1908ರ ಮಾರ್ಚ್ 28ರಂದು ಅಂದಿನ ಸರ್ಕಾರ ಗೆಜೆಟ್ ಪ್ರಕಟಣೆ ಹೊರಡಿಸಿ ನಂಜನಗೂಡನ್ನು ‘ಟೌನ್’ ಎಂದು ಕರೆದು, ಇಲ್ಲಿ ೧೫ ಸ ದಸ್ಯರ ಪುರಸಭೆಯ ವ್ಯವಸ್ಥೆಯನ್ನು ಜಾರಿಗೊಳಿಸಿತು. ಆಗಿನ ಕಾಲಕ್ಕೆ ಈ ಊರಿನಲ್ಲಿದ್ದ ಅನೇಕ ಗಣ್ಯ ವ್ಯಕ್ತಿಗಳು ಇದರ ಸದಸ್ಯರಾಗಿ ಎಲ್ಲ ಕಾಲಕ್ಕೂ ಆದರ್ಶವೆನ್ನಿಸುವ ರೀತಿಯಲ್ಲಿ ಸೇವೆ ಸಲ್ಲಿಸಿ ದಾರೆ. ಮೊದಲು ದಳವಾಯಿ ಕಟ್ಟಡ ದಲ್ಲಿಯೇ ಪುರಸಭೆಯ ಕಾರ್ಯಾಲಯ ಇತ್ತು. ಈಗಿನ ನಗರಸಭೆಯ ಕಟ್ಟಡವನ್ನು ಉ ದ್ಘಾಟಿಸಿ ದವರು ಮೈಸೂರಿನ ಮಹಾರಾಜರಾದ ಶ್ರೀ ಜಯಚಾಮ ರಾಜೇಂದ್ರ ಒಡೆಯರ್ ಅವರು. ಆದರೆ, ಆ ಸಮಯದಲ್ಲಿ ನಂಜನಗೂಡಿನಲ್ಲಿ ಕಾಲರಾ ಇದ್ದುದರಿಂದ ಮಹಾರಾಜರಿಗೆ ಆತಿಥ್ಯ ನೀಡುವ ಬಗ್ಗೆ ಸ್ವಲ್ಪ ಸಮಸ್ಯೆ ಉಂಟಾಯಿತು. ಕಡೆಗೆ, ಉದ್ಘಾಟನೆ ನಡೆ ದ ನಂತರ ಮಹಾರಾಜರಿಗೆ ಬೇಗೂರಿನ ಪ್ರವಾಸಿಮಂದಿರ ದಲ್ಲಿ ಭೋಜನಕ್ಕೆ ಏರ್ಪಾಡು ಮಾಡಲಾಗಿತ್ತು. ೧೯೦೦ರ ವೇಳೆಗೆ ನಂಜನಗೂಡಿನಲ್ಲಿ ಜ್ಯೂಯರ್ ವಾಟರ್ ಫಿಲ್ಟರ್ ವ್ಯವಸ್ಥೆ ಮೂಲಕ ಶು ದ್ಧ ನೀರನ್ನು ಪೂರೈಸಲಾಗುತ್ತಿತ್ತು. ಆಗಿನ ಕಾಲಕ್ಕೆ ಇಡೀ ರಾಜ್ಯದಲ್ಲಿ ಬೆಂಗಳೂರು, ಮೈಸೂರು ಬಿಟ್ಟರೆ ಈ ಊರಿನಲ್ಲಿಯೇ ಅಂತಹ ಏರ್ಪಾಡು ಇದ್ದದ್ದು. ಹಳೆಯ ಬಸ್ ಸ್ಟ್ಯಾಂಡ್ ಮತ್ತು ಟೌನ್ ಟೆನ್ನಿಸ್ ಕ್ಲಬ್ ಇರುವ ಜಾಗದಲ್ಲಿ ಇದಕ್ಕೆ ಏರ್ಪಾಡು ಮಾಡಲಾಗಿತ್ತು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…