ಆಂದೋಲನ 50

ತಿ.ನರಸೀಪುರ ತಾಲ್ಲೂಕಿನ ಸಾಧಕರಿಬ್ಬರಿಗೆ ಆತ್ಮೀಯ ಸನ್ಮಾನ

ಭತ್ತದ ತಳಿ ಸಂರಕ್ಷಕ ಎಂ.ಕೆ.ಶಂಕರ್ ಗುರು, ಕ್ರೀಡಾ ರತ್ನ ಪುರಸ್ಕೃತ ಎಂ.ವೀಣಾ ಅವರಿಗೆ ಗೌರವ ಸಲ್ಲಿಕೆ

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನಲ್ಲಿ ‘ಆಂದೋಲನ’ ದಿನಪತ್ರಿಕೆ ೫೦ ಸಾರ್ಥಕ ಪಯಣ ಕಾರ್ಯಕ್ರಮದಲ್ಲಿ ಸಾಧಕರಿಬ್ಬರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ವಿದ್ಯೋದಯ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧಕರಾದ ಭತ್ತದ ತಳಿ ಸಂರಕ್ಷಕ ಎಂ.ಕೆ.ಶಂಕರ್ ಗುರು, ಕ್ರೀಡಾ ರತ್ನ ಪುರಸ್ಕೃತ ಎಂ.ವೀಣಾ ಅವರನ್ನು ಸಂಸದ ವಿ.ಶ್ರೀನಿವಾಸಪ್ರಸಾದ್, ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ಎಂ.ಅಶ್ವಿನ್‌ಕುಮಾರ್, ಡಾ.ಎನ್.ಎಲ್.ಭಾರತೀಶಂಕರ್ ಸಮ್ಮುಖದಲ್ಲಿ ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಭತ್ತದ ತಳಿ ಸಂರಕ್ಷಕ ಎಂ.ಕೆ.ಶಂಕರ್ ಗುರು: ತಿ.ನರಸೀಪುರ ತಾಲ್ಲೂಕಿನಲ್ಲಿ ಮಾದರಹಳ್ಳಿ ಗ್ರಾಮದ ಪ್ರಗತಿ ಪರ ರೈತ ಎಂ.ಕೆ.ಶಂಕರ್ ಗುರು ಪ್ರಮುಖರು. ಕಳೆದ ಮೂರು ೩ ದಶಕಗಳಿಂದ ಭತ್ತದ ಹೊಸ ತಳಿಗಳನ್ನು ಬೆಳೆಸುವುದರ ಜೊತೆಗೆ ಸಾಂಪ್ರದಾಯಿಕ ತಳಿಗಳ ಬೀಜ ಸಂಗ್ರಹ ಮತ್ತು ಸಂರಕ್ಷಣೆುಂಲ್ಲೂ ಶಂಕರ್ ಮಹತ್ತರ ಪಾತ್ರ ವಹಿಸಿದ್ದಾರೆ.
ಶಂಕರ್ ಅಭಿವೃದ್ಧಿಪಡಿಸಿರುವ ಸುಧಾರಿತ ತಳಿ ‘ಓಒ-೨’ ಭತ್ತದ ತಳಿುಂನ್ನು ಭಾರತ ಸರ್ಕಾರದ ಸಸ್ಯ ಪ್ರಭೇದಗಳ ನೋಂದಣಿ ಸಂಸ್ಥೆಯು ಗುರುತಿಸಿ ಅನುಮೋದನೆಯು ಮುದ್ರೆ ಒತ್ತಿದೆ. 2014ರಲ್ಲಿ ಪ್ಲಾಂಟ್ ಜಿನೋಮ್ ಸೇವರ್ ಫಾರ್ಮರ್ ಮನ್ನಣೆಯನ್ನು ನೀಡಿ ಗೌರವಿಸಿದೆ. ಶಂಕರ್ ಅವರು, ‘ರತ್ನಚೂಡಿ ತಳಿ ಎಂಬ ಔಷಧಿಯ ಗುಣವುಳ್ಳ ತಳಿಯನ್ನೂ ಸಂರಕ್ಷಿಸಿದಾರೆ. ‘ಜೀರಗ ಸಣ್ಣ ಎಂಬ ಇನ್ನೊಂದು ಅಕ್ಕಿ ತಳಿ ಪರಿಮಳ ಭರಿತವಾಗಿದ್ದು ಬೆಳೆಗಾರರಲ್ಲಿ ಜನಪ್ರಿಯವಾಗಿದೆ.

ಕ್ರೀಡಾ ರತ್ನ ಪುರಸ್ಕೃತ ಎಂ.ವೀಣಾ
ತಿ.ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಎಂ.ವೀಣಾ( ೨೨) ಅವರು ಖೋಖೋದಲ್ಲಿ ರಾಜ್ಯ ಸರ್ಕಾರ ನೀಡುವ ಕ್ರೀಡಾ ರತ್ನ (೨೦೧೭) ಪ್ರಶಸ್ತಿ ಪಡೆದು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದವರು. ೧೨ ವರ್ಷಗಳ ಹಿಂದೆ ೫ನೇ ತರಗತಿಯಲ್ಲಿ ಓದುತ್ತಿರುವಾಗಲೇ ವೀಣಾ ಖೋಖೋ ಆಟದ ಅಭ್ಯಾಸ ಆರಂಭಿಸಿದರು. ನಂತರ ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಖೋಖೋ ಪಂದ್ಯಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಪುರಸ್ಕಾರ ಪಡೆದಿದ್ದಾರೆ. ೨೦೧೯-೨೦ನೇ ಸಾಲಿನ ೫೩ನೇ ನ್ಯಾಷನಲ್ ಸೀನಿಯರ್ಸ್ ಖೋಖೋ ಚಾಂಪಿಯನ್ ಶಿಪ್‌ನಲ್ಲಿ ರಾನ್ಸಿರಾಣಿ ಲಕ್ಷ್ಮೀಭಾಯಿ ಪ್ರಶಸ್ತಿ ಪಡೆದಿದ್ದಾರೆ. ಅಸ್ಸಾಂನಲ್ಲಿ ನಡೆದ ೧೨ನೇ ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ದಿಲ್ಲಿಯಲ್ಲಿ ನಡೆದ ೪ನೇ ಏಷ್ಯನ್ ಗೇಮ್ಸ್ ಖೋಖೋ ಅಂತಾರಾಷ್ಟ್ರೀಯ ಶಿಬಿರದಲ್ಲಿ ಭಾಗವಹಿಸಿದ್ದಾರೆ. ಇವರು ಕುರುಬೂರು ಮಹದೇವ ಸ್ವಾಮಿ ಮತ್ತು ಮಾದಲಾಂಬಿಕಾ ಅವರ ಪುತ್ರಿ, ಬಿಕಾಂ ಪದವೀಧರೆ ವೀಣಾ, ಈಗ ದೈಹಿಕ ಶಿಕ್ಷಕಿಯಾಗುವ ಉದ್ದೇಶದಿಂದ ಎಂಪಿ.ಎಡ್ ಮಾಡುತ್ತಿದ್ದಾರೆ.

 

andolanait

Recent Posts

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಮಗ್ರ ಓದಿಗೆ ಒತ್ತು ನೀಡಿ : ಎಸ್‌.ಪಿ ಮಲ್ಲಿಕಾರ್ಜುನ ಬಾಲದಂಡಿ

ಮೈಸೂರು : ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ…

4 mins ago

ಸಾಮರ್ಥ್ಯ ವೃದ್ಧಿಗೆ ಎಐ ಬಳಸಿಕೊಳ್ಳಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ…

18 mins ago

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…

2 hours ago

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್‌ ಭೇಟಿ

ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್‌ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…

2 hours ago

ಹನೂರು| ಕುಡಿಯುವ ನೀರಿಗಾಗಿ ಪರದಾಟ: ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…

3 hours ago

ಕೆನಡಾದಲ್ಲಿ ಕನ್ನಡಿಗನ ಬರ್ಬರ ಹತ್ಯೆ

ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…

3 hours ago