ಆಂದೋಲನ 50

ನಂಜನಗೂಡು ಟೌನ್‌ ಆಗಿ ಗೆಜೆಟ್‌ನಲ್ಲಿ ಪ್ರಕಟ

1908ರ ಮಾರ್ಚ್‌ 28ರಂದು ಅಂದಿನ ಸರ್ಕಾರ ಗೆಜೆಟ್‌ ಪ್ರಕಟಣೆ ಹೊರಡಿಸಿ ನಂಜನಗೂಡನ್ನು ‘ಟೌನ್‌’ ಎಂದು ಕರೆದು, ಇಲ್ಲಿ ೧೫ ಸ ದಸ್ಯರ ಪುರಸಭೆಯ ವ್ಯವಸ್ಥೆಯನ್ನು ಜಾರಿಗೊಳಿಸಿತು. ಆಗಿನ ಕಾಲಕ್ಕೆ ಈ ಊರಿನಲ್ಲಿದ್ದ ಅನೇಕ ಗಣ್ಯ ವ್ಯಕ್ತಿಗಳು ಇದರ ಸದಸ್ಯರಾಗಿ ಎಲ್ಲ ಕಾಲಕ್ಕೂ ಆದರ್ಶವೆನ್ನಿಸುವ ರೀತಿಯಲ್ಲಿ ಸೇವೆ ಸಲ್ಲಿಸಿ ದಾರೆ. ಮೊದಲು ದಳವಾಯಿ ಕಟ್ಟಡ ದಲ್ಲಿಯೇ ಪುರಸಭೆಯ ಕಾರ್ಯಾಲಯ ಇತ್ತು. ಈಗಿನ ನಗರಸಭೆಯ ಕಟ್ಟಡವನ್ನು ಉ ದ್ಘಾಟಿಸಿ ದವರು ಮೈಸೂರಿನ ಮಹಾರಾಜರಾದ ಶ್ರೀ ಜಯಚಾಮ ರಾಜೇಂದ್ರ ಒಡೆಯರ್‌ ಅವರು. ಆದರೆ, ಆ ಸಮಯದಲ್ಲಿ ನಂಜನಗೂಡಿನಲ್ಲಿ ಕಾಲರಾ ಇದ್ದುದರಿಂದ ಮಹಾರಾಜರಿಗೆ ಆತಿಥ್ಯ ನೀಡುವ ಬಗ್ಗೆ ಸ್ವಲ್ಪ ಸಮಸ್ಯೆ ಉಂಟಾಯಿತು. ಕಡೆಗೆ, ಉದ್ಘಾಟನೆ ನಡೆ ದ ನಂತರ ಮಹಾರಾಜರಿಗೆ ಬೇಗೂರಿನ ಪ್ರವಾಸಿಮಂದಿರ ದಲ್ಲಿ ಭೋಜನಕ್ಕೆ ಏರ್ಪಾಡು ಮಾಡಲಾಗಿತ್ತು. ೧೯೦೦ರ ವೇಳೆಗೆ ನಂಜನಗೂಡಿನಲ್ಲಿ ಜ್ಯೂಯರ್‌ ವಾಟರ್‌ ಫಿಲ್ಟರ್‌ ವ್ಯವಸ್ಥೆ ಮೂಲಕ ಶು ದ್ಧ ನೀರನ್ನು ಪೂರೈಸಲಾಗುತ್ತಿತ್ತು. ಆಗಿನ ಕಾಲಕ್ಕೆ ಇಡೀ ರಾಜ್ಯದಲ್ಲಿ ಬೆಂಗಳೂರು, ಮೈಸೂರು ಬಿಟ್ಟರೆ ಈ ಊರಿನಲ್ಲಿಯೇ ಅಂತಹ ಏರ್ಪಾಡು ಇದ್ದದ್ದು. ಹಳೆಯ ಬಸ್‌ ಸ್ಟ್ಯಾಂಡ್‌ ಮತ್ತು ಟೌನ್‌ ಟೆನ್ನಿಸ್‌ ಕ್ಲಬ್‌ ಇರುವ ಜಾಗದಲ್ಲಿ ಇದಕ್ಕೆ ಏರ್ಪಾಡು ಮಾಡಲಾಗಿತ್ತು.

andolana

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

9 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

10 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

10 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

11 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

12 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

12 hours ago