ಆಂದೋಲನ 50

ತಿ.ನರಸೀಪುರ ತಾಲ್ಲೂಕಿನ ಸಾಧಕರಿಬ್ಬರಿಗೆ ಆತ್ಮೀಯ ಸನ್ಮಾನ

ಭತ್ತದ ತಳಿ ಸಂರಕ್ಷಕ ಎಂ.ಕೆ.ಶಂಕರ್ ಗುರು, ಕ್ರೀಡಾ ರತ್ನ ಪುರಸ್ಕೃತ ಎಂ.ವೀಣಾ ಅವರಿಗೆ ಗೌರವ ಸಲ್ಲಿಕೆ

ಮೈಸೂರು: ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನಲ್ಲಿ ‘ಆಂದೋಲನ’ ದಿನಪತ್ರಿಕೆ ೫೦ ಸಾರ್ಥಕ ಪಯಣ ಕಾರ್ಯಕ್ರಮದಲ್ಲಿ ಸಾಧಕರಿಬ್ಬರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ವಿದ್ಯೋದಯ ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧಕರಾದ ಭತ್ತದ ತಳಿ ಸಂರಕ್ಷಕ ಎಂ.ಕೆ.ಶಂಕರ್ ಗುರು, ಕ್ರೀಡಾ ರತ್ನ ಪುರಸ್ಕೃತ ಎಂ.ವೀಣಾ ಅವರನ್ನು ಸಂಸದ ವಿ.ಶ್ರೀನಿವಾಸಪ್ರಸಾದ್, ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ಎಂ.ಅಶ್ವಿನ್‌ಕುಮಾರ್, ಡಾ.ಎನ್.ಎಲ್.ಭಾರತೀಶಂಕರ್ ಸಮ್ಮುಖದಲ್ಲಿ ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಭತ್ತದ ತಳಿ ಸಂರಕ್ಷಕ ಎಂ.ಕೆ.ಶಂಕರ್ ಗುರು: ತಿ.ನರಸೀಪುರ ತಾಲ್ಲೂಕಿನಲ್ಲಿ ಮಾದರಹಳ್ಳಿ ಗ್ರಾಮದ ಪ್ರಗತಿ ಪರ ರೈತ ಎಂ.ಕೆ.ಶಂಕರ್ ಗುರು ಪ್ರಮುಖರು. ಕಳೆದ ಮೂರು ೩ ದಶಕಗಳಿಂದ ಭತ್ತದ ಹೊಸ ತಳಿಗಳನ್ನು ಬೆಳೆಸುವುದರ ಜೊತೆಗೆ ಸಾಂಪ್ರದಾಯಿಕ ತಳಿಗಳ ಬೀಜ ಸಂಗ್ರಹ ಮತ್ತು ಸಂರಕ್ಷಣೆುಂಲ್ಲೂ ಶಂಕರ್ ಮಹತ್ತರ ಪಾತ್ರ ವಹಿಸಿದ್ದಾರೆ.
ಶಂಕರ್ ಅಭಿವೃದ್ಧಿಪಡಿಸಿರುವ ಸುಧಾರಿತ ತಳಿ ‘ಓಒ-೨’ ಭತ್ತದ ತಳಿುಂನ್ನು ಭಾರತ ಸರ್ಕಾರದ ಸಸ್ಯ ಪ್ರಭೇದಗಳ ನೋಂದಣಿ ಸಂಸ್ಥೆಯು ಗುರುತಿಸಿ ಅನುಮೋದನೆಯು ಮುದ್ರೆ ಒತ್ತಿದೆ. 2014ರಲ್ಲಿ ಪ್ಲಾಂಟ್ ಜಿನೋಮ್ ಸೇವರ್ ಫಾರ್ಮರ್ ಮನ್ನಣೆಯನ್ನು ನೀಡಿ ಗೌರವಿಸಿದೆ. ಶಂಕರ್ ಅವರು, ‘ರತ್ನಚೂಡಿ ತಳಿ ಎಂಬ ಔಷಧಿಯ ಗುಣವುಳ್ಳ ತಳಿಯನ್ನೂ ಸಂರಕ್ಷಿಸಿದಾರೆ. ‘ಜೀರಗ ಸಣ್ಣ ಎಂಬ ಇನ್ನೊಂದು ಅಕ್ಕಿ ತಳಿ ಪರಿಮಳ ಭರಿತವಾಗಿದ್ದು ಬೆಳೆಗಾರರಲ್ಲಿ ಜನಪ್ರಿಯವಾಗಿದೆ.

ಕ್ರೀಡಾ ರತ್ನ ಪುರಸ್ಕೃತ ಎಂ.ವೀಣಾ
ತಿ.ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಎಂ.ವೀಣಾ( ೨೨) ಅವರು ಖೋಖೋದಲ್ಲಿ ರಾಜ್ಯ ಸರ್ಕಾರ ನೀಡುವ ಕ್ರೀಡಾ ರತ್ನ (೨೦೧೭) ಪ್ರಶಸ್ತಿ ಪಡೆದು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿ ತಂದವರು. ೧೨ ವರ್ಷಗಳ ಹಿಂದೆ ೫ನೇ ತರಗತಿಯಲ್ಲಿ ಓದುತ್ತಿರುವಾಗಲೇ ವೀಣಾ ಖೋಖೋ ಆಟದ ಅಭ್ಯಾಸ ಆರಂಭಿಸಿದರು. ನಂತರ ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಖೋಖೋ ಪಂದ್ಯಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಪುರಸ್ಕಾರ ಪಡೆದಿದ್ದಾರೆ. ೨೦೧೯-೨೦ನೇ ಸಾಲಿನ ೫೩ನೇ ನ್ಯಾಷನಲ್ ಸೀನಿಯರ್ಸ್ ಖೋಖೋ ಚಾಂಪಿಯನ್ ಶಿಪ್‌ನಲ್ಲಿ ರಾನ್ಸಿರಾಣಿ ಲಕ್ಷ್ಮೀಭಾಯಿ ಪ್ರಶಸ್ತಿ ಪಡೆದಿದ್ದಾರೆ. ಅಸ್ಸಾಂನಲ್ಲಿ ನಡೆದ ೧೨ನೇ ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ದಿಲ್ಲಿಯಲ್ಲಿ ನಡೆದ ೪ನೇ ಏಷ್ಯನ್ ಗೇಮ್ಸ್ ಖೋಖೋ ಅಂತಾರಾಷ್ಟ್ರೀಯ ಶಿಬಿರದಲ್ಲಿ ಭಾಗವಹಿಸಿದ್ದಾರೆ. ಇವರು ಕುರುಬೂರು ಮಹದೇವ ಸ್ವಾಮಿ ಮತ್ತು ಮಾದಲಾಂಬಿಕಾ ಅವರ ಪುತ್ರಿ, ಬಿಕಾಂ ಪದವೀಧರೆ ವೀಣಾ, ಈಗ ದೈಹಿಕ ಶಿಕ್ಷಕಿಯಾಗುವ ಉದ್ದೇಶದಿಂದ ಎಂಪಿ.ಎಡ್ ಮಾಡುತ್ತಿದ್ದಾರೆ.

 

andolanait

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

5 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

21 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

21 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

23 hours ago