ಆಂದೋಲನ 50

ಕಣ್ಮರೆಯಾದ ನಂಜನಗೂಡಿನ ‘ಅಪೊಲೊ’ ವೃತ್ತದ ವಿಶೇಷ

ನಂಜನಗೂಡು- ಮೈಸೂರು ರಸ್ತೆಯಲ್ಲಿರುವ ತಾಲ್ಲೂಕು ಪಂಚಾಯಿತಿ ಕಚೇರಿ ಬಳಿ ಚಾಮಲಾಪುರದ ಹುಂಡಿ ವೃತ್ತ ಇದೆ. ಇದನ್ನು ಹಿಂದೆ ತಾಲ್ಲೂಕು ಪಂಚಾಯಿತಿ ವೃತ್ತ, ಅದಕ್ಕೂ ಹಿಂದೆ ಬಿಡಿಒ (ತಾಲ್ಲೂಕು ಅಭಿವೃದ್ಧಿ ಅಧಿಕಾರಿ) ಆಫೀಸ್ ಸರ್ಕಲ್ ಎಂದು ಕರೆಲಾಗುತ್ತಿತ್ತು. ಆದರೆ, ಈ ಸಂಬಂಧ ಯಾವುದೇ ಅಧಿಕೃತ ನಾಮಫಲಕ ಇಲ್ಲ. ವಾಸ್ತವವಾಗಿ ಈ ವೃತ್ತಕ್ಕೆ ಬಹಳ ಹಿಂದೆ ನಾಮಫಲಕ ಅಳವಡಿಸಲಾಗಿತ್ತು. ಅದರಲ್ಲಿ ಇದ್ದ ಹೆಸರು ಯಾವುದು ಗೊತ್ತೆ? ‘ಅಪೊಲೊ ವೃತ್ತ!’.

ವಿದೇಶಗಳ ಸಾಧನೆಗೆ ಪರೋಕ್ಷವಾಗಿ ಮೆಚ್ಚುಗೆ ಸೂಚಿಸುವ ಉದ್ದೇಶದಿಂದ ನಂಜನಗೂಡಿನಲ್ಲಿ ವೃತ್ತವೊಂದಕ್ಕೆ ಅಪೊಲೊ ವೃತ್ತ ಎಂದು ನಾಮಕಾರಣ ಮಾಡಲಾಗಿತ್ತು. ಇದೊಂದು ರೀತಿಯಲ್ಲಿ ವಿಚಿತ್ರವಾಗಿ ಕಾಣಬಹುದು. ಆದರೆ, ನಿಜವಾಗಿ ಇದರ ಹಿಂದೆ ಅಮೆರಿಕ, ರಷ್ಯಾ ಸಾಧನೆಗಳ ಪ್ರಸಂಗದ ನಂಟು ಇದೆ. ಅದೇನೆಂದರೆ, ಅಮೆರಿಕ ದೇಶವು ಅಪೊಲೊ ಮತ್ತು ರಷ್ಯಾ ದೇಶವು ಸೂಯಿಜ್ ಎಂಬ ಅಂತರಿಕ್ಷ ಉಪಗ್ರಹಗಳನ್ನು ಉಡಾವಣೆ ಮಾಡಿದ್ದಲ್ಲದೆ, ಮಾರ್ಗಮಧ್ಯೆ ಒಂದನ್ನೊಂದು ಕೂಡಿಕೊಂಡು ಪಯಣ ಬೆಳೆಸಿದ್ದವು ಎನ್ನಲಾಗಿದೆ. ಅದರ ಸ್ಮರಣಾರ್ಥ ನಂಜನಗೂಡಿನಲ್ಲಿ ಅಪೊಲೊ (ಅಮೆರಿಕ ಉಪಗ್ರಹ) ವೃತ್ತಕ್ಕೆ ನಾಮಕರಣ ಮಾಡಲಾಗಿತ್ತು.

andolana

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

2 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

2 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

2 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

2 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

4 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

4 hours ago