ಆಂದೋಲನ 50

ತಿ.ನರಸೀಪುರ ತಾಲ್ಲೂಕಿನ ಸಾಧಕರಿಬ್ಬರಿಗೆ ಆತ್ಮೀಯ ಸನ್ಮಾನ

ಭತ್ತದ ತಳಿ ಸಂರಕ್ಷಕ ಎಂ.ಕೆ.ಶಂಕರ್ ಗುರು, ಕ್ರೀಡಾ ರತ್ನ ಪುರಸ್ಕೃತ ಎಂ.ವೀಣಾ ಅವರಿಗೆ ಗೌರವ ಸಲ್ಲಿಕೆ

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನಲ್ಲಿ ‘ಆಂದೋಲನ’ ದಿನಪತ್ರಿಕೆ ೫೦ ಸಾರ್ಥಕ ಪಯಣ ಕಾರ್ಯಕ್ರಮದಲ್ಲಿ ಸಾಧಕರಿಬ್ಬರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ವಿದ್ಯೋದಯ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧಕರಾದ ಭತ್ತದ ತಳಿ ಸಂರಕ್ಷಕ ಎಂ.ಕೆ.ಶಂಕರ್ ಗುರು, ಕ್ರೀಡಾ ರತ್ನ ಪುರಸ್ಕೃತ ಎಂ.ವೀಣಾ ಅವರನ್ನು ಸಂಸದ ವಿ.ಶ್ರೀನಿವಾಸಪ್ರಸಾದ್, ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ಎಂ.ಅಶ್ವಿನ್‌ಕುಮಾರ್, ಡಾ.ಎನ್.ಎಲ್.ಭಾರತೀಶಂಕರ್ ಸಮ್ಮುಖದಲ್ಲಿ ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಭತ್ತದ ತಳಿ ಸಂರಕ್ಷಕ ಎಂ.ಕೆ.ಶಂಕರ್ ಗುರು: ತಿ.ನರಸೀಪುರ ತಾಲ್ಲೂಕಿನಲ್ಲಿ ಮಾದರಹಳ್ಳಿ ಗ್ರಾಮದ ಪ್ರಗತಿ ಪರ ರೈತ ಎಂ.ಕೆ.ಶಂಕರ್ ಗುರು ಪ್ರಮುಖರು. ಕಳೆದ ಮೂರು ೩ ದಶಕಗಳಿಂದ ಭತ್ತದ ಹೊಸ ತಳಿಗಳನ್ನು ಬೆಳೆಸುವುದರ ಜೊತೆಗೆ ಸಾಂಪ್ರದಾಯಿಕ ತಳಿಗಳ ಬೀಜ ಸಂಗ್ರಹ ಮತ್ತು ಸಂರಕ್ಷಣೆುಂಲ್ಲೂ ಶಂಕರ್ ಮಹತ್ತರ ಪಾತ್ರ ವಹಿಸಿದ್ದಾರೆ.
ಶಂಕರ್ ಅಭಿವೃದ್ಧಿಪಡಿಸಿರುವ ಸುಧಾರಿತ ತಳಿ ‘ಓಒ-೨’ ಭತ್ತದ ತಳಿುಂನ್ನು ಭಾರತ ಸರ್ಕಾರದ ಸಸ್ಯ ಪ್ರಭೇದಗಳ ನೋಂದಣಿ ಸಂಸ್ಥೆಯು ಗುರುತಿಸಿ ಅನುಮೋದನೆಯು ಮುದ್ರೆ ಒತ್ತಿದೆ. 2014ರಲ್ಲಿ ಪ್ಲಾಂಟ್ ಜಿನೋಮ್ ಸೇವರ್ ಫಾರ್ಮರ್ ಮನ್ನಣೆಯನ್ನು ನೀಡಿ ಗೌರವಿಸಿದೆ. ಶಂಕರ್ ಅವರು, ‘ರತ್ನಚೂಡಿ ತಳಿ ಎಂಬ ಔಷಧಿಯ ಗುಣವುಳ್ಳ ತಳಿಯನ್ನೂ ಸಂರಕ್ಷಿಸಿದಾರೆ. ‘ಜೀರಗ ಸಣ್ಣ ಎಂಬ ಇನ್ನೊಂದು ಅಕ್ಕಿ ತಳಿ ಪರಿಮಳ ಭರಿತವಾಗಿದ್ದು ಬೆಳೆಗಾರರಲ್ಲಿ ಜನಪ್ರಿಯವಾಗಿದೆ.

ಕ್ರೀಡಾ ರತ್ನ ಪುರಸ್ಕೃತ ಎಂ.ವೀಣಾ
ತಿ.ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಎಂ.ವೀಣಾ( ೨೨) ಅವರು ಖೋಖೋದಲ್ಲಿ ರಾಜ್ಯ ಸರ್ಕಾರ ನೀಡುವ ಕ್ರೀಡಾ ರತ್ನ (೨೦೧೭) ಪ್ರಶಸ್ತಿ ಪಡೆದು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದವರು. ೧೨ ವರ್ಷಗಳ ಹಿಂದೆ ೫ನೇ ತರಗತಿಯಲ್ಲಿ ಓದುತ್ತಿರುವಾಗಲೇ ವೀಣಾ ಖೋಖೋ ಆಟದ ಅಭ್ಯಾಸ ಆರಂಭಿಸಿದರು. ನಂತರ ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಖೋಖೋ ಪಂದ್ಯಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಪುರಸ್ಕಾರ ಪಡೆದಿದ್ದಾರೆ. ೨೦೧೯-೨೦ನೇ ಸಾಲಿನ ೫೩ನೇ ನ್ಯಾಷನಲ್ ಸೀನಿಯರ್ಸ್ ಖೋಖೋ ಚಾಂಪಿಯನ್ ಶಿಪ್‌ನಲ್ಲಿ ರಾನ್ಸಿರಾಣಿ ಲಕ್ಷ್ಮೀಭಾಯಿ ಪ್ರಶಸ್ತಿ ಪಡೆದಿದ್ದಾರೆ. ಅಸ್ಸಾಂನಲ್ಲಿ ನಡೆದ ೧೨ನೇ ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ದಿಲ್ಲಿಯಲ್ಲಿ ನಡೆದ ೪ನೇ ಏಷ್ಯನ್ ಗೇಮ್ಸ್ ಖೋಖೋ ಅಂತಾರಾಷ್ಟ್ರೀಯ ಶಿಬಿರದಲ್ಲಿ ಭಾಗವಹಿಸಿದ್ದಾರೆ. ಇವರು ಕುರುಬೂರು ಮಹದೇವ ಸ್ವಾಮಿ ಮತ್ತು ಮಾದಲಾಂಬಿಕಾ ಅವರ ಪುತ್ರಿ, ಬಿಕಾಂ ಪದವೀಧರೆ ವೀಣಾ, ಈಗ ದೈಹಿಕ ಶಿಕ್ಷಕಿಯಾಗುವ ಉದ್ದೇಶದಿಂದ ಎಂಪಿ.ಎಡ್ ಮಾಡುತ್ತಿದ್ದಾರೆ.

 

andolanait

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

5 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

6 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

6 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

8 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

12 hours ago