ಆಂದೋಲನ 50

ನೆಲೆ ಕಾಣದ ಸಂತ್ರಸ್ತರು

ನಾಗರಹೊಳೆ ಮತ್ತು ಬಂಡೀಪುರ ಹುಲಿ ಸಂರಕ್ಷಿತ ತಾಣವಾಗಿ ಬದಲಾದ ಬಳಿಕ ಕಬಿನಿ ಸೇರಿದಂತೆ ಪ್ರವಾಸಿ ತಾಣಗಳ ಚಹರೆ ಸಂಪೂರ್ಣ ಬದಲಾಗಿದೆ. ವಿದೇಶಿಯರು, ಶ್ರೀಮಂತರು, ಅಧಿಕಾರಿಗಳು ಮತ್ತು ಪ್ರಭಾವಿಗಳಿಗೆ ಹತ್ತಿರವಾದ ತಾಣ ಜನ ಸಾಮಾನ್ಯರ ಪಾಲಿಗೆ ದೂರವಾಗುತ್ತಾ ಸಾಗಿದೆ. ಕಬಿನಿಯ ಆಕರ್ಷಣೆಗೆ ಮರುಳಾದ ದೇಶದ ನಾನಾ ಭಾಗದ ಸಿರಿವಂತರು ಇಲ್ಲಿನ ರೈತರ ಜಮೀನುಗಳನ್ನು ಖರೀದಿಸಿ ರೆಸಾರ್ಟ್‌ಗಳನ್ನು ಕಟ್ಟಿಕೊಂಡರು.

ಕಬಿನಿಗಾಗಿ ಅಂದು ನೆಲೆ ಕಳೆದುಕೊಂಡವರು, ಜಮೀನು ತ್ಯಾಗ ಮಾಡಿದ ಜನರ ಪಾಲಿಗೆ ಬದುಕು ಕಟ್ಟಿಕೊಳ್ಳಲು ಈ ರೆಸಾರ್ಟ್‌ಗಳು ನೆರವಾಗಲಿಲ್ಲ. ಅನ್ಯ ರಾಜ್ಯದ ಜನರ ದೌಲತ್ತಿನಲ್ಲಿ ಸಣ್ಣ ಪುಟ್ಟ ನೌಕರಿಯೂ ಇವರಿಗೆ ಲಭ್ಯವಾಗಲಿಲ್ಲ.

ಪ್ರವಾಸೋದ್ಯಮ ಮತ್ತು ಅದರ ವ್ಯವಸ್ಥೆಗಳು ಇಂದು ಕೇವಲ ಉನ್ನತ ಅಧಿಕಾರಿಗಳಿಗೆ, ರಾಜಕಾರಣಿಗಳಿಗೆ, ಜನಪ್ರತಿನಿಧಿಗಳಿಗೆ ಮೋಜು ಮಸ್ತಿಯ, ಗೂಢಾಲೋಚನೆಯ ತಾಣವಾಗಿ ಬದಲಾಗಿದೆ ಎನ್ನುವುದು ಕಣ್ಣಿಗೆ ಗೋಚರಿಸುವ ಸತ್ಯ. ಆದರೆ ಅಂದು ಪುನರ್ವಸತಿ ಹೆಸರಿನಲ್ಲಿ ಎತ್ತಂಗಡಿಯಾದ ಗ್ರಾಮಗಳು ೫೦ ವರ್ಷಗಳ ಬಳಿಕವೂ ಮೂಲಸೌಕರ್ಯಗಳಿಂದ ವಂಚಿತವಾಗಿವೆ. ಇಲ್ಲಿ ಶಿಕ್ಷಣ, ಆರೋಗ್ಯ, ನೀರು, ಸಾರಿಗೆ ಸಂಪರ್ಕ ಇನ್ನೂ ದೂರಾದ ಮಾತಾಗಿದೆ. ಇಲ್ಲಿಂದ ಸರಕಾರದ ಖಜಾನೆ ಸೇರುವ ಹಣದಲ್ಲಿ ಒಂದಿಷ್ಟು ಭಾಗ ಇಲ್ಲಿನವರ ಅಭಿವೃದ್ಧಿಗೆ ಪೂರಕವಾಗಿ ಖರ್ಚು ಮಾಡಿದರೆ ಅಂದಿನ ತ್ಯಾಗಕ್ಕೂ ಫಲ ಸಿಕ್ಕಂತಾಗುತ್ತದೆ. ಜೊತೆಗೆ ಸ್ಥಳೀಯರಿಗೆ ಸರಕಾರದ ಮೇಲೆ, ಅರಣ್ಯ ಇಲಾಖೆಯ ಮೇಲೆ ವಿಶ್ವಾಸ ಮೂಡಿಸಲಿದೆ ಎನ್ನುವುದು ಪ್ರಜ್ಞಾವಂತರ ಅಭಿಪ್ರಾಯ.

ಕಬಿನಿ ಜಲಾಶಯದ ನಿರ್ಮಾಣದ ಹಂತದಲ್ಲಿ ಮುಳುಗಡೆಗೊಂಡ ೧೦-೧೨ ಗ್ರಾಮಗಳಿಗೆ ಪುನರ್ವಸತಿ ನೀಡಲಾಗಿದೆ. ಅಲ್ಲದೆ ಜಲಾಶಯದಿಂದ ಸ್ಥಳೀಯ ರೈತರಿಗೆ, ಗ್ರಾಮಗಳಿಗೆ ಸಾಕಷ್ಟು ಅನುಕೂಲಗಳಿವೆ. ಆದರೆ ಅಲ್ಲಿಂದ ಹೊರಬಂದ ಗ್ರಾಮಗಳಿಗೆ ಮಾತ್ರ ೫೦ ವರ್ಷಗಳು ಉರುಳಿದರೂ ಸರಿಯಾದ ಮೂಲಭೂತ ಸೌಕರ್ಯ ಮಾತ್ರ ಸಿಕ್ಕಿಲ್ಲ. ಈ ಬಗ್ಗೆ ಸರ್ಕಾರ ಚಿಂತಿಸಬೇಕಾದ ಅವಶ್ಯಕತೆ ಇದೆ. -ಜಯರಾಮೇಗೌಡ, ಹೊಸಮಾಳ ಗ್ರಾಮಸ್ಥರು.

andolana

Recent Posts

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರಕ್ಕೆ ಜೈಲು ಶಿಕ್ಷೆ ಸ್ವಾಗತಾರ್ಹ

ಸಾಮಾಜಿಕ ಬಹಿಷ್ಕಾರ ಹಾಕಿದವರಿಗೆ ಜೈಲು ಶಿಕ್ಷೆ ಹಾಗೂ ಲಕ್ಷ ರೂ. ದಂಡವನ್ನು ವಿಧಿಸುವ ಮಸೂದೆಗೆ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆ…

35 mins ago

ಓದುಗರ ಪತ್ರ: ಬಿಎಂಟಿಸಿ ಜನಹಿತ ಕಾಯಲಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆರ್ಥಿಕ ನಷ್ಟದಿಂದ ಹೊರಬರಲು ಬಸ್‌ಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಈ…

56 mins ago

ಓದುಗರ ಪತ್ರ: ಸಾರ್ವಜನಿಕ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯ ಶಾಖೆಗೆ ಪ್ರತಿನಿತ್ಯ ಹಿರಿಯ ನಾಗರಿಕರು, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ…

59 mins ago

‘ಶಕ್ತಿ’ ಸ್ಕೀಮ್‌ನಿಂದ ಸಾರಿಗೆ ನಿಗಮಗಳಿಗೆ ನಿಶ್ಶಕ್ತಿ!

ನಿಗಮಗಳಿಗೆ ಸಕಾಲಕ್ಕೆ ಹಣ ಬಿಡುಗಡೆ ಮಾಡದ ಸರ್ಕಾರ; ಏದುಸಿರು ಬಿಡುತ್ತಿರುವ ನಿಗಮಗಳು ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ…

1 hour ago

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

6 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

6 hours ago