1908ರ ಮಾರ್ಚ್ 28ರಂದು ಅಂದಿನ ಸರ್ಕಾರ ಗೆಜೆಟ್ ಪ್ರಕಟಣೆ ಹೊರಡಿಸಿ ನಂಜನಗೂಡನ್ನು ‘ಟೌನ್’ ಎಂದು ಕರೆದು, ಇಲ್ಲಿ ೧೫ ಸ ದಸ್ಯರ ಪುರಸಭೆಯ ವ್ಯವಸ್ಥೆಯನ್ನು ಜಾರಿಗೊಳಿಸಿತು. ಆಗಿನ ಕಾಲಕ್ಕೆ ಈ ಊರಿನಲ್ಲಿದ್ದ ಅನೇಕ ಗಣ್ಯ ವ್ಯಕ್ತಿಗಳು ಇದರ ಸದಸ್ಯರಾಗಿ ಎಲ್ಲ ಕಾಲಕ್ಕೂ ಆದರ್ಶವೆನ್ನಿಸುವ ರೀತಿಯಲ್ಲಿ ಸೇವೆ ಸಲ್ಲಿಸಿ ದಾರೆ. ಮೊದಲು ದಳವಾಯಿ ಕಟ್ಟಡ ದಲ್ಲಿಯೇ ಪುರಸಭೆಯ ಕಾರ್ಯಾಲಯ ಇತ್ತು. ಈಗಿನ ನಗರಸಭೆಯ ಕಟ್ಟಡವನ್ನು ಉ ದ್ಘಾಟಿಸಿ ದವರು ಮೈಸೂರಿನ ಮಹಾರಾಜರಾದ ಶ್ರೀ ಜಯಚಾಮ ರಾಜೇಂದ್ರ ಒಡೆಯರ್ ಅವರು. ಆದರೆ, ಆ ಸಮಯದಲ್ಲಿ ನಂಜನಗೂಡಿನಲ್ಲಿ ಕಾಲರಾ ಇದ್ದುದರಿಂದ ಮಹಾರಾಜರಿಗೆ ಆತಿಥ್ಯ ನೀಡುವ ಬಗ್ಗೆ ಸ್ವಲ್ಪ ಸಮಸ್ಯೆ ಉಂಟಾಯಿತು. ಕಡೆಗೆ, ಉದ್ಘಾಟನೆ ನಡೆ ದ ನಂತರ ಮಹಾರಾಜರಿಗೆ ಬೇಗೂರಿನ ಪ್ರವಾಸಿಮಂದಿರ ದಲ್ಲಿ ಭೋಜನಕ್ಕೆ ಏರ್ಪಾಡು ಮಾಡಲಾಗಿತ್ತು. ೧೯೦೦ರ ವೇಳೆಗೆ ನಂಜನಗೂಡಿನಲ್ಲಿ ಜ್ಯೂಯರ್ ವಾಟರ್ ಫಿಲ್ಟರ್ ವ್ಯವಸ್ಥೆ ಮೂಲಕ ಶು ದ್ಧ ನೀರನ್ನು ಪೂರೈಸಲಾಗುತ್ತಿತ್ತು. ಆಗಿನ ಕಾಲಕ್ಕೆ ಇಡೀ ರಾಜ್ಯದಲ್ಲಿ ಬೆಂಗಳೂರು, ಮೈಸೂರು ಬಿಟ್ಟರೆ ಈ ಊರಿನಲ್ಲಿಯೇ ಅಂತಹ ಏರ್ಪಾಡು ಇದ್ದದ್ದು. ಹಳೆಯ ಬಸ್ ಸ್ಟ್ಯಾಂಡ್ ಮತ್ತು ಟೌನ್ ಟೆನ್ನಿಸ್ ಕ್ಲಬ್ ಇರುವ ಜಾಗದಲ್ಲಿ ಇದಕ್ಕೆ ಏರ್ಪಾಡು ಮಾಡಲಾಗಿತ್ತು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…