ಆಂದೋಲನ 50

ನೆಲೆ ಕಾಣದ ಸಂತ್ರಸ್ತರು

ನಾಗರಹೊಳೆ ಮತ್ತು ಬಂಡೀಪುರ ಹುಲಿ ಸಂರಕ್ಷಿತ ತಾಣವಾಗಿ ಬದಲಾದ ಬಳಿಕ ಕಬಿನಿ ಸೇರಿದಂತೆ ಪ್ರವಾಸಿ ತಾಣಗಳ ಚಹರೆ ಸಂಪೂರ್ಣ ಬದಲಾಗಿದೆ. ವಿದೇಶಿಯರು, ಶ್ರೀಮಂತರು, ಅಧಿಕಾರಿಗಳು ಮತ್ತು ಪ್ರಭಾವಿಗಳಿಗೆ ಹತ್ತಿರವಾದ ತಾಣ ಜನ ಸಾಮಾನ್ಯರ ಪಾಲಿಗೆ ದೂರವಾಗುತ್ತಾ ಸಾಗಿದೆ. ಕಬಿನಿಯ ಆಕರ್ಷಣೆಗೆ ಮರುಳಾದ ದೇಶದ ನಾನಾ ಭಾಗದ ಸಿರಿವಂತರು ಇಲ್ಲಿನ ರೈತರ ಜಮೀನುಗಳನ್ನು ಖರೀದಿಸಿ ರೆಸಾರ್ಟ್‌ಗಳನ್ನು ಕಟ್ಟಿಕೊಂಡರು.

ಕಬಿನಿಗಾಗಿ ಅಂದು ನೆಲೆ ಕಳೆದುಕೊಂಡವರು, ಜಮೀನು ತ್ಯಾಗ ಮಾಡಿದ ಜನರ ಪಾಲಿಗೆ ಬದುಕು ಕಟ್ಟಿಕೊಳ್ಳಲು ಈ ರೆಸಾರ್ಟ್‌ಗಳು ನೆರವಾಗಲಿಲ್ಲ. ಅನ್ಯ ರಾಜ್ಯದ ಜನರ ದೌಲತ್ತಿನಲ್ಲಿ ಸಣ್ಣ ಪುಟ್ಟ ನೌಕರಿಯೂ ಇವರಿಗೆ ಲಭ್ಯವಾಗಲಿಲ್ಲ.

ಪ್ರವಾಸೋದ್ಯಮ ಮತ್ತು ಅದರ ವ್ಯವಸ್ಥೆಗಳು ಇಂದು ಕೇವಲ ಉನ್ನತ ಅಧಿಕಾರಿಗಳಿಗೆ, ರಾಜಕಾರಣಿಗಳಿಗೆ, ಜನಪ್ರತಿನಿಧಿಗಳಿಗೆ ಮೋಜು ಮಸ್ತಿಯ, ಗೂಢಾಲೋಚನೆಯ ತಾಣವಾಗಿ ಬದಲಾಗಿದೆ ಎನ್ನುವುದು ಕಣ್ಣಿಗೆ ಗೋಚರಿಸುವ ಸತ್ಯ. ಆದರೆ ಅಂದು ಪುನರ್ವಸತಿ ಹೆಸರಿನಲ್ಲಿ ಎತ್ತಂಗಡಿಯಾದ ಗ್ರಾಮಗಳು ೫೦ ವರ್ಷಗಳ ಬಳಿಕವೂ ಮೂಲಸೌಕರ್ಯಗಳಿಂದ ವಂಚಿತವಾಗಿವೆ. ಇಲ್ಲಿ ಶಿಕ್ಷಣ, ಆರೋಗ್ಯ, ನೀರು, ಸಾರಿಗೆ ಸಂಪರ್ಕ ಇನ್ನೂ ದೂರಾದ ಮಾತಾಗಿದೆ. ಇಲ್ಲಿಂದ ಸರಕಾರದ ಖಜಾನೆ ಸೇರುವ ಹಣದಲ್ಲಿ ಒಂದಿಷ್ಟು ಭಾಗ ಇಲ್ಲಿನವರ ಅಭಿವೃದ್ಧಿಗೆ ಪೂರಕವಾಗಿ ಖರ್ಚು ಮಾಡಿದರೆ ಅಂದಿನ ತ್ಯಾಗಕ್ಕೂ ಫಲ ಸಿಕ್ಕಂತಾಗುತ್ತದೆ. ಜೊತೆಗೆ ಸ್ಥಳೀಯರಿಗೆ ಸರಕಾರದ ಮೇಲೆ, ಅರಣ್ಯ ಇಲಾಖೆಯ ಮೇಲೆ ವಿಶ್ವಾಸ ಮೂಡಿಸಲಿದೆ ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯ.

ಕಬಿನಿ ಜಲಾಶಯದ ನಿರ್ಮಾಣದ ಹಂತದಲ್ಲಿ ಮುಳುಗಡೆಗೊಂಡ ೧೦-೧೨ ಗ್ರಾಮಗಳಿಗೆ ಪುನರ್ವಸತಿ ನೀಡಲಾಗಿದೆ. ಅಲ್ಲದೆ ಜಲಾಶಯದಿಂದ ಸ್ಥಳೀಯ ರೈತರಿಗೆ, ಗ್ರಾಮಗಳಿಗೆ ಸಾಕಷ್ಟು ಅನುಕೂಲಗಳಿವೆ. ಆದರೆ ಅಲ್ಲಿಂದ ಹೊರಬಂದ ಗ್ರಾಮಗಳಿಗೆ ಮಾತ್ರ ೫೦ ವರ್ಷಗಳು ಉರುಳಿದರೂ ಸರಿಯಾದ ಮೂಲಭೂತ ಸೌಕರ್ಯ ಮಾತ್ರ ಸಿಕ್ಕಿಲ್ಲ. ಈ ಬಗ್ಗೆ ಸರ್ಕಾರ ಚಿಂತಿಸಬೇಕಾದ ಅವಶ್ಯಕತೆ ಇದೆ. -ಜಯರಾಮೇಗೌಡ, ಹೊಸಮಾಳ ಗ್ರಾಮಸ್ಥರು.

andolana

Recent Posts

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

14 mins ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

48 mins ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

2 hours ago

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

2 hours ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

3 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

3 hours ago