇ ಎಂದದ್ದು ಅವರಿಗೆ ಜಾತಿ, ಧರ್ಮದಲ್ಲಿ ನಂಬಿಕೆ ಇರಲಿಲ್ಲ ಎಂಬುದನ್ನು ತೋರುತ್ತದೆ.
ಕತೆಗಾರನಾದ ನನಗೆ ನಮ್ಮ ಆಂದೋಲನ’ ಪತ್ರಿಕೆಯಲ್ಲಿ ಸಾಪ್ತಾಹಿಕ ವಿಭಾಗವನ್ನು ಏಕೆ ಆರಂಭಿಸಬಾರದು? ಆ ಮೂಲಕ ಉದಯೋನ್ಮುಖ ಬರಹಗಾರರಿಗೆ ಆಸರೆಯಾಗಬಾರದೇಕೆ ಎಂಬೆಲ್ಲ ಚಿಂತನೆಗಳು ಬಂದು, ಕೋಟಿಯವರ ಜೊತೆ ಇದನ್ನೂ ಚರ್ಚಿಸಿದೆ. ಅವರ ಬೆನ್ನಿಗಿದ್ದ ಬರಹಗಾರರ ಸಲಹೆ ಪಡೆದು ಅದನ್ನೂ ಆರಂಭಿಸಿದರು. ಇಂದು ಸಾಪ್ತಾಹಿಕ ವಿಭಾಗ ರಾಜ್ಯ ಮಟ್ಟದ ಯಾವ ಪತ್ರಿಕೆಗೂ ಕಡಿಮೆ ಇಲ್ಲದಂತೆ ಮೂಡಿಬುರುತ್ತಿರುವುದು ಹೆಮ್ಮೆಯ ಸಂಗತಿ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

8 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

22 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

22 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

22 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

22 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

22 hours ago