ಆಂದೋಲನ 50

ಜಾತಿ, ಧರ್ಮದ ಕಾಲಂನಲ್ಲಿ ‘ಮಾನವೀಯ’ ಅಂತ ಬರೆಸಲೇ… ಎಂದಿದ್ದರು!

ಪರಮಶಿವ ನಡುಬೆಟ್ಟ, ಸಾಹಿತಿ

ಆಂದೋಲನ’ ಪತ್ರಿಕೆಯ ಪ್ರಾರಂಭದಲ್ಲಿ ಕರಡು ಪ್ರತಿ ತಿದ್ದುವುದು, ಅಂಚೆಗೆ ಹೋಗುವ ಪ್ರತಿಗಳಿಗೆ ವಿಳಾಸ ಬರೆಯುವುದನ್ನೂ ಮಾಡುತ್ತಿದ್ದೆ. ಹಲವು ಕಾರ್ಯಕ್ರಮಗಳಿಗೆ ಹೋದಾಗ ಅದರ ವರದಿಯನ್ನು ಬರೆದು ಕಳುಹಿಸುತ್ತಿದ್ದೆ. ವರದಿಯನ್ನು ಓದಿ ‘ನೀವು ಪತ್ರಿಕೆಯಲ್ಲಿ ಕೆಲಸ ಮಾಡಿದವರು, ಚೆನ್ನಾಗಿ ವರದಿ ಮಾಡಬಲ್ಲಿರಿ’ ಎಂದು ಬೆನ್ನು ತಟ್ಟುತ್ತಿದ್ದರು. ‘ಆಂದೋಲನ’ದಲ್ಲಿ ಪ್ರಕಟವಾಗುತ್ತಿದ್ದ ಆಡಳಿತಶಾಹಿಗಳಿಂದ ಆಗುವ ಶೋಷಣೆ, ಸಾಮಾಜಿಕ ದೌರ್ಜನ್ಯ, ಸರ್ಕಾರದ ನ್ಯೂನತೆಯ ಸತ್ಯನಿಷ್ಠ ವರದಿಗಳು ಜನಸಾಮಾನ್ಯರಿಗೆ ಮೆಚ್ಚುಗೆಯಾದವು. ಅಂದಿನಿಂದಲೂ ಕೋಟಿಯವರ ಪತ್ರಿಕೆ ರಾಜ್ಯ ಮಟ್ಟದ ಪತ್ರಿಕೆಯಷ್ಟೇ ಪ್ರಸಿದ್ಧವಾಯಿತು.
ಜಾತಿ, ಧರ್ಮದ ಬಗ್ಗೆ ಖೇದ ವ್ಯಕ್ತಪಡಿಸುತ್ತಿದ್ದ ಕೋಟಿಯವರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವಾಗ ಜಾತಿ, ಧರ್ಮದ ಕಾಲಮಿನ ಬಗ್ಗೆ ನೊಂದುಕೊಂಡರು. ಚಾಮುಂಡಿಬೆಟ್ಟದಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ನನಗೆ ‘ಕುಸುಮ ಬಾಲೆ’ ರಂಗರೂಪಕ್ಕಿಳಿಸಲು ಹೆಗಲಾಗಿದ್ದ ಕೋಟಿ ನನ್ನ ಜೊತೆ ಅದನ್ನು ವ್ಯಕ್ತಪಡಿಸುತ್ತ, ಆ ಕಾಲಮಿನಲ್ಲಿ ಜಾತಿ, ಧರ್ಮ ‘ಮಾನವೀಯ’ ಎಂದು ಬರೆಯಲೇ ಎಂದದ್ದು ಅವರಿಗೆ ಜಾತಿ, ಧರ್ಮದಲ್ಲಿ ನಂಬಿಕೆ ಇರಲಿಲ್ಲ ಎಂಬುದನ್ನು ತೋರುತ್ತದೆ.
ಕತೆಗಾರನಾದ ನನಗೆ ನಮ್ಮ ಆಂದೋಲನ’ ಪತ್ರಿಕೆಯಲ್ಲಿ ಸಾಪ್ತಾಹಿಕ ವಿಭಾಗವನ್ನು ಏಕೆ ಆರಂಭಿಸಬಾರದು? ಆ ಮೂಲಕ ಉದಯೋನ್ಮುಖ ಬರಹಗಾರರಿಗೆ ಆಸರೆಯಾಗಬಾರದೇಕೆ ಎಂಬೆಲ್ಲ ಚಿಂತನೆಗಳು ಬಂದು, ಕೋಟಿಯವರ ಜೊತೆ ಇದನ್ನೂ ಚರ್ಚಿಸಿದೆ. ಅವರ ಬೆನ್ನಿಗಿದ್ದ ಬರಹಗಾರರ ಸಲಹೆ ಪಡೆದು ಅದನ್ನೂ ಆರಂಭಿಸಿದರು. ಇಂದು ಸಾಪ್ತಾಹಿಕ ವಿಭಾಗ ರಾಜ್ಯ ಮಟ್ಟದ ಯಾವ ಪತ್ರಿಕೆಗೂ ಕಡಿಮೆ ಇಲ್ಲದಂತೆ ಮೂಡಿಬುರುತ್ತಿರುವುದು ಹೆಮ್ಮೆಯ ಸಂಗತಿ.

andolanait

Recent Posts

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

34 mins ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

4 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

4 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

4 hours ago